AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಡಿ ರೇವಣ್ಣ ಆಪ್ತ, ಗುತ್ತಿಗೆದಾರನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನ

ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರ ಆಪ್ತರೂ ಆಗಿರುವ ಪ್ರಥಮ ದರ್ಜೆ ಗುತ್ತಿಗೆದಾರನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ, ಸೂರನಹಳ್ಳಿ ಗ್ರಾಮದ ಬಳಿ ನಡೆದಿದೆ. ಕೆಲಕಾಲ ಎಚ್.ಡಿ.ರೇವಣ್ಣ ಅವರ ನಿವಾಸದಲ್ಲಿದ್ದು ಚನ್ನರಾಯಪಟ್ಟಣದ ತಮ್ಮ ನಿವಾಸಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ದಾಳಿ ನಡೆಸಲಾಗಿದೆ.

ಹೆಚ್​ಡಿ ರೇವಣ್ಣ ಆಪ್ತ, ಗುತ್ತಿಗೆದಾರನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನ
ಮಂಜುನಾಥ ಕೆಬಿ
| Edited By: Rakesh Nayak Manchi|

Updated on:Oct 10, 2023 | 10:56 PM

Share

ಹಾಸನ, ಅ.10: ಮಾಜಿ ಸಚಿವ ಹೆಚ್​ಡಿ ರೇವಣ್ಣ (H.D.Revanna) ಅವರ ಆಪ್ತರೂ ಆಗಿರುವ ಪ್ರಥಮ ದರ್ಜೆ ಗುತ್ತಿಗೆದಾರನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ, ಸೂರನಹಳ್ಳಿ ಗ್ರಾಮದ ಬಳಿ ನಡೆದಿದೆ. ಎಚ್.ಡಿ.ರೇವಣ್ಣ ಅವರ ನಿವಾಸದಿಂದ ಚನ್ನರಾಯಪಟ್ಟಣದ ತಮ್ಮ ನಿವಾಸಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ದಾಳಿ ನಡೆಸಲಾಗಿದೆ.

ಇಂದು ಸಂಜೆ ಹಾಸನದಿಂದ ಎಚ್.ಡಿ.ರೇವಣ್ಣ ಅವರ ಜೊತೆ ಹೊಳೆನರಸೀಪುರದ ಮನೆಗೆ ತೆರಳಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಅಶ್ವಥ್ ಗೌಡ, ಕೆಲಕಾಲ ಅವರ ನಿವಾಸದಲ್ಲಿದ್ದರು. ಬಳಿಕ ಚನ್ನರಾಯಪಟ್ಟಣದ ತಮ್ಮ ನಿವಾಸಕ್ಕೆ ಫಾರ್ಚೂನರ್ ಕಾರಿನಲ್ಲಿ ತೆರಳಿದ್ದಾರೆ.

ಇದನ್ನೂ ಓದಿ: Israel-Hamas War: ಹಮಾಸ್ ಭಯೋತ್ಪಾದಕರ ದಾಳಿ: ಇಸ್ರೇಲ್​ನಲ್ಲಿ ಸಿಲುಕಿದ ಹಾಸನದ 20 ಮಂದಿ

ಈ ವಿಚಾರ ತಿಳಿದ ಐದಾರು ಮಂದಿ ಇದ್ದ ದುಷ್ಕರ್ಮಿಗಳ ತಂಡ, ಸೂರನಹಳ್ಳಿ ಗ್ರಾಮದ ಹಂಪ್ಸ್ ಬಳಿ ಕಾರಿನ ಮೇಲೆ ದಾಳಿ ನಡೆಸಿದ್ದಾರೆ. ಕಾರಿನ ಗ್ಲಾಸ್ ಮೇಲೆ ಕಲ್ಲು ಎತ್ತಿಹಾಕಿ ಮಾರಕಾಸ್ತ್ರಗಳಿಂದ ಕೊಲೆ ಮಾಡಲು ಮುಂದಾಗಿದ್ದಾರೆ.

ಕೂಡಲೇ ಕಾರು ಹಿಂದಕ್ಕೆ ತೆಗೆದು 150 ಕಿಲೋಮೀಟರ್ ವೇಗದಲ್ಲಿ ಕಾರು ಚಲಾಯಿಸಿ ತಪ್ಪಿಸಿಕೊಂಡಿದ್ದಾರೆ. ಆದರೂ ಬೆನ್ನು ಬಿಡದ ದುಷ್ಕರ್ಮಿಗಳು, ಮೂಡಲಹಿಪ್ಪೆ ಗ್ರಾಮದವರೆಗೂ ಅಶ್ವಥ್ ಅವರನ್ನು ಹಿಂಬಾಲಿಸಿದ್ದಾರೆ. ಘಟನೆ ಸಂಬಂಧ ಅಶ್ವಥ್ ಅವರು ಚನ್ನರಾಯಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇತ್ತ, ಆಪ್ತನ ಮೇಲೆ ದಾಳಿ ನಡೆಸಿದ ಬಗ್ಗೆ ಮಾಹಿತಿ ತಿಳಿದ ರೇವಣ್ಣ ಅವರು ಅಶ್ವಥ್ ಅವರನ್ನ ಭೇಟಿಯಾಗಿ ವಿಚಾರಿಸಿದ್ದಾರೆ.

ರೇವಣ್ಣ ಆಪ್ತರ ಟಾರ್ಗೆಟ್

ದುಷ್ಕರ್ಮಿಗಳು ಪದೇಪದೆ ರೇವಣ್ಣ ಅವರ ಆಪ್ತರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಆಗಸ್ಟ್ 9 ರಂದು ರೇವಣ್ಣ ಅವರ ಆಪ್ತ ಕೃಷ್ಣೇಗೌಡ ಅವರನ್ನು ಕೊಲೆ ಮಾಡಲಾಗಿತ್ತು. ಇವರು ಗ್ರಾನೈಟ್ ಉದ್ಯಮಿ ಮತ್ತು ಗುತ್ತಿಗೆದಾರರಾಗಿದ್ದರು. ಇಂದು ಮತ್ತೊಬ್ಬ ಆಪ್ತ ಹಾಗೂ ಗುತ್ತಿಗೆದಾರನ ಮೇಲೆ ದಾಳಿ ನಡೆದಿದ್ದು, ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಅಶ್ವತ್ಥ್‌ ಗೌಡ ಕೊಲೆಗೆ ಯತ್ನ ಪ್ರಕರಣ ಸಂಬಂಧ ಚನ್ನರಾಯಪಟ್ಟಣದಲ್ಲಿ ಮಾತನಾಡಿದ ಎಸ್‌ಪಿ ಮೊಹಮ್ಮದ್‌ ಸುಜಿತಾ, ರಾತ್ರಿ 8.30ರ ಸಮಯದಲ್ಲಿ ದುಷ್ಕರ್ಮಿಗಳ ಗುಂಪು ಹತ್ಯೆಗೆ ಯತ್ನಿಸಿದೆ. ಕಾರಿಗೆ ಕಲ್ಲು ಎಸೆದು ಹಲ್ಲೆಗೆ ಮುಂದಾಗಿದ್ದಾರೆ. ಯಾರು ದಾಳಿ ಮಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಘಟನೆ ಬಗ್ಗೆ ಮಾಹಿತಿ ಪಡೆದು ತಿಳಿಸುತ್ತೇನೆ. ಗುತ್ತಿಗೆದಾರ ಅಶ್ವತ್ಥ್‌ ಗೌಡ ಅವರಿಗೆ ಸೂಕ್ತ ರಕ್ಷಣೆಯನ್ನು ನೀಡುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:59 pm, Tue, 10 October 23

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ