AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MLA Preetham Gowda: ಕಲ್ಲಿನಿಂದ ಹೊಡೆದು ಶಾಸಕ ಪ್ರೀತಂಗೌಡ ಭಾವಚಿತ್ರ ಹಾನಿ

ಉದ್ಘಾಟನೆಗೆ ಸಿದ್ಧಗೊಂಡಿದ್ದ ಫುಡ್ ಕೋರ್ಟ್ ಬೋರ್ಡ್ನಲ್ಲಿದ್ದ ಶಾಸಕ ಪ್ರೀತಂಗೌಡರ ಭಾವ ಚಿತ್ರಕ್ಕೆ ಕಿಡಿಗೇಡಿಗಳು ಕಲ್ಲಿನಿಂದ ಹೊಡೆದು ಹಾನಿ ಮಾಡಿದ್ದಾರೆ. ಐದು ಭಾವಚಿತ್ರದ ಬೋರ್ಡ್ನಲ್ಲಿ ಎರಡು ಭಾವಚಿತ್ರಕ್ಕೆ ಹಾನಿಯಾಗಿದೆ.

MLA Preetham Gowda: ಕಲ್ಲಿನಿಂದ ಹೊಡೆದು ಶಾಸಕ ಪ್ರೀತಂಗೌಡ ಭಾವಚಿತ್ರ ಹಾನಿ
ಕಲ್ಲಿನಿಂದ ಹೊಡೆದು ಶಾಸಕ ಪ್ರೀತಂಗೌಡ ಭಾವಚಿತ್ರ ಹಾನಿ
TV9 Web
| Edited By: |

Updated on:Jan 03, 2022 | 9:44 AM

Share

ಹಾಸನ: ಕಲ್ಲಿನಿಂದ ಹೊಡೆದು ಶಾಸಕ ಪ್ರೀತಂಗೌಡ ಭಾವಚಿತ್ರ ಹಾನಿ ಮಾಡಿರುವ ಕೃತ್ಯ ಹಾಸನ ನಗರದ ಎಂ.ಜಿ.ರಸ್ತೆಯಲ್ಲಿ ನಡೆದಿದೆ. ಹಾಸನದ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಕಿಡಿಗೇಡಿಗಳು ಶಾಸಕ ಪ್ರೀತಂಗೌಡ ಭಾವಚಿತ್ರ ಹಾನಿ ಮಾಡಿ ಎಸ್ಕೇಪ್ ಆಗಿದ್ದಾರೆ.

ಹಾಸನ ನಗರದಲ್ಲಿ ಉದ್ಘಾಟನೆಗೆ ಸಿದ್ದವಾಗಿದ್ದ ಎಂಜಿ ರಸ್ತೆಯ ಫುಡ್ ಕೋರ್ಟ್ ನಲ್ಲಿ ಅಳವಡಿಸಲಾಗಿದ್ದ ಬೋರ್ಡ್ ಗೆ ಹಾನಿ ಮಾಡಿರುವ ಕಿಡಿಗೇಡಿಗಳು ಅದರಲ್ಲಿದ್ದ ಶಾಸಕ ಪ್ರೀತಂಗೌಡ ಭಾವಚಿತ್ರವನ್ನು ಒಡೆದು ಹಾಕಿದ್ದಾರೆ. ನೆನ್ನೆ ರಾತ್ರಿ ಕಿಡಿಗೇಡಿಗಳು ಶಾಸಕರ ಭಾವಚಿತ್ರ ಹಾನಿಗೊಳಿಸಿದ್ದು ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸುಮಾರು ನೂರು ಮೀಟರ್ ಉದ್ದಕ್ಕೆ ನಗರದ ಮಹಾತ್ಮ ಗಾಂದಿ ರಸ್ತೆಯಲ್ಲಿ ಫುಡ್ ಕೋರ್ಟ್ ನಿರ್ಮಾಣ ಮಾಡಲಾಗಿದೆ. ನಗರದ ವಿವಿಧೆಡೆ ಬೀದಿ ಬದಿಯಲ್ಲಿ ಅಹಾರ ಪದಾರ್ಥ ಮಾರಾಟ ಮಾಡೋ ಸಣ್ಣ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈಗಾಗಲೇ ನಗರದ ಸಾಲಗಾಮೆ ರಸ್ತೆಯಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಒಳಗೊಂಡ ಅತ್ಯಾಧುನಿಕ ಫುಡ್ ಕೋರ್ಟ್ ನಿರ್ಮಾಣ ಅಗಿದೆ.

ಇದೆ ಮಾದರಿಯಲ್ಲಿ ಎಂಜಿ ರಸ್ತೆಯಲ್ಲೂ ಫುಡ್ ಕೋರ್ಟ್ ನಿರ್ಮಾಣ ಕಾಮಗಾರಿ ಬಹುತೇಕ ಮುಗಿದಿದ್ದು ಉದ್ಘಾಟನೆಗೆ ರೆಡಿಯಾಗಿದೆ. ನೆರಳು, ನೀರು, ಸುಸಜ್ಜಿತ ವ್ಯವಸ್ಥೆಯೊಂದಿಗೆ ಒಂದೇ ಕಡೆ ಜನರಿಗೆ ಅನುಕೂಲ ಆಗೋ ನಿಟ್ಟಿನ ಯೋಜನೆ ಉದ್ಘಾಟನೆಗೂ ಮುನ್ನವೇ ಐದು ಕಡೆ ಅಳವಡಿಸಿರೋ ಭಾವಚಿತ್ರ ಸಹಿತ ಬೋರ್ಡ್​ಗೆ ಎರಡು ಕಡೆ ಕಲ್ಲೆಸೆದಿರೋ ಕಿಡಿಗೇಡಿಗಳು ಶಾಸಕ ಪ್ರೀತಂಗೌಡ ಭಾವಚಿತ್ರ ಹಾನಿಗೊಳಿಸಿದ್ದಾರೆ. ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕರು ಇದು ಅಭಿವೃದ್ಧಿ ಸಹಿಸದ ವಿಪಕ್ಷ ನಾಯಕರ ಹಾಗು ಕಾರ್ಯಕರ್ತರ ಕೃತ್ಯ ಎಂದು ಅಸಮದಾನ ಹೊರ ಹಾಕಿ ದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡುವುದಾಗಿ ಎಚ್ಚರಿಸಿದ್ದಾರೆ.

ಇನ್ನು ಈ ಕೃತ್ಯದ ಬಗ್ಗೆ ಮಾತನಾಡಿದ ಬಿಜೆಪಿ ನಗರ ಮಂಡಲ ಅಧ್ಯಕ್ಷ ವೇಣುಗೋಪಾಲ್, ಹಾಸನದಲ್ಲಿ ಪ್ರೀತಂಗೌಡರು ಶಾಸಕರಾದ ಬಳಿಕ ಅಭಿವೃದ್ಧಿ ಕಾರ್ಯಗಳು ಹೆಚ್ಚಾಗಿವೆ. ನಗರದಲ್ಲಿ ಎಲ್ಲೆಡೆ ಪ್ರಗತಿ ಆಗುತ್ತಿದೆ ಇದನ್ನು ಸಹಿಸದ ವಿರೋಧ ಪಕ್ಷದವರ ಕೃತ್ಯ ಇದು ಎನ್ನೋ ಅನುಮಾನ ಇದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡುತ್ತೇವೆ. ಯಾರೇ ಈ ಕೃತ್ಯ ಎಸಗಿದ್ದರೂ ಅವರ ವಿರುದ್ಧವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

preetham gowda

ಕಲ್ಲಿನಿಂದ ಹೊಡೆದು ಶಾಸಕ ಪ್ರೀತಂಗೌಡ ಭಾವಚಿತ್ರ ಹಾನಿ

ಇದನ್ನೂ ಓದಿ: ಪಾಕ್​ ಪ್ರಧಾನಿ ಇಮ್ರಾನ್ ಖಾನ್​ ಪತ್ನಿ ಮೇಲೆ ಗುಂಡಿನ ದಾಳಿ; ಮಾಜಿ ಪತಿಯನ್ನು ಟೀಕಿಸಿ, ಹೇಡಿಗಳ ರಾಜ್ಯವೆಂದ ರೇಹಮ್​ ಖಾನ್​

Published On - 9:36 am, Mon, 3 January 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?