AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪು ಸುಂದರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು; ಹಾಸನದಲ್ಲಿ ಲಕ್ಷಾಂತರ ರೂ. ಮೌಲ್ಯದ ಟೊಮೇಟೊ ಕಳ್ಳತನ

ಸೋಮನಹಳ್ಳಿ ಗ್ರಾಮದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಟೊಮೇಟೊ ಕಳ್ಳತನವಾಗಿದೆ. ಐವತ್ತರಿಂದ ಅರವತ್ತು ಬ್ಯಾಗ್‌ನಷ್ಟು ಟೊಮೇಟೊವನ್ನು ಖದೀಮರು ಕದ್ದು ಪರಾರಿಯಾಗಿದ್ದಾರೆ.

ಕೆಂಪು ಸುಂದರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು; ಹಾಸನದಲ್ಲಿ ಲಕ್ಷಾಂತರ  ರೂ. ಮೌಲ್ಯದ ಟೊಮೇಟೊ ಕಳ್ಳತನ
ಟೊಮ್ಯಾಟೊ
Follow us
TV9 Web
| Updated By: ಆಯೇಷಾ ಬಾನು

Updated on: Jul 05, 2023 | 11:00 AM

ಹಾಸನ: ರಾಜ್ಯದಲ್ಲಿ ಕೆಂಪು ಸುಂದರಿ ಟೊಮೇಟೊ ಬೆಲೆ ಗಗನಕ್ಕೇರಿದೆ(Tomato Rate Increased). ಯಾವ ಜಿಲ್ಲೆಗೆ ಹೋದರೂ 100 ರೂಪಾಯಿಗಿಂತ ಕಡಿಮೆ ಇಲ್ಲ. ಹೀಗಾಗಿ ಖದೀಮರು ಟೊಮೇಟೊ ಕಳ್ಳತನಕ್ಕೆ ಮುಂದಾಗಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಗೋಣಿ ಸೋಮನಹಳ್ಳಿ ಗ್ರಾಮದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಟೊಮೇಟೊ ಕಳ್ಳತನವಾಗಿದೆ(Tomato Theft). ಐವತ್ತರಿಂದ ಅರವತ್ತು ಬ್ಯಾಗ್‌ನಷ್ಟು ಟೊಮೇಟೊವನ್ನು ಖದೀಮರು ಕದ್ದು ಪರಾರಿಯಾಗಿದ್ದಾರೆ.

ಗ್ರಾಮದ ಧರಣಿ ಎಂಬುವವರು ತಮ್ಮ ಜಮೀನಿನಲ್ಲಿ ಟೊಮೇಟೊ ಬೆಳೆದಿದ್ದರು. ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇರುವುದುರಿಂದ ಒಳ್ಳೆಯ ಲಾಭ ಬರುತ್ತೆ ಎಂಬ ಆಸೆಯಲ್ಲಿದ್ದರು. ಆದ್ರೆ ಕಳೆದ ರಾತ್ರಿ ಹೊಲಕ್ಕೆ ನುಗ್ಗಿರುವ ಕೆಲ ಕಳ್ಳರು ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಮೌಲ್ಯದ ಟೊಮೇಟೊ ಕಳ್ಳತನ ಮಾಡಿದ್ದಾರೆ. ಇಂದು ಬೆಳಿಗ್ಗೆ ಧರಣಿ ಅವರು ತಮ್ಮ ಜಮೀನಿನ ಬಳಿ ಹೋದಾಗ ಟೊಮೇಟೊ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಹಳೇಬೀಡು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಕ್ಷಾಂತರ ಮೌಲ್ಯದ ಟೊಮೇಟೊ ಕಳೆದುಕೊಂಡು ರೈತ ಧರಣಿ ಕಂಗಾಲಾಗಿದ್ದಾರೆ.

ಇದನ್ನೂ ಓದಿ: Haveri News: ಟೊಮೆಟೊಗೆ ಭರ್ಜರಿ ಬೆಲೆ; ಕಳವು ಪತ್ತೆಗೆ ಸಿಸಿಟಿವಿ ಅಳವಡಿಸಿದ ಅಕ್ಕಿ ಆಲೂರ ವ್ಯಾಪಾರಿ

ಕೆಲ ವರ್ಷದ ಹಿಂದೆ ಈರುಳ್ಳಿ ಬೆಲೆ ಕೂಡ ಇದೇ ರೀತಿ ಏರಿಕೆಯಾಗಿತ್ತು. ಆಗ ಕೂಡ ಖದೀಮರು ಈರುಳ್ಳಿ ಕದ್ದು ಹಣ ಮಾಡಿದ್ದರು. ಅಲ್ಲದೆ ಮದುವೆಗೆ ಬಂದವರು ವರ-ವಧುವಿಗೆ ಈರುಳ್ಳಿ ಗಿಫ್ಟ್ ನೀಡೋದು ಟ್ರೆಂಟ್ ಆಗಿತ್ತು. ರೈತರು ತಾವು ಬೆಳೆದ ಈರುಳ್ಳಿ ಕಾಪಾಡಲು ನಿದ್ದೆ ಇಲ್ಲದೆ ಹಗಲು-ರಾತ್ರಿ ಕಾಯುತ್ತಿದ್ದರು. ಸದ್ಯ ಈಗ ಇದೇ ಪರಿಸ್ಥಿತಿ ಟೊಮೇಟೊಗೆ ಬಂದಿದೆ. 10ರೂ, 20ರೂಪಾಯಿಗೆ ಬರುತ್ತಿದ್ದ ಟೊಮೇಟೊ ಈಗ ನೂರರ ಗಡಿದಾಟಿದೆ. ಹೀಗಾಗಿ ಟೊಮೇಟೊ ರೈತರು ಕಳ್ಳರಿಂದ ತಮ್ಮ ಬೆಳೆ ಕಾಪಾಡಿಕೊಳ್ಳುವಂತಾಗಿದೆ.

ಇನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿ ಆಲೂರ ಗ್ರಾಮದ ಮಾರುಕಟ್ಟೆಯಲ್ಲಿ ಕೃಷ್ಣಪ್ಪ ಎಂಬ ವ್ಯಾಪಾರಿಯೊಬ್ಬರು ಮಾರಾಟಕ್ಕೆ ತಂದ ಟೊಮೇಟೊ ಕಳ್ಳತನವಾಗಬಾರದೆಂದು ಸಿಸಿಟಿವಿ ಅಳವಡಿಸಿದ್ದಾರೆ. ತರಕಾರಿ ಖರೀದಿಸಲು ಬರುವ ಗ್ರಾಹಕರು ಕಣ್ತಪ್ಪಿಸಿ ಮೂರು-ನಾಲ್ಕು ಟೊಮೇಟೊಗಳನ್ನು ತೆಗೆದುಕೊಂಡು ಹೋಗುತ್ತಾರೆ. ಹೀಗಾಗಿ ಸಿಸಿಟಿವಿ ಅಳವಡಿಸಿದ್ದೇನೆ ಎಂದು ಕೃಷ್ಣಪ್ಪ ತಿಳಿಸಿದ್ದಾರೆ.

ಹಾಸನಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!