AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪು ಸುಂದರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು; ಹಾಸನದಲ್ಲಿ ಲಕ್ಷಾಂತರ ರೂ. ಮೌಲ್ಯದ ಟೊಮೇಟೊ ಕಳ್ಳತನ

ಸೋಮನಹಳ್ಳಿ ಗ್ರಾಮದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಟೊಮೇಟೊ ಕಳ್ಳತನವಾಗಿದೆ. ಐವತ್ತರಿಂದ ಅರವತ್ತು ಬ್ಯಾಗ್‌ನಷ್ಟು ಟೊಮೇಟೊವನ್ನು ಖದೀಮರು ಕದ್ದು ಪರಾರಿಯಾಗಿದ್ದಾರೆ.

ಕೆಂಪು ಸುಂದರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು; ಹಾಸನದಲ್ಲಿ ಲಕ್ಷಾಂತರ  ರೂ. ಮೌಲ್ಯದ ಟೊಮೇಟೊ ಕಳ್ಳತನ
ಟೊಮ್ಯಾಟೊ
TV9 Web
| Edited By: |

Updated on: Jul 05, 2023 | 11:00 AM

Share

ಹಾಸನ: ರಾಜ್ಯದಲ್ಲಿ ಕೆಂಪು ಸುಂದರಿ ಟೊಮೇಟೊ ಬೆಲೆ ಗಗನಕ್ಕೇರಿದೆ(Tomato Rate Increased). ಯಾವ ಜಿಲ್ಲೆಗೆ ಹೋದರೂ 100 ರೂಪಾಯಿಗಿಂತ ಕಡಿಮೆ ಇಲ್ಲ. ಹೀಗಾಗಿ ಖದೀಮರು ಟೊಮೇಟೊ ಕಳ್ಳತನಕ್ಕೆ ಮುಂದಾಗಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಗೋಣಿ ಸೋಮನಹಳ್ಳಿ ಗ್ರಾಮದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಟೊಮೇಟೊ ಕಳ್ಳತನವಾಗಿದೆ(Tomato Theft). ಐವತ್ತರಿಂದ ಅರವತ್ತು ಬ್ಯಾಗ್‌ನಷ್ಟು ಟೊಮೇಟೊವನ್ನು ಖದೀಮರು ಕದ್ದು ಪರಾರಿಯಾಗಿದ್ದಾರೆ.

ಗ್ರಾಮದ ಧರಣಿ ಎಂಬುವವರು ತಮ್ಮ ಜಮೀನಿನಲ್ಲಿ ಟೊಮೇಟೊ ಬೆಳೆದಿದ್ದರು. ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇರುವುದುರಿಂದ ಒಳ್ಳೆಯ ಲಾಭ ಬರುತ್ತೆ ಎಂಬ ಆಸೆಯಲ್ಲಿದ್ದರು. ಆದ್ರೆ ಕಳೆದ ರಾತ್ರಿ ಹೊಲಕ್ಕೆ ನುಗ್ಗಿರುವ ಕೆಲ ಕಳ್ಳರು ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಮೌಲ್ಯದ ಟೊಮೇಟೊ ಕಳ್ಳತನ ಮಾಡಿದ್ದಾರೆ. ಇಂದು ಬೆಳಿಗ್ಗೆ ಧರಣಿ ಅವರು ತಮ್ಮ ಜಮೀನಿನ ಬಳಿ ಹೋದಾಗ ಟೊಮೇಟೊ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಹಳೇಬೀಡು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಕ್ಷಾಂತರ ಮೌಲ್ಯದ ಟೊಮೇಟೊ ಕಳೆದುಕೊಂಡು ರೈತ ಧರಣಿ ಕಂಗಾಲಾಗಿದ್ದಾರೆ.

ಇದನ್ನೂ ಓದಿ: Haveri News: ಟೊಮೆಟೊಗೆ ಭರ್ಜರಿ ಬೆಲೆ; ಕಳವು ಪತ್ತೆಗೆ ಸಿಸಿಟಿವಿ ಅಳವಡಿಸಿದ ಅಕ್ಕಿ ಆಲೂರ ವ್ಯಾಪಾರಿ

ಕೆಲ ವರ್ಷದ ಹಿಂದೆ ಈರುಳ್ಳಿ ಬೆಲೆ ಕೂಡ ಇದೇ ರೀತಿ ಏರಿಕೆಯಾಗಿತ್ತು. ಆಗ ಕೂಡ ಖದೀಮರು ಈರುಳ್ಳಿ ಕದ್ದು ಹಣ ಮಾಡಿದ್ದರು. ಅಲ್ಲದೆ ಮದುವೆಗೆ ಬಂದವರು ವರ-ವಧುವಿಗೆ ಈರುಳ್ಳಿ ಗಿಫ್ಟ್ ನೀಡೋದು ಟ್ರೆಂಟ್ ಆಗಿತ್ತು. ರೈತರು ತಾವು ಬೆಳೆದ ಈರುಳ್ಳಿ ಕಾಪಾಡಲು ನಿದ್ದೆ ಇಲ್ಲದೆ ಹಗಲು-ರಾತ್ರಿ ಕಾಯುತ್ತಿದ್ದರು. ಸದ್ಯ ಈಗ ಇದೇ ಪರಿಸ್ಥಿತಿ ಟೊಮೇಟೊಗೆ ಬಂದಿದೆ. 10ರೂ, 20ರೂಪಾಯಿಗೆ ಬರುತ್ತಿದ್ದ ಟೊಮೇಟೊ ಈಗ ನೂರರ ಗಡಿದಾಟಿದೆ. ಹೀಗಾಗಿ ಟೊಮೇಟೊ ರೈತರು ಕಳ್ಳರಿಂದ ತಮ್ಮ ಬೆಳೆ ಕಾಪಾಡಿಕೊಳ್ಳುವಂತಾಗಿದೆ.

ಇನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿ ಆಲೂರ ಗ್ರಾಮದ ಮಾರುಕಟ್ಟೆಯಲ್ಲಿ ಕೃಷ್ಣಪ್ಪ ಎಂಬ ವ್ಯಾಪಾರಿಯೊಬ್ಬರು ಮಾರಾಟಕ್ಕೆ ತಂದ ಟೊಮೇಟೊ ಕಳ್ಳತನವಾಗಬಾರದೆಂದು ಸಿಸಿಟಿವಿ ಅಳವಡಿಸಿದ್ದಾರೆ. ತರಕಾರಿ ಖರೀದಿಸಲು ಬರುವ ಗ್ರಾಹಕರು ಕಣ್ತಪ್ಪಿಸಿ ಮೂರು-ನಾಲ್ಕು ಟೊಮೇಟೊಗಳನ್ನು ತೆಗೆದುಕೊಂಡು ಹೋಗುತ್ತಾರೆ. ಹೀಗಾಗಿ ಸಿಸಿಟಿವಿ ಅಳವಡಿಸಿದ್ದೇನೆ ಎಂದು ಕೃಷ್ಣಪ್ಪ ತಿಳಿಸಿದ್ದಾರೆ.

ಹಾಸನಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ