ಜೆಡಿಎಸ್​ ಜತೆ ಹೊಂದಾಣಿಕೆ ರಾಜಕೀಯ ಮಾಡಿದರೆ ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸಿಕೊಂಡು ಇದ್ದುಬಿಡುತ್ತೇನೆ: ಶಾಸಕ ಪ್ರೀತಂಗೌಡ ಕಿಡಿಕಿಡಿ

Karnataka Politics: ನೀವು ಅಡ್ಜೆಸ್ಟ್‌ಮೆಂಟ್ ಮಾಡಿಕೊಳ್ಳಿ ಎಂದು ಹೇಳುತ್ತೀರಿ. ಹೀಗೆ ಅಡ್ಜೆಸ್ಟ್‌ಮೆಂಟ್ ಮಾಡಿಕೊಂಡರೆ ಕಷ್ಟವಾಗುತ್ತದೆ. ದಿನ ಬೆಳಗಾದ್ರೆ ನಮ್ಮ ಮನೆಗೆ ಕಲ್ಲು ಹೊಡಿಸಿಕೊಳ್ಳುತ್ತೇವೆ. ಕಾರ್ಯಕರ್ತರು ಹೇಗೆ ಚುನಾವಣೆ ಎದುರಿಸುತ್ತಾರೆ? ಎಂದು ಶಾಸಕ ಪ್ರೀತಂಗೌಡ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ  ಕಿಡಿಕಾರಿದ್ದಾರೆ.

ಜೆಡಿಎಸ್​ ಜತೆ ಹೊಂದಾಣಿಕೆ ರಾಜಕೀಯ ಮಾಡಿದರೆ ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸಿಕೊಂಡು ಇದ್ದುಬಿಡುತ್ತೇನೆ: ಶಾಸಕ ಪ್ರೀತಂಗೌಡ ಕಿಡಿಕಿಡಿ
ಪ್ರೀತಂಗೌಡ
Follow us
| Updated By: guruganesh bhat

Updated on: Aug 07, 2021 | 3:11 PM

ಹಾಸನ: ಹೊಂದಾಣಿಕೆ ರಾಜಕೀಯ ಮಾಡುವುದಕ್ಕೆ ನಾನು ಬಿಡುವುದಿಲ್ಲ. ಆದರೂ ಹೊಂದಾಣಿಕೆ ರಾಜಕೀಯ ಮಾಡಿದರೆ ನಾನು ಮತದಾರನಾಗಿ ಮನೆಯಲ್ಲಿಯೇ ಇದ್ದುಬಿಡುತ್ತೇನೆ. ಇಲ್ಲವೇ ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸಿಕೊಂಡು ಇದ್ದುಬಿಡುತ್ತೇನೆ. ಸಿಎಂ ನಡೆಯಿಂದ ಬಿಜೆಪಿ ಕಾರ್ಯಕರ್ತರಿಗೆ ನೋವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಮನೆಗೆ ಭೇಟಿ ನೀಡಿದ್ದರ ಬಗ್ಗೆ ಶಾಸಕ ಪ್ರೀತಂಗೌಡ ಅಸಮಧಾನ ವ್ಯಕ್ತಪಡಿಸಿದರು.

ಹೊಂದಾಣಿಕೆ ರಾಜಕಾರಣ ಮಾಡಲು ಯತ್ನಿಸಿದರೆ ಈ ಬಗ್ಗೆ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿಯಾಗುತ್ತೇನೆ. ಅಗತ್ಯಬಿದ್ದರೆ ದೆಹಲಿಗೂ ಹೋಗುತ್ತೇನೆ ಎಂದು ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ನೇರ ಎಚ್ಚರಿಕೆ ನೀಡಿದ್ದಾರೆ.

ನಾವು ಇಲ್ಲಿ ಹೊಡೆದಾಡಿ ಪಕ್ಷವನ್ನು ಸಂಘಟಿಸುತ್ತೇವೆ. ಜೆಡಿಎಸ್‌ನವರಿಗೇಕೆ ಅಡ್ಜೆಸ್ಟ್ ಮಾಡಿಕೊಳ್ಳಲು ಹೇಳುತ್ತೀರಿ? ನನಗೆ, ನಮ್ಮ ಕಾರ್ಯಕರ್ತರಿಗೇ ಈ ಮಾತನ್ನು ಹೇಳಿ. ನಾವೇ ಅಡ್ಜೆಸ್ಟ್‌ಮೆಂಟ್ ಮಾಡಿಕೊಂಡು ಹೋಗುತ್ತೇವೆ. ಜೆಡಿಎಸ್ ಜತೆ ರಾಜಿ ಮಾಡಿಕೊಳ್ತೇವೆ ಎಂದು ಹೇಳಿ, ನಾವು ಕೂಡ ರಾಜಿ ಮಾಡಿಕೊಂಡು ಹೋಗುತ್ತೇವೆ ಎಂದು ಅವರು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ನೇರಾನೇರ ಗುಡುಗಿದರು.

ನೀವು ಅಡ್ಜೆಸ್ಟ್‌ಮೆಂಟ್ ಮಾಡಿಕೊಳ್ಳಿ ಎಂದು ಹೇಳುತ್ತೀರಿ. ಹೀಗೆ ಅಡ್ಜೆಸ್ಟ್‌ಮೆಂಟ್ ಮಾಡಿಕೊಂಡರೆ ಕಷ್ಟವಾಗುತ್ತದೆ. ದಿನ ಬೆಳಗಾದ್ರೆ ನಮ್ಮ ಮನೆಗೆ ಕಲ್ಲು ಹೊಡಿಸಿಕೊಳ್ಳುತ್ತೇವೆ. ಕಾರ್ಯಕರ್ತರು ಹೇಗೆ ಚುನಾವಣೆ ಎದುರಿಸುತ್ತಾರೆ? ಎಂದು ಶಾಸಕ ಪ್ರೀತಂಗೌಡ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ  ಕಿಡಿಕಾರಿದ್ದಾರೆ.

ಇದನ್ನೂ ಓದಿ: 

ದೇವೇಗೌಡರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ, ದೇವೇಗೌಡರಿಂದ ನೂತನ ಸಿಎಂಗೆ ಸನ್ಮಾನ

School Opening: 9, 10, 12ನೇ ತರಗತಿಗಳಿಗೆ ಶಾಲಾ ಕಾಲೇಜುಗಳು ಆಗಸ್ಟ್‌ 23ರಿಂದ ಆರಂಭ: ಬಸವರಾಜ ಬೊಮ್ಮಾಯಿ

(MLA Preetham Gowda says BJP Workers upset with CM Basavaraj Bommai visit Former PM HD Deve Gowda)

ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ