ಹಾಸನ ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಮನೆಗಳಿಗೆ ಹಾನಿ; 5 ಲಕ್ಷ ಪರಿಹಾರ ನೀಡುವುದಾಗಿ ಸಚಿವ ಕೆ.ಗೋಪಾಲಯ್ಯ ಭರವಸೆ

ಹಾಸನ ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಮನೆಗಳು ಮಳೆಯಿಂದ ಹಾನಿಗೊಳಗಾಗಿವೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅರಕಲಗೂಡು ತಾಲೂಕಿನ ಬಸನವಹಳ್ಳಿ ಗ್ರಾಮದಲ್ಲಿ ಹೇಳಿದ್ದಾರೆ.

ಹಾಸನ ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಮನೆಗಳಿಗೆ ಹಾನಿ;  5 ಲಕ್ಷ ಪರಿಹಾರ ನೀಡುವುದಾಗಿ ಸಚಿವ ಕೆ.ಗೋಪಾಲಯ್ಯ ಭರವಸೆ
ಸಚಿವ ಕೆ ಗೋಪಾಲಯ್ಯ
Edited By: ವಿವೇಕ ಬಿರಾದಾರ

Updated on: Jul 13, 2022 | 7:30 PM

ಹಾಸನ: ಹಾಸನ (Hassan) ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಮನೆಗಳು ಮಳೆಯಿಂದ (Rain) ಹಾನಿಗೊಳಗಾಗಿವೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ (K Gopalaiah) ಅರಕಲಗೂಡು (Arkalgud) ತಾಲೂಕಿನ ಬಸನವಹಳ್ಳಿ ಗ್ರಾಮದಲ್ಲಿ ಹೇಳಿದ್ದಾರೆ. ಮನೆ ಕಳೆದುಕೊಂಡವರಿಗೆ ತಕ್ಷಣ 10,000 ರೂಪಾಯಿ ಪರಿಹಾರ ನೀಡಿದ್ದಾರೆ. ಸಂಪೂರ್ಣ ಹಾನಿಯಾಗಿರುವ ಮನೆಗಳಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಭಾಗಶಃ ಹಾನಿಯಾದ ಮನೆಗಳಿಗೆ 3 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದರು.

ಹೊಳೆನರಸೀಪುರ, ಅರಕಲಗೂಡು ತಾಲೂಕಿನಲ್ಲಿ ಹೆಚ್ಚಿನ ಮನೆಗಳಿಗೆ ಹಾನಿಯಾಗಿವೆ. ಮಳೆಯಿಂದ ಹಾನಿಯಾದ ತಂಬಾಕು, ಶೇಂಗಾ, ಆಲೂಗಡ್ಡೆ ಬೆಳೆ ಬಗ್ಗೆ ವರದಿ ಪಡೆದಿದ್ದೇನೆ. ವರದಿ ಪರಿಶೀಲಿಸಿ ರೈತರ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುವುದು. ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ತೆರಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜನರ ಸಮಸ್ಯೆ ಆಲಿಸುವಂತೆ ತಹಶೀಲ್ದಾರ್​ಗಳಿಗೆ ಸೂಚಿಸಿದ್ದೇನೆ ಎಂದು ಅವರು ಹೇಳಿದರು.
ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿಕೆ

ಜುಲೈ 11 ರಂದು ಪಿಡಬ್ಲ್ಯೂಡಿ ಸಚಿವರು ಶಿರಾಡಿಘಾಟ್ ರಸ್ತೆಗೆ ಭೇಟಿ ನೀಡಿದ್ದಾರೆ. ಪ್ರತಿವರ್ಷ ಮಳೆಗಾಲದಲ್ಲಿ ಶಿರಾಡಿಘಾಟ್ ರಸ್ತೆ ಕುಸಿಯುತ್ತಿದೆ. ಈ ವರ್ಷ ಹೊಸದಾಗಿ ಕುಸಿದಿಲ್ಲ. ರಸ್ತೆ ಕಾಮಗಾರಿ ನಿಧಾನವಾಗಿ ನಡೆಯುತ್ತಿದೆ. ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಲೋಕೋಪಯೋಗಿ ಸಚಿವರು, ಸಂಸದ ನಳಿನ್ ಕುಮಾರ್ ಕಟೀಲ್ ಅವರ ಜೊತೆಯೂ ಮಾತನಾಡಿದ್ದೇನೆ ಎಂದರು.

ಈಗಾಗಲೇ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ಎಲ್ಲಾ ತಹಸೀಲ್ದಾರ್‌ಗಳು, ಉಪವಿಭಾಗಾಧಿಕಾರಿಗಳು ಮಳೆ ಹಾನಿ ಪ್ರದೇಶಕ್ಕೆ ತಕ್ಷಣ ಭೇಟಿ ಕೊಟ್ಟು ಸ್ಪಂದಿಸುವಂತೆ ಸೂಚನೆ ಕೊಟ್ಟಿದ್ದೇನೆ. ಮನೆ, ಬೆಳೆ ಹಾನಿಗೆ ಪರಿಹಾರವನ್ನು ಈಗಾಗಲೇ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರುಗಳ‌ ಜೊತೆ ಸಭೆ ನಡೆಸಿದ್ದಾರೆ. ಸರ್ಕಾರದಲ್ಲಿ ಯಾವುದೇ ಹಣದ ಕೊರತೆಯಿಲ್ಲ. ರೈತರಿಗೆ, ಮನೆ ಹಾನಿ ಕುಟುಂಬಗಳಿಗೆ ಆಗಿರುವ ನಷ್ಟಕ್ಕೆ ಸಹಾಯ ಮಾಡುವ ಕೆಲಸವನ್ನು ಮಾಡುತ್ತೇವೆ ಎಂದು ಮಾತನಾಡಿದರು.

Published On - 7:25 pm, Wed, 13 July 22

Web contact

TV9 Kannada

Read More
Follow Us