AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ 30ಕ್ಕೂ ಹೆಚ್ಚು ಮಂಗಗಳನ್ನು ರಾತ್ರೋ ರಾತ್ರಿ ಕೊಂದು ಬಿಸಾಡಿ ಹೋಗಿರುವ ದುರುಳರು

30 ಮಂಗಗಳ ಹತ್ಯೆ ಮಾಡಲಾಗಿದೆ. ಕೆಲವು ಮಂಗಗಳು ಗಂಭೀರ ಸ್ಥಿತಿಯಲ್ಲಿದೆ. ರಾತ್ರೋರಾತ್ರಿ ಕಾರಿನಲ್ಲಿ ತುಂಬಿಕೊಂಡು ರಸ್ತೆಯಲ್ಲಿ ಬಿಸಾಡಿ ಹೋಗಿರುವ ಮಾಹಿತಿ ತಿಳಿದು ಬಂದಿದೆ.

ಹಾಸನದಲ್ಲಿ 30ಕ್ಕೂ ಹೆಚ್ಚು ಮಂಗಗಳನ್ನು ರಾತ್ರೋ ರಾತ್ರಿ ಕೊಂದು ಬಿಸಾಡಿ ಹೋಗಿರುವ ದುರುಳರು
ಮೂಕ ಪ್ರಾಣಿಗಳ ಮಾರಣ ಹೋಮ
TV9 Web
| Edited By: |

Updated on:Jul 29, 2021 | 6:19 PM

Share

ಹಾಸನ: ಮಾನವರಲ್ಲಿ ಮಾನವೀಯ ಮೌಲ್ಯಗಳು ಕ್ಷೀಣಿಸುತ್ತಿವೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಕನಿಷ್ಠ ವಿವೇಚನೆಯನ್ನೂ ಮರೆತು ಮೂಕ ಜೀವಿಗಳನ್ನು ಜನರು ಕೊಲ್ಲುತ್ತಿದ್ದಾರೆ, ಕ್ರೂರವಾಗಿ ವರ್ತಿಸುತ್ತಿದ್ದಾರೆ. ಇದಕ್ಕೆ ಪುರಾವೆ ಎಂಬಂತೆ  30ಕ್ಕೂ ಹೆಚ್ಚು ಮಂಗಗಳನ್ನು ಕೊಂದು ಚೀಲದಲ್ಲಿ ತುಂಬಿ ರಸ್ತೆಯಲ್ಲಿ ಬಿಸಾಡಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ಚೌಡನಹಳ್ಳಿ ನಡೆದಿದೆ.

ಸ್ಥಳೀಯರು ರಾತ್ರಿ 10 ಗಂಟೆ ಸಮಯದಲ್ಲಿ ಓಡಾಡುತ್ತಿರುವಾಗ ರಸ್ತೆಯ ಪಕ್ಕದಲ್ಲಿ ದೊಡ್ಡದಾದ ಚೀಲವೊಂದು ಬಿದ್ದಿರುವುದು ಗಮನಕ್ಕೆ ಬಂದಿದೆ. ಪ್ರಾಣಿಗಳ ಕಿರುಚಾಟವೂ ಕೇಳತೊಡಗಿದೆ. ತಡಮಾಡದೆ ಚೀಲದ ಗಂಟು ಬಿಚ್ಚಿ ನೋಡುವಷ್ಟರಲ್ಲಿ 30ಕ್ಕೂ ಹೆಚ್ಚು ಮಂಗಗಳು ಬಲಿಯಾಗಿದ್ದವು. ಇನ್ನು ಕೆಲವು ಗಂಭೀರ ಸ್ಥಿತಿಯಲ್ಲಿದ್ದು ಕಿರುಚಾಡುತ್ತಿದ್ದವು. 15 ಕ್ಕೂ ಹೆಚ್ಚು ಕೋತಿಗಳು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದವು. 30 ಮಂಗಗಳ ಹತ್ಯೆ ಮಾಡಲಾಗಿದೆ. ಕೆಲವು ಮಂಗಗಳು ಗಂಭೀರ ಸ್ಥಿತಿಯಲ್ಲಿದೆ. ರಾತ್ರೋರಾತ್ರಿ ಕಾರಿನಲ್ಲಿ ತುಂಬಿಕೊಂಡು ರಸ್ತೆಯಲ್ಲಿ ಬಿಸಾಡಿ ಹೋಗಿರುವ ಮಾಹಿತಿ ತಿಳಿದು ಬಂದಿದೆ.

ತಕ್ಷಣವೇ ಸ್ಥಳಿಯರು ಅರಣ್ಯ ಇಲಾಖೆ, ಪೊಲೀಸ್ ಹಾಗೂ ಪಶು ವೈದ್ಯರಿಗೆ ಕರೆಮಾಡಿದ್ದಾರೆ. ಗಂಭೀರ ಸ್ಥಿತಿಯಲ್ಲಿ ಒದ್ದಾಡುತ್ತಿರುವ ಮಂಗಗಳಿಗೆ ಸ್ಥಳೀಯರು ಆರೈಕೆ ಮಾಡಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ವಿಷಪ್ರಾಶಾನ ಮಾಡಿ ಮಂಗಗಳನ್ನು ಹತ್ಯೆ ಮಾಡಲಾಗಿದೆ ಹಾಗೂ ಬೇರೊಂದು ಪ್ರದೇಶದಿಂದ ತಂದು ರಸ್ತೆಯ ಬದಿಯಲ್ಲಿ ಬಿಸಾಡಿರುವ ಶಂಕೆ ಮೂಡಿದೆ. ಈ ಘಟನೆಯನ್ನು ನಟ ರಣದೀಪ್​ ಹೂಡಾ ಸಹ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

ಮಂಗನಿಂದ ಮಾನವನೆಂಬ ಅಂಶವನ್ನು ಈ ತಾಯಿ ಮಂಗ ಅಕ್ಷರಶಃ ಸಾಬೀತು ಮಾಡುತ್ತಿದೆ! ವಿಡಿಯೋವನ್ನೊಮ್ಮೆ ನೋಡಿ

Viral Video: ಪ್ರವಾಸಿ ತಾಣದ ನಡುರಸ್ತೆಯೊಂದರಲ್ಲಿ ಮಂಗಗಳ ಗ್ಯಾಂಗ್ ವಾರ್; ಆಹಾರದ ಕೊರತೆ ಕಾರಣವಿರಬಹುದೆಂದ ತಜ್ಞರು!

Published On - 6:02 pm, Thu, 29 July 21

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್