AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ 30ಕ್ಕೂ ಹೆಚ್ಚು ಮಂಗಗಳನ್ನು ರಾತ್ರೋ ರಾತ್ರಿ ಕೊಂದು ಬಿಸಾಡಿ ಹೋಗಿರುವ ದುರುಳರು

30 ಮಂಗಗಳ ಹತ್ಯೆ ಮಾಡಲಾಗಿದೆ. ಕೆಲವು ಮಂಗಗಳು ಗಂಭೀರ ಸ್ಥಿತಿಯಲ್ಲಿದೆ. ರಾತ್ರೋರಾತ್ರಿ ಕಾರಿನಲ್ಲಿ ತುಂಬಿಕೊಂಡು ರಸ್ತೆಯಲ್ಲಿ ಬಿಸಾಡಿ ಹೋಗಿರುವ ಮಾಹಿತಿ ತಿಳಿದು ಬಂದಿದೆ.

ಹಾಸನದಲ್ಲಿ 30ಕ್ಕೂ ಹೆಚ್ಚು ಮಂಗಗಳನ್ನು ರಾತ್ರೋ ರಾತ್ರಿ ಕೊಂದು ಬಿಸಾಡಿ ಹೋಗಿರುವ ದುರುಳರು
ಮೂಕ ಪ್ರಾಣಿಗಳ ಮಾರಣ ಹೋಮ
TV9 Web
| Edited By: |

Updated on:Jul 29, 2021 | 6:19 PM

Share

ಹಾಸನ: ಮಾನವರಲ್ಲಿ ಮಾನವೀಯ ಮೌಲ್ಯಗಳು ಕ್ಷೀಣಿಸುತ್ತಿವೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಕನಿಷ್ಠ ವಿವೇಚನೆಯನ್ನೂ ಮರೆತು ಮೂಕ ಜೀವಿಗಳನ್ನು ಜನರು ಕೊಲ್ಲುತ್ತಿದ್ದಾರೆ, ಕ್ರೂರವಾಗಿ ವರ್ತಿಸುತ್ತಿದ್ದಾರೆ. ಇದಕ್ಕೆ ಪುರಾವೆ ಎಂಬಂತೆ  30ಕ್ಕೂ ಹೆಚ್ಚು ಮಂಗಗಳನ್ನು ಕೊಂದು ಚೀಲದಲ್ಲಿ ತುಂಬಿ ರಸ್ತೆಯಲ್ಲಿ ಬಿಸಾಡಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ಚೌಡನಹಳ್ಳಿ ನಡೆದಿದೆ.

ಸ್ಥಳೀಯರು ರಾತ್ರಿ 10 ಗಂಟೆ ಸಮಯದಲ್ಲಿ ಓಡಾಡುತ್ತಿರುವಾಗ ರಸ್ತೆಯ ಪಕ್ಕದಲ್ಲಿ ದೊಡ್ಡದಾದ ಚೀಲವೊಂದು ಬಿದ್ದಿರುವುದು ಗಮನಕ್ಕೆ ಬಂದಿದೆ. ಪ್ರಾಣಿಗಳ ಕಿರುಚಾಟವೂ ಕೇಳತೊಡಗಿದೆ. ತಡಮಾಡದೆ ಚೀಲದ ಗಂಟು ಬಿಚ್ಚಿ ನೋಡುವಷ್ಟರಲ್ಲಿ 30ಕ್ಕೂ ಹೆಚ್ಚು ಮಂಗಗಳು ಬಲಿಯಾಗಿದ್ದವು. ಇನ್ನು ಕೆಲವು ಗಂಭೀರ ಸ್ಥಿತಿಯಲ್ಲಿದ್ದು ಕಿರುಚಾಡುತ್ತಿದ್ದವು. 15 ಕ್ಕೂ ಹೆಚ್ಚು ಕೋತಿಗಳು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದವು. 30 ಮಂಗಗಳ ಹತ್ಯೆ ಮಾಡಲಾಗಿದೆ. ಕೆಲವು ಮಂಗಗಳು ಗಂಭೀರ ಸ್ಥಿತಿಯಲ್ಲಿದೆ. ರಾತ್ರೋರಾತ್ರಿ ಕಾರಿನಲ್ಲಿ ತುಂಬಿಕೊಂಡು ರಸ್ತೆಯಲ್ಲಿ ಬಿಸಾಡಿ ಹೋಗಿರುವ ಮಾಹಿತಿ ತಿಳಿದು ಬಂದಿದೆ.

ತಕ್ಷಣವೇ ಸ್ಥಳಿಯರು ಅರಣ್ಯ ಇಲಾಖೆ, ಪೊಲೀಸ್ ಹಾಗೂ ಪಶು ವೈದ್ಯರಿಗೆ ಕರೆಮಾಡಿದ್ದಾರೆ. ಗಂಭೀರ ಸ್ಥಿತಿಯಲ್ಲಿ ಒದ್ದಾಡುತ್ತಿರುವ ಮಂಗಗಳಿಗೆ ಸ್ಥಳೀಯರು ಆರೈಕೆ ಮಾಡಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ವಿಷಪ್ರಾಶಾನ ಮಾಡಿ ಮಂಗಗಳನ್ನು ಹತ್ಯೆ ಮಾಡಲಾಗಿದೆ ಹಾಗೂ ಬೇರೊಂದು ಪ್ರದೇಶದಿಂದ ತಂದು ರಸ್ತೆಯ ಬದಿಯಲ್ಲಿ ಬಿಸಾಡಿರುವ ಶಂಕೆ ಮೂಡಿದೆ. ಈ ಘಟನೆಯನ್ನು ನಟ ರಣದೀಪ್​ ಹೂಡಾ ಸಹ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

ಮಂಗನಿಂದ ಮಾನವನೆಂಬ ಅಂಶವನ್ನು ಈ ತಾಯಿ ಮಂಗ ಅಕ್ಷರಶಃ ಸಾಬೀತು ಮಾಡುತ್ತಿದೆ! ವಿಡಿಯೋವನ್ನೊಮ್ಮೆ ನೋಡಿ

Viral Video: ಪ್ರವಾಸಿ ತಾಣದ ನಡುರಸ್ತೆಯೊಂದರಲ್ಲಿ ಮಂಗಗಳ ಗ್ಯಾಂಗ್ ವಾರ್; ಆಹಾರದ ಕೊರತೆ ಕಾರಣವಿರಬಹುದೆಂದ ತಜ್ಞರು!

Published On - 6:02 pm, Thu, 29 July 21

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ