AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ರೌಡಿಶೀಟರ್​ ಮಾಸ್ತಿಗೌಡ ಬರ್ಬರ ಹತ್ಯೆ ಕೇಸ್​: ಠಾಣೆಗೆ ಬಂದು ಶರಣಾದ ಮೂವರು ಆರೋಪಿಗಳು

ರೌಡಿಶೀಟರ್​ ಮಾಸ್ತಿಗೌಡ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ಪೊಲೀಸ್ ಠಾಣೆಗೆ ಮೂವರು ಆರೋಪಿಗಳು ಶರಣಾಗಿದ್ದಾರೆ. ಆದರೆ ಈ ಹತ್ಯೆ ವಿಚಾರವಾಗಿ ನಮಗೇನೂ ಗೊತ್ತಿಲ್ಲ ಎಂದು ಆರೋಪಿಗಳು ವಿಡಿಯೋ ಮೂಲಕ ಹೇಳಿಕೆ ನೀಡಿದ್ದಾರೆ.  

ಹಾಸನದಲ್ಲಿ ರೌಡಿಶೀಟರ್​ ಮಾಸ್ತಿಗೌಡ ಬರ್ಬರ ಹತ್ಯೆ ಕೇಸ್​: ಠಾಣೆಗೆ ಬಂದು ಶರಣಾದ ಮೂವರು ಆರೋಪಿಗಳು
ಶರಣಾದ ಮೂವರು ಆರೋಪಿಗಳು
Follow us
ಮಂಜುನಾಥ ಕೆಬಿ
| Updated By: ಗಂಗಾಧರ​ ಬ. ಸಾಬೋಜಿ

Updated on: Jul 08, 2023 | 7:55 PM

ಹಾಸನ: ರೌಡಿಶೀಟರ್ (rowdy sheeter)​ ಮಾಸ್ತಿಗೌಡ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ಪೊಲೀಸ್ ಠಾಣೆಗೆ ಮೂವರು ಆರೋಪಿಗಳು ಶರಣಾಗಿದ್ದಾರೆ. ಮಂಡ್ಯ ಶಿವು, ಉಲಿವಾಲ ಚೇತು, ಸಾಲಗಾಮೆ ರಾಕಿ ಶರಣಾದವರು. ಮತ್ತೊಬ್ಬ ರೌಡಿಶೀಟರ್​ ಯಾಚೇನಹಳ್ಳಿ ಚೇತು ವಿಚಾರವಾಗಿ ನಡೆದ ಕೊಲೆ ಕೇಸ್​​ನಲ್ಲಿ ಪೊಲೀಸರು ಹುಡುಕುತ್ತಿದ್ದಾರೆ. ಹಾಗಾಗಿ ನಾವು ಸರೆಂಡರ್​ ಆಗುತ್ತಿದ್ದೇವೆ. ಆದರೆ ಹಾಸನದಲ್ಲಿ ನಡೆದ ಮಾಸ್ತಿಗೌಡ ಬರ್ಬರ ಹತ್ಯೆ ವಿಚಾರವಾಗಿ ನಮಗೇನೂ ಗೊತ್ತಿಲ್ಲ ಎಂದು ಆರೋಪಿಗಳು ವಿಡಿಯೋ ಮೂಲಕ ಹೇಳಿಕೆ ನೀಡಿ ಸರೆಂಡರ್​ ಆಗಿದ್ದಾರೆ.

ರೌಡಿಶೀಟರ್​​ ಮಾಸ್ತಿಗೌಡ(30)ನನ್ನು ಜಿಲ್ಲೆ ಚನ್ನರಾಯಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಕೊಲೆ ಮಾಡಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಎಸ್​ಪಿ ಹರಿರಾಂ ಶಂಕರ್​ ಕೊಲೆ ಆರೋಪಿಗಳ ಬಂಧನಕ್ಕಾಗಿ 3 ಪೊಲೀಸ್ ತಂಡ ರಚಿಸಲಾಗಿತ್ತು. ಆದರೆ ಪೊಲೀಸರ ಶೋಧದ ನಡುವೆ ಆರೋಪಿಗಳು ಠಾಣೆಗೆ ಬಂದು ಶರಣಾಗಿದ್ದಾರೆ.

ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣ: 400 ಅಡಿ ಆಳದ ಕೊಳವೆ ಬಾವಿಯಲ್ಲಿ ಮೃತದೇಹ ಪತ್ತೆ

ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗಳು ಸ್ಥಳದಲ್ಲೇ ದುರ್ಮರಣ

ತುಮಕೂರು: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಮತ್ತು ಮಗಳು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ. ದಿಗವಿಂಟಿ ರಾಮಕೃಷ್ಣರೆಡ್ಡಿ(65), ಪುತ್ರಿ ನಿರ್ಮಲಾ(45) ಮೃತರು. ಆಂಧ್ರಪ್ರದೇಶದ ಮಡಕಶಿರಾ ತಾಲೂಕಿನ ಎಲ್ಲೋಟಿ ಗ್ರಾಮದಲ್ಲಿರುವ ಜಮೀನಿಗೆ ನೀರು ಹಾಯಿಸಲು ಹೋಗಿದ್ದರು. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ತಂದೆ ಜಮೀನಿನಿಂದ ಎಷ್ಟು ಹೊತ್ತಾದರೂ ವಾಪಸ್ ಬಾರದ ಹಿನ್ನೆಲೆ ತಂದೆಯನ್ನು ಹುಡುಕಲು ನಿರ್ಮಲಾ ಜಮೀನಿಗೆ ತೆರಳಿದ್ದಾಳೆ.

ಈ ವೇಳೆ ನಿರ್ಮಲಾ ಕೂಡ ವಿದ್ಯುತ್ ಸ್ಪರ್ಶಿಸಿ ದುರ್ಮರಣ ಹೊಂದಿದ್ದು, ಅಪ್ಪ, ಮಗಳ ಶವವನ್ನು ಬಸವನಹಳ್ಳಿಗೆ ಸ್ಥಳೀಯರು ಸಾಗಿಸಿದ್ದಾರೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಕೌಟುಂಬಿಕ ಕಲಹ, ಪತಿಗೆ ಹಣದ ದಾಹ; ಮಾರಕಾಸ್ತ್ರದಿಂದ ಹೊಡೆದು ಪತ್ನಿಯ ಕೊಲೆ, ಕತ್ತು ಹಿಸುಕಿ ಮಗುವಿನ ಹತ್ಯೆಗೆ ಯತ್ನ

ಮಹಿಳೆಯರನ್ನು ಮದುವೆಯಾಗಿ ವಂಚಿಸುತ್ತಿದ್ದ ಆರೋಪಿ ಬಂಧನ

ಮೈಸೂರು: ಮಹಿಳೆಯರನ್ನು ಮದುವೆಯಾಗಿ ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಬೆಂಗಳೂರಿನ ಮಹೇಶ್ 41 ಬಂಧಿತ ಆರೋಪಿ. ಪತಿಯಿಂದ ದೂರವಾದ ಹಾಗೂ ವಯಸ್ಸಾಗಿ ಮದುವೆಯಾಗದ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ. ಮದುವೆಯಾಗಿ ಅವರ ಬಳಿ ಹಣ ಮತ್ತು ಚಿನ್ನದ ಅಭರಣಗಳನ್ನು ತೆಗೆದುಕೊಂಡು ಹೋಗುತ್ತಿದ್ದ. ಸುಮಾರು 15ಕ್ಕೂ ಹೆಚ್ಚು ಮಹಿಳೆಯನ್ನು ವಂಚಿಸಿದ್ದಾನೆ.

2 ಲಕ್ಷ ನಗದು ಹಣ, ಎರಡು ಕಾರುಗಳು, ಒಂದು ಬ್ರಾಸಲೆಟ್, ಒಂದು ಚಿನ್ನದ ಉಂಗುರ, ಎರಡು ಚಿನ್ನದ ಬಳೆಗಳು, ಒಂದು ನೆಕ್ಸಸ್ ಹಾಗೂ ಕೃತ್ಯಕ್ಕೆ ಬಳಸಿದ್ದ 7 ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು