Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಾಯಕನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ ಮುಸ್ಲಿಂ ಕುಟುಂಬ; ಇದು ಹಿಂದೂ-ಮುಸ್ಲಿಂ ಭಾವೈಕ್ಯತೆಯ ಪ್ರತೀಕ

ಬೇಲೂರು ಚನ್ನಕೇಶವ ಸ್ವಾಮಿ ಕನಸಿನಲ್ಲಿ ಬಂದು ಜಮೀನು ಬಳಿ ಪೂಜೆ ಸಲ್ಲಿಸಲು ಸೂಚಿಸಿದ್ದಾನೆ. ಹೀಗಾಗಿ ಇಲ್ಲಿ ವಿನಾಯಕನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಮಾಡುತ್ತಿದ್ದೇವೆ ಎಂದು ರಿಯಾಜ್ ಪಾಷಾ ತಿಳಿಸಿದ್ದಾರೆ.

ವಿನಾಯಕನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ ಮುಸ್ಲಿಂ ಕುಟುಂಬ; ಇದು ಹಿಂದೂ-ಮುಸ್ಲಿಂ ಭಾವೈಕ್ಯತೆಯ ಪ್ರತೀಕ
ವಿನಾಯಕನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ
Follow us
TV9 Web
| Updated By: preethi shettigar

Updated on:Feb 23, 2022 | 9:11 AM

ಹಾಸನ: ರಾಜ್ಯದಲ್ಲಿ ಹಿಜಾಬ್ (Hijab)- ಕೇಸರಿ ಸಂಘರ್ಷ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿರುವ ಈ ಸಂದರ್ಭದಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ಹಾಸನ ಜಿಲ್ಲೆಯ ಬೇಲೂರಿನಲ್ಲಿ ವಿನಾಯಕನ ಮೂರ್ತಿಯನ್ನು(Idol) ಪ್ರತಿಷ್ಠಾಪಿಸಿ ಮುಸ್ಲಿಂ ಕುಟುಂಬವೊಂದು(Muslim Family) ಪೂಜೆ ಸಲ್ಲಿಸಿದೆ. ರಿಯಾಜ್ ಪಾಷಾ ಕುಟುಂಬಸ್ಥರು ನೇರಳೆ, ಆಲದ ಮರದ ಬುಡದಲ್ಲಿ ವಿನಾಯಕನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ, ಪೂಜೆ ಸಲ್ಲಿಸಿದ್ದಾರೆ. ಹಿಂದೂ ಸಂಸ್ಕಾರ, ಸಂಪ್ರದಾಯದಂತೆ ರಿಯಾಜ್ ಪಾಷಾ ಕುಟುಂಬ ಪೂಜೆ, ಪುನಸ್ಕಾರ ನೆರವೆರಿಸಿದೆ.

ಬೇಲೂರು ಚನ್ನಕೇಶವ ಸ್ವಾಮಿ ಕನಸಿನಲ್ಲಿ ಬಂದು ಜಮೀನು ಬಳಿ ಪೂಜೆ ಸಲ್ಲಿಸಲು ಸೂಚಿಸಿದ್ದಾನೆ. ಹೀಗಾಗಿ ಇಲ್ಲಿ ವಿನಾಯಕನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಮಾಡುತ್ತಿದ್ದೇವೆ ಎಂದು ರಿಯಾಜ್ ಪಾಷಾ ತಿಳಿಸಿದ್ದಾರೆ.

ಬೇಲೂರಿನ ದೀನ್ ದಯಾಳ್ ಬಡಾವಣೆಯಲ್ಲಿ ರಿಯಾಜ್ ಕುಟುಂಬ ಜಮೀನು ಹೊಂದಿದೆ. ರಿಯಾಜ್ ತಂದೆ ಭಾಷಾ ಸಾಹೇಬ್​ಗೆ ಉಳುವವನೇ ಭೂಮಿ‌ ಒಡೆಯ ಕಾನೂನಿನಿಂದ ಜಮೀನು ಸಿಕ್ಕಿತ್ತು. 8 ವರ್ಷಗಳ ಹಿಂದೆ ಮಲ್ಲಿಕಾರ್ಜುನ ಗ್ರೂಪ್ಸ್​ನ ನಾಗಣ್ಣ ಎಂಬುವವರಿಗೆ ಇದೇ ಜಮೀನನ್ನು ರಿಯಾಜ್ ಮಾರಾಟ ಮಾಡಿದ್ದರು. ಆದರೆ 3 ತಿಂಗಳಿನಿಂದ ರಿಯಾಜ್ ಸಹೋದರನ‌ ಮಗನ ಕನಸ್ಸಿನಲ್ಲಿ ಬಂದು‌ ಪೂಜೆ ಮಾಡಿಸುವಂತೆ ಚನ್ನಕೇಶವಸ್ವಾಮಿ ಸೂಚನೆ ನೀಡಿದ್ದಾನೆಯಂತೆ. ಹೀಗಾಗಿ ಪೂಜಾ ಕಾರ್ಯ ನೆರವೆರಿಸಿದ್ದಾರೆ.

ಚನ್ನಕೇಶವಸ್ವಾಮಿ ನಿರ್ದೆಶನದಂತೆ ಅಣತಿಯಂತೆ ಜಮೀನಿನ ಮರದ ಬಳಿ ಪೂಜೆ ಸಲ್ಲಿಸಲಾಗಿದೆ. ಅನ್ಯ ಧರ್ಮವಾದರೂ ದೇವರ ಸೂಚನೆ ಎಂದು ಭಕ್ತಿಯಿಂದ ಪೂಜೆ ಸಲ್ಲಿಸಿದ್ದಾರೆ. ಇನ್ನೊಂದು ವಿಶೇಷ ಎಂದರೆ ಅರ್ಚಕ ಮಂಜುನಾಥ್ ಶಾಸ್ತ್ರಿ ಮಾರ್ಗದರ್ಶನದಲ್ಲಿ ಪೂಜೆ ನೆರವೆರಿಸಿದ್ದಾರೆ. ರಿಯಾಜ್ ಕುಟುಂಬ ಪೂಜೆ ಸಲ್ಲಿಸುವಾಗ ಹಿಂದೂ ಧರ್ಮದ ಹಲವು ಜನರು ಸಾಥ್ ನೀಡಿದ್ದಾರೆ. ಒಟ್ಟಾರೆ ಧರ್ಮ ಮೀರಿ ಭಕ್ತಿ ತೋರಿ ರಿಯಾಜ್ ಮತ್ತು ಅವರ ಕುಟುಂಬ ಮಾದರಿಯಾಗಿದೆ.

ಇದನ್ನೂ ಓದಿ: ಹಿಜಾಬ್‌ಗೂ ಈ ಕೊಲೆಗೂ ಲಿಂಕ್ ಇಲ್ಲ ಅನಿಸುತ್ತಿದೆ, ಆರೋಪಿಗಳು ಯಾರು ಅಂತಾ ಗೊತ್ತಾಗಿದ್ದಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ

Hijab Row: ಹಿಜಾಬ್ ಹಾಕುವುದು ಅಥವಾ ಹಾಕದಿರುವುದು ಮುಸ್ಲಿಂ ಮಹಿಳೆಯರ ಹಕ್ಕು: ಹೈಕೋರ್ಟ್​ನಲ್ಲಿ ಎಜಿ ವಾದ

Published On - 8:59 am, Wed, 23 February 22

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ