AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಾಯಕನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ ಮುಸ್ಲಿಂ ಕುಟುಂಬ; ಇದು ಹಿಂದೂ-ಮುಸ್ಲಿಂ ಭಾವೈಕ್ಯತೆಯ ಪ್ರತೀಕ

ಬೇಲೂರು ಚನ್ನಕೇಶವ ಸ್ವಾಮಿ ಕನಸಿನಲ್ಲಿ ಬಂದು ಜಮೀನು ಬಳಿ ಪೂಜೆ ಸಲ್ಲಿಸಲು ಸೂಚಿಸಿದ್ದಾನೆ. ಹೀಗಾಗಿ ಇಲ್ಲಿ ವಿನಾಯಕನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಮಾಡುತ್ತಿದ್ದೇವೆ ಎಂದು ರಿಯಾಜ್ ಪಾಷಾ ತಿಳಿಸಿದ್ದಾರೆ.

ವಿನಾಯಕನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ ಮುಸ್ಲಿಂ ಕುಟುಂಬ; ಇದು ಹಿಂದೂ-ಮುಸ್ಲಿಂ ಭಾವೈಕ್ಯತೆಯ ಪ್ರತೀಕ
ವಿನಾಯಕನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ
TV9 Web
| Updated By: preethi shettigar|

Updated on:Feb 23, 2022 | 9:11 AM

Share

ಹಾಸನ: ರಾಜ್ಯದಲ್ಲಿ ಹಿಜಾಬ್ (Hijab)- ಕೇಸರಿ ಸಂಘರ್ಷ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿರುವ ಈ ಸಂದರ್ಭದಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ಹಾಸನ ಜಿಲ್ಲೆಯ ಬೇಲೂರಿನಲ್ಲಿ ವಿನಾಯಕನ ಮೂರ್ತಿಯನ್ನು(Idol) ಪ್ರತಿಷ್ಠಾಪಿಸಿ ಮುಸ್ಲಿಂ ಕುಟುಂಬವೊಂದು(Muslim Family) ಪೂಜೆ ಸಲ್ಲಿಸಿದೆ. ರಿಯಾಜ್ ಪಾಷಾ ಕುಟುಂಬಸ್ಥರು ನೇರಳೆ, ಆಲದ ಮರದ ಬುಡದಲ್ಲಿ ವಿನಾಯಕನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ, ಪೂಜೆ ಸಲ್ಲಿಸಿದ್ದಾರೆ. ಹಿಂದೂ ಸಂಸ್ಕಾರ, ಸಂಪ್ರದಾಯದಂತೆ ರಿಯಾಜ್ ಪಾಷಾ ಕುಟುಂಬ ಪೂಜೆ, ಪುನಸ್ಕಾರ ನೆರವೆರಿಸಿದೆ.

ಬೇಲೂರು ಚನ್ನಕೇಶವ ಸ್ವಾಮಿ ಕನಸಿನಲ್ಲಿ ಬಂದು ಜಮೀನು ಬಳಿ ಪೂಜೆ ಸಲ್ಲಿಸಲು ಸೂಚಿಸಿದ್ದಾನೆ. ಹೀಗಾಗಿ ಇಲ್ಲಿ ವಿನಾಯಕನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಮಾಡುತ್ತಿದ್ದೇವೆ ಎಂದು ರಿಯಾಜ್ ಪಾಷಾ ತಿಳಿಸಿದ್ದಾರೆ.

ಬೇಲೂರಿನ ದೀನ್ ದಯಾಳ್ ಬಡಾವಣೆಯಲ್ಲಿ ರಿಯಾಜ್ ಕುಟುಂಬ ಜಮೀನು ಹೊಂದಿದೆ. ರಿಯಾಜ್ ತಂದೆ ಭಾಷಾ ಸಾಹೇಬ್​ಗೆ ಉಳುವವನೇ ಭೂಮಿ‌ ಒಡೆಯ ಕಾನೂನಿನಿಂದ ಜಮೀನು ಸಿಕ್ಕಿತ್ತು. 8 ವರ್ಷಗಳ ಹಿಂದೆ ಮಲ್ಲಿಕಾರ್ಜುನ ಗ್ರೂಪ್ಸ್​ನ ನಾಗಣ್ಣ ಎಂಬುವವರಿಗೆ ಇದೇ ಜಮೀನನ್ನು ರಿಯಾಜ್ ಮಾರಾಟ ಮಾಡಿದ್ದರು. ಆದರೆ 3 ತಿಂಗಳಿನಿಂದ ರಿಯಾಜ್ ಸಹೋದರನ‌ ಮಗನ ಕನಸ್ಸಿನಲ್ಲಿ ಬಂದು‌ ಪೂಜೆ ಮಾಡಿಸುವಂತೆ ಚನ್ನಕೇಶವಸ್ವಾಮಿ ಸೂಚನೆ ನೀಡಿದ್ದಾನೆಯಂತೆ. ಹೀಗಾಗಿ ಪೂಜಾ ಕಾರ್ಯ ನೆರವೆರಿಸಿದ್ದಾರೆ.

ಚನ್ನಕೇಶವಸ್ವಾಮಿ ನಿರ್ದೆಶನದಂತೆ ಅಣತಿಯಂತೆ ಜಮೀನಿನ ಮರದ ಬಳಿ ಪೂಜೆ ಸಲ್ಲಿಸಲಾಗಿದೆ. ಅನ್ಯ ಧರ್ಮವಾದರೂ ದೇವರ ಸೂಚನೆ ಎಂದು ಭಕ್ತಿಯಿಂದ ಪೂಜೆ ಸಲ್ಲಿಸಿದ್ದಾರೆ. ಇನ್ನೊಂದು ವಿಶೇಷ ಎಂದರೆ ಅರ್ಚಕ ಮಂಜುನಾಥ್ ಶಾಸ್ತ್ರಿ ಮಾರ್ಗದರ್ಶನದಲ್ಲಿ ಪೂಜೆ ನೆರವೆರಿಸಿದ್ದಾರೆ. ರಿಯಾಜ್ ಕುಟುಂಬ ಪೂಜೆ ಸಲ್ಲಿಸುವಾಗ ಹಿಂದೂ ಧರ್ಮದ ಹಲವು ಜನರು ಸಾಥ್ ನೀಡಿದ್ದಾರೆ. ಒಟ್ಟಾರೆ ಧರ್ಮ ಮೀರಿ ಭಕ್ತಿ ತೋರಿ ರಿಯಾಜ್ ಮತ್ತು ಅವರ ಕುಟುಂಬ ಮಾದರಿಯಾಗಿದೆ.

ಇದನ್ನೂ ಓದಿ: ಹಿಜಾಬ್‌ಗೂ ಈ ಕೊಲೆಗೂ ಲಿಂಕ್ ಇಲ್ಲ ಅನಿಸುತ್ತಿದೆ, ಆರೋಪಿಗಳು ಯಾರು ಅಂತಾ ಗೊತ್ತಾಗಿದ್ದಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ

Hijab Row: ಹಿಜಾಬ್ ಹಾಕುವುದು ಅಥವಾ ಹಾಕದಿರುವುದು ಮುಸ್ಲಿಂ ಮಹಿಳೆಯರ ಹಕ್ಕು: ಹೈಕೋರ್ಟ್​ನಲ್ಲಿ ಎಜಿ ವಾದ

Published On - 8:59 am, Wed, 23 February 22

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು