AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡ್ಡ ತೆಗೆಯುವಂತೆ ಕಾಲೇಜು ಆಡಳಿತ ಮಂಡಳಿ ಸೂಚನೆ: ಅಸಮಾಧಾನ ಹೊರ ಹಾಕಿದ ಮುಸ್ಲಿಂ ವಿದ್ಯಾರ್ಥಿಗಳು

ಹೊಳೆನರಸೀಪುರದ ಸರ್ಕಾರಿ ನರ್ಸಿಂಗ್ ಕಾಲೇಜು ಆಡಳಿತ ಮಂಡಳಿ ತಮಗೆ ಗಡ್ಡ ತಗೆಯುವಂತೆ ಮೌಖಿಕ ಸೂಚನೆ ನೀಡಿದೆ ಎಂದು ಮುಸ್ಲಿಂ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಆಡಳಿತ ಮಂಡಳಿ ತಮ್ಮ ಸಂಪ್ರದಾಯಕ್ಕೆ ವಿರುದ್ಧವಾದ ಆದೇಶವನ್ನು ನೀಡಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿ, ಈ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.

ಗಡ್ಡ ತೆಗೆಯುವಂತೆ ಕಾಲೇಜು ಆಡಳಿತ ಮಂಡಳಿ ಸೂಚನೆ: ಅಸಮಾಧಾನ ಹೊರ ಹಾಕಿದ ಮುಸ್ಲಿಂ ವಿದ್ಯಾರ್ಥಿಗಳು
ವಿದ್ಯಾರ್ಥಿಗಳ ಟ್ವೀಟ್​, ನರ್ಸಿಂಗ್​​ ಕಾಲೇಜು
ಮಂಜುನಾಥ ಕೆಬಿ
| Edited By: ವಿವೇಕ ಬಿರಾದಾರ|

Updated on:Nov 10, 2024 | 8:33 AM

Share

ಹಾಸನ, ನವೆಂಬರ್​​ 10: ಗಡ್ಡ ತೆಗೆಯುವಂತೆ ಆಡಳಿತ ಮಂಡಳಿ ತಮಗೆ ಸೂಚನೆ ನೀಡಿದೆ ಅಂತ 13ಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿಗಳು (Muslim Students) ಟ್ವೀಟ್​ ಮೂಲಕ ಹೊಳೆನರಸೀಪುರ (Holenarsipur) ಸರ್ಕಾರಿ ನರ್ಸಿಂಗ್ ಕಾಲೇಜಿನ (Government Narsing College) ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಈ ವಿಚಾರವಾಗಿ ಕಾಲೇಜು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ನಡುವೆ ಸಂಘರ್ಷ ಏರ್ಪಟ್ಟಿದೆ.

ಪಿಎಂಎಸ್‌ಎಸ್ ಯೋಜನೆಯಡಿ ನರ್ಸಿಂಗ್​ ಓದಲು ಜಮ್ಮು-ಕಾಶ್ಮೀರದಿಂದ 13ಕ್ಕೂ ಹೆಚ್ಚು ಮುಸ್ಲಿಂ ಯುವಕರು ಹೊಳೆನರಸೀಪುರಕ್ಕೆ ಬಂದಿದ್ದಾರೆ. ವಿದ್ಯಾರ್ಥಿಗಳು ಹೊಳೆನರಸೀಪುರ ಸರ್ಕಾರಿ ನರ್ಸಿಂಗ್ ಕಾಲೇಜೀನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಗಡ್ಡ ತೆಗೆದು ಕಾಲೇಜು ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಮೌಖಿಕವಾಗಿ ಸೂಚನೆ ನೀಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪ ಮಾಡಿದ್ದಾರೆ. ಆದರೆ, ಗಡ್ಡ ತೆಗೆಯಲು ವಿದ್ಯಾರ್ಥಿಗಳು ನಿರಾಕರಿಸಿದ್ದಾರೆ.

“ನಮ್ಮ ಸಂಪ್ರದಾಯದಂತೆ ಗಡ್ಡ ಬಿಡುವುದು ನಮ್ಮ ಹಕ್ಕು. ಗಡ್ಡ ತೆಗೆಯುವಂತೆ ಸೂಚನೆ ನೀಡಿದ್ದು, ನಮ್ಮ ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರುತ್ತಿದೆ. ಕೂಡಲೇ ಮಧ್ಯಪ್ರವೇಶಿಸಿ ಸಮಮಸ್ಯೆ ಬಗೆಹರಿಸುವಂತೆ” ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮ ಎಕ್ಸ್​​ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಹಾಗೂ ಅಲ್ಲಿನ ಪ್ರಮುಖ ನಾಯಕರಿಗೆ ಮನವಿ ಮಾಡಿದ್ದಾರೆ. ಅಲ್ಲದೇ, ವಿದ್ಯಾರ್ಥಿಗಳು ಜಮ್ಮು-ಕಾಶ್ಮೀರ ಸ್ಟುಡೆಂಟ್ಸ್ ಅಸೋಸಿಯೇಷನ್​ ಮುಂದೆಯೂ ಮೊರೆ ಇಟ್ಟಿದ್ದಾರೆ.

ಇದನ್ನೂ ಓದಿ: ಹಾಸನ ಸರ್ಕಾರಿ ಹಾಸ್ಟೇಲ್​​ನಲ್ಲಿ ಧಮ್​ ಮಾರೋ ಧಮ್​: ಮಕ್ಕಳಿಂದ ಬೀಡಿ, ಮದ್ಯ ಸೇವನೆ

ಗಡ್ಡ ತೆಗೆಯುವಂತೆ ಎಲ್ಲ ವಿದ್ಯಾರ್ಥಿಗಳಿಗೆ ಹೇಳಿದ್ದೇವೆ: ಪ್ರಾಂಶುಪಾಲ

ಈ ವಿಚಾರವಾಗಿ ಕಾಲೇಜು ಪ್ರಾಂಶುಪಾಲರು ಮಾತನಾಡಿ, ನರ್ಸಿಂಗ್ ಕೋರ್ಸ್ ಆಗಿರುವುದರಿಂದ ಕ್ಲಿನಕಲ್ ಲ್ಯಾಬ್‌ನಲ್ಲಿ ಗಡ್ಡ ಬಿಟ್ಟುಕೊಂಡು ಭಾಗವಹಿಸಿದರೆ ಸಮಸ್ಯೆಯಾಗುತ್ತದೆ. ಆದ್ದರಿಂದ ಎಲ್ಲ ವಿದ್ಯಾರ್ಥಿಗಳಿಗೆ ಗಡ್ಡ ತೆಗೆಯುವಂತೆ ಹೇಳಿದ್ದೇವೆ. ಕೇವಲ‌ ಮುಸ್ಲಿಂ ಯುವಕರಿಗೆ ಮಾತ್ರ ಗಡ್ಡ ತೆಗೆಯುವಂತೆ ಹೇಳಿಲ್ಲ. ಮೇಲಾಧಿಕಾರಿಗಳು ಯಾವ ರೀತಿ ಆದೇಶಿಸುತ್ತಾರೆ ಅದನ್ನು ಪಾಲಿಸುತ್ತೇವೆ ಎಂದು ತಿಳಿಸಿದರು.

ಹಿಜಾಬ್​ ವಿವಾದ

2022ರಲ್ಲಿ ಕರ್ನಾಟಕದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿತ್ತು. ಉಡುಪಿಯಲ್ಲಿ ಆರಂಭವಾದ ಸಮವಸ್ತ್ರ ಸಮರ ಚರ್ಚೆ ಇಡೀ ದೇಶದಾದ್ಯಂತ ವ್ಯಾಪಿಸಿತ್ತು. ಹಿಜಾಬ್ ನಮ್ಮ ಹಕ್ಕು ಅಂತ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹೇಳುತ್ತಿದ್ದರು. ಹಿಜಾಬ್ ಧರಿಸುವವರೆಗೂ ಕೇಸರಿ ಶಾಲು ಧರಿಸುತ್ತೇವೆ ಅಂತ ಹಿಂದೂ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದರು. ಈ ವಿಚಾರ ಹೈಕೋರ್ಟ್ ಮೆಟ್ಟಿಲು ಏರಿತ್ತು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:10 am, Sun, 10 November 24

Follow Us
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು