AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಹಿಂದೂ ಸಂಘಟನೆಗಳ ಪ್ರತಿಭಟನೆ ವೇಳೆ ಕುರಾನ್ ಜಿಂದಾಬಾದ್ ಎಂದು ಕೂಗಿದ ಮುಸ್ಲಿಂ ಯುವಕ ಅರೆಸ್ಟ್

ಮುಸ್ಲಿಂ ಯುವಕ ಬೈಕ್​ನಲ್ಲಿ ಬಂದು ‘ಕುರಾನ್ ಜಿಂದಾಬಾದ್​’ ಎಂದು ಕೂಗಿದ್ದಾನೆ. ಈ ವೇಳೆ ಕಾರ್ಯಕರ್ತರು ಮತ್ತು ಯುವಕನ ನಡುವೆ ವಾಗ್ವಾದವಾಗಿದ್ದು ಬೇಲೂರು ಪೊಲೀಸರು ಠಾಣೆ ಚಾರ್ಜ್ ಮಾಡಿ ಯುವಕನನ್ನು ವಶಕ್ಕೆ ಪಡೆದು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಹಾಸನ: ಹಿಂದೂ ಸಂಘಟನೆಗಳ ಪ್ರತಿಭಟನೆ ವೇಳೆ ಕುರಾನ್ ಜಿಂದಾಬಾದ್ ಎಂದು ಕೂಗಿದ ಮುಸ್ಲಿಂ ಯುವಕ ಅರೆಸ್ಟ್
ಘಟನಾ ಸ್ಥಳ
ಆಯೇಷಾ ಬಾನು
|

Updated on:Mar 28, 2023 | 2:06 PM

Share

ಹಾಸನ: ಐತಿಹಾಸಿಕ ಬೇಲೂರು ಚನ್ನಕೇಶವ ರಥೋತ್ಸವದ (Beluru Channakeshava Temple) ಸಂದರ್ಭದಲ್ಲಿ ಕುರಾನ್ ಪಠಣಕ್ಕೆ (Quran) ವಿರೋಧ ವ್ಯಕ್ತಪಡಿಸಿ ಇಂದು ಹಿಂದೂಪರ ಸಂಘಟನೆ (Hindu Organizations) ಕಾರ್ಯಕರ್ತರು ಬೇಲೂರಿನ ದೇವಾಲಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ರಥೋತ್ಸವದ ವೇಳೆ ಕುರಾನ್ ಪಠಣೆ ಮಾಡಲು ಅವಕಾಶ ನೀಡಬಾರದು ಎಂದು ಆಗ್ರಹಿಸಿದರು. ಈ ವೇಳೆ ಮುಸ್ಲಿಂ ಯುವಕ ಬೈಕ್​ನಲ್ಲಿ ಬಂದು ‘ಕುರಾನ್ ಜಿಂದಾಬಾದ್​’ ಎಂದು ಕೂಗಿದ್ದಾನೆ. ಈ ವೇಳೆ ಕಾರ್ಯಕರ್ತರು ಮತ್ತು ಯುವಕನ ನಡುವೆ ವಾಗ್ವಾದವಾಗಿದ್ದು ಬೇಲೂರು ಪೊಲೀಸರು ಠಾಣೆ ಚಾರ್ಜ್ ಮಾಡಿ ಯುವಕನನ್ನು ವಶಕ್ಕೆ ಪಡೆದು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಈಗ ಐಪಿಸಿ ಸೆಕ್ಷನ್ 107 ರ ಅಡಿಯಲ್ಲಿ ಮುಂಜಾಗ್ರತಾ ಕ್ರಮದ ಬಂಧನ ಮಾಡಿ ತಹಶೀಲ್ದಾರ್ ಮುಂದೆ ಹಾಜರುಪಡಿಸಲಿದ್ದಾರೆ.

ಬೇಲೂರಿನ ಚನ್ನಕೇಶವ ಸ್ವಾಮಿ ರಥೋತ್ಸವದ ವೇಳೆ ಕುರಾನ್ ಪಠಣ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಶಾಕಿಬ್ ಹುಸೇನ್(33) ಎಂಬ ಯುವಕ ಕುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. ಸದ್ಯ ಈತನನ್ನು ವಶಕ್ಕೆ ಪಡೆಯಲಾಗಿದೆ. ಈತ ಬೇಲೂರು ಪಟ್ಟಣದ ಮೀನುಮಾರುಕಟ್ಟೆ ಪ್ರದೇಶದ ನಿವಾಸಿ. ಗುಜರಿ ಅಂಗಡಿ ನಡೆಸುತ್ತಿರುವ ಶಾಕಿಬ್ ಹುಸೇನ್ ಪ್ರತಿಭಟನೆ ವೇಳೆ ಮೆರವಣಿಗೆಗೆ ಎದುರಾಗಿ ಬೈಕ್ ನಲ್ಲಿ ತೆರಳುತ್ತಿದ್ದ. ಆಗ ಹಿಂದೂಪರ ಸಂಘಟನೆ ಕಾರ್ಯಕರ್ತರು ಕುರಾನ್ ಪಠಣ ರದ್ದಾಗಲಿ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಅವರಿಗೆ ಕೌಂಟರ್ ನೀಡುವ ಸಲುವಾಗಿ ಏಕಾ ಏಕಿ ಕುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. ಘೋಷಣೆ ಕೂಗುತ್ತಲೆ ಯುವಕನನ್ನ ಅಟ್ಟಿಸಿಕೊಂಡು ಹೋಗಿ ಆತನ ಮೇಲೆ ಹಲ್ಲೆ ಮಾಡಲು ಹೋರಾಟಗಾರರು ಮುಂದಾಗಿದ್ದಾರೆ. ಆಗ ಹೋರಾಟಗಾರರು ಮತ್ತು ಯುವಕನ ನಡುವೆ ಮಾತಿನ ಚಕಮಕಿಯಾಗಿದೆ. ಕೂಡಲೆ ಯುವಕನನ್ನು ವಶಕ್ಕೆ ಪಡೆದು ಪೊಲೀಸರು ಅನಾಹುತ ತಪ್ಫಿಸಿದ್ದಾರೆ.

ಸದ್ಯ ಈಗ ಐಪಿಸಿ ಸೆಕ್ಷನ್ 107 ರ ಅಡಿಯಲ್ಲಿ ಮುಂಜಾಗ್ರತಾ ಕ್ರಮದ ಬಂಧನ ಮಾಡಿ ಪೊಲೀಸರು ಯುವಕನ್ನು ಬಂಧಿಸಿ ತಹಶೀಲ್ದಾರ್ ಮುಂದೆ ಹಾಜರುಪಡಿಸಲಿದ್ದಾರೆ. ಏಪ್ರಿಲ್ 4 ರ ಬೇಲೂರು ಜಾತ್ರೆ ವರೆಗೆ ಯಾವುದೇ ಅನಾಹುತ ಆಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಅರಸ್ಟ್ ಮಾಡಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:02 pm, Tue, 28 March 23

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ