Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: 9 ವರ್ಷದಿಂದ ಪ್ರೀತಿಸಿದ ಯುವತಿ‌ ಕೈಕೊಟ್ಟ ಆರೋಪ; ಮನನೊಂದ‌ ಪ್ರೇಮಿ ಆತ್ಮಹತ್ಯೆಗೆ ಯತ್ನ

ತಮ್ಮದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ ಜೀವಿತ್, ಆಕೆ ತನ್ನನ್ನೇ ಮಧುವೆಯಾಗಬೇಕು. ಇಲ್ಲ ತನಗಾದ ಮೋಸಕ್ಕೆ ನ್ಯಾಯ ಸಿಗಬೇಕು. ಒಂಬತ್ತು ವರ್ಷಗಳು ಅನ್ಯೋನ್ಯವಾಗಿದ್ದು, ಪರಸ್ಪರ ಪ್ರೀತಿಸಿ ಈಗ ಕೈಕೊಟ್ಟಿರೋದಾಗಿ ಜೀವಿತ್ ಆರೋಪ ಮಾಡಿದ್ದಾನೆ.

ಹಾಸನ: 9 ವರ್ಷದಿಂದ ಪ್ರೀತಿಸಿದ ಯುವತಿ‌ ಕೈಕೊಟ್ಟ ಆರೋಪ; ಮನನೊಂದ‌ ಪ್ರೇಮಿ ಆತ್ಮಹತ್ಯೆಗೆ ಯತ್ನ
ಜೀವಿತ್(29) ಆತ್ಮಹತ್ಯೆಗೆ ಯತ್ನಿಸಿದ ಯುವಕ
Follow us
TV9 Web
| Updated By: preethi shettigar

Updated on:Nov 27, 2021 | 2:13 PM

ಹಾಸನ: ಕಳೆದ 9 ವರ್ಷಗಳಿಂದ ಪ್ರೀತಿಸಿ ಈಗ ಮದುವೆಯಾಗಲು ನಿರಾಕರಿಸುತ್ತಿರುವುದಾಗಿ ಯುವತಿ ವಿರುದ್ಧ ಆರೋಪ ಮಾಡಿದ ಪ್ರೇಮಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಜೀವಿತ್(29) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈಗ ಮನೆಯವರ ಒತ್ತಡದಿಂದ ಆಕೆ ತನ್ನನ್ನು ನಿರಾಕರಿಸುತ್ತಿದ್ದಾಳೆ. ಒಂಬತ್ತು ವರ್ಷಗಳಿಂದ ಆಕೆಯ ಹುಟ್ಟುಹಬ್ಬಕ್ಕೆ ತಾನೇ ಕೇಕ್‌ ಕಟ್ ಮಾಡಿಸುತ್ತಿದ್ದೆ. ತಾನೇ ಆಕೆಗೆ ಮೊದಲ ಶುಭಾಶಯ ಹೇಳುತ್ತಿದ್ದೆ. ನೆನ್ನೆ ಆಕೆ ಹುಟ್ಟುಹಬ್ಬದಂದು ಆಕೆ ಸಿಕ್ಕಿಲ್ಲ ಎಂದು ನೊಂದು ಜೀವಿತ್ ವಿಷ ಸೇವಿಸಿದ್ದಾನೆ. ಸದ್ಯ ಅಸ್ವಸ್ಥಗೊಂಡಿರುವ‌ ಪ್ರೇಮಿ ಜೀವಿತ್​ಗೆ ಹಾಸನದ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ತಮ್ಮದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ ಜೀವಿತ್, ಆಕೆ ತನ್ನನ್ನೇ ಮಧುವೆಯಾಗಬೇಕು. ಇಲ್ಲ ತನಗಾದ ಮೋಸಕ್ಕೆ ನ್ಯಾಯ ಸಿಗಬೇಕು. ಒಂಬತ್ತು ವರ್ಷಗಳು ಅನ್ಯೋನ್ಯವಾಗಿದ್ದು, ಪರಸ್ಪರ ಪ್ರೀತಿಸಿ ಈಗ ಕೈಕೊಟ್ಟಿರೋದಾಗಿ ಜೀವಿತ್ ಆರೋಪ ಮಾಡಿದ್ದಾನೆ.

ಯುವತಿಗೆ ತನ್ನನ್ನು ಮದುವೆಯಾಗು ಎಂದು ಜೀವಿತ್ ಪೀಡಿಸುತ್ತಿರುವುದಾಗಿ ಆರೋಪಿಸಿ ಯುವತಿ ಪೋಷಕರು ದೂರು ನೀಡಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಗಂಡಸಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ದೂರು ಸ್ವೀಕರಿಸಿ ಗಂಡಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಕಲಬುರಗಿ: ಕಾನ್ಸ್​ಟೇಬಲ್ ಸಾವು- ಮದುವೆಗೆ 4 ದಿನ ಬಾಕಿಯಿರುವಾಗ ಶವವಾಗಿ ಪತ್ತೆ ಕಲಬುರಗಿ ಗ್ರಾಮೀಣ ಠಾಣೆ ಕಾನ್ಸ್​ಟೇಬಲ್ ಶ್ರೀನಾಥ್(25) ಕಲಬುರಗಿ ತಾಲೂಕಿನ ಸಾವಳಗಿ ರೈಲು ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ. ಅಫಜಲಪುರ ತಾಲೂಕಿನ ಮದರಾ ಕೆ ಗ್ರಾಮದ ಶ್ರೀನಾಥ್ ಅವರ ವಿವಾಹ ಡಿಸೆಂಬರ್ 1ಕ್ಕೆ ನಿಶ್ಚಯವಾಗಿತ್ತು. ಮದುವೆಗೆ 4 ದಿನ ಬಾಕಿಯಿರುವಾಗಲೇ ಶವವಾಗಿ ಪತ್ತೆಯಾಗಿದ್ದಾರೆ. ವಾಡಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶ್ರೀನಾಥ್ ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಇಂದು ಮುಂಜಾನೆ ರೈಲು ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ. ಡಿಸೆಂಬರ್ ಒಂದರಂದು ಕಲಬುರಗಿ ನಗರದಲ್ಲಿ ವಿವಾಹ ನಿಶ್ಚಯವಾಗಿತ್ತು.

ಇದನ್ನೂ ಓದಿ: ಕಲಬುರಗಿ ಪಾಲಿಕೆ ಆಯುಕ್ತರ ವಿರುದ್ಧ ವಂಚನೆ ಆರೋಪ; ಸಾಮಾಜಿಕ ಜಾಲತಾಣದ ಮೂಲಕ ಯುವತಿಯಿಂದ ಸಿಎಂಗೆ ದೂರು

Constable suicide: ಉಪ್ಪಾರಪೇಟೆ ಲಾಡ್ಜ್​ನಲ್ಲಿ ಆತ್ಮಹತ್ಯೆಗೆ ಶರಣಾದ ಗೌರಿಬಿದನೂರು ಕಾನ್ಸ್​​ಟೇಬಲ್

Published On - 1:14 pm, Sat, 27 November 21

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ