AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: 9 ವರ್ಷದಿಂದ ಪ್ರೀತಿಸಿದ ಯುವತಿ‌ ಕೈಕೊಟ್ಟ ಆರೋಪ; ಮನನೊಂದ‌ ಪ್ರೇಮಿ ಆತ್ಮಹತ್ಯೆಗೆ ಯತ್ನ

ತಮ್ಮದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ ಜೀವಿತ್, ಆಕೆ ತನ್ನನ್ನೇ ಮಧುವೆಯಾಗಬೇಕು. ಇಲ್ಲ ತನಗಾದ ಮೋಸಕ್ಕೆ ನ್ಯಾಯ ಸಿಗಬೇಕು. ಒಂಬತ್ತು ವರ್ಷಗಳು ಅನ್ಯೋನ್ಯವಾಗಿದ್ದು, ಪರಸ್ಪರ ಪ್ರೀತಿಸಿ ಈಗ ಕೈಕೊಟ್ಟಿರೋದಾಗಿ ಜೀವಿತ್ ಆರೋಪ ಮಾಡಿದ್ದಾನೆ.

ಹಾಸನ: 9 ವರ್ಷದಿಂದ ಪ್ರೀತಿಸಿದ ಯುವತಿ‌ ಕೈಕೊಟ್ಟ ಆರೋಪ; ಮನನೊಂದ‌ ಪ್ರೇಮಿ ಆತ್ಮಹತ್ಯೆಗೆ ಯತ್ನ
ಜೀವಿತ್(29) ಆತ್ಮಹತ್ಯೆಗೆ ಯತ್ನಿಸಿದ ಯುವಕ
TV9 Web
| Edited By: |

Updated on:Nov 27, 2021 | 2:13 PM

Share

ಹಾಸನ: ಕಳೆದ 9 ವರ್ಷಗಳಿಂದ ಪ್ರೀತಿಸಿ ಈಗ ಮದುವೆಯಾಗಲು ನಿರಾಕರಿಸುತ್ತಿರುವುದಾಗಿ ಯುವತಿ ವಿರುದ್ಧ ಆರೋಪ ಮಾಡಿದ ಪ್ರೇಮಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಜೀವಿತ್(29) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈಗ ಮನೆಯವರ ಒತ್ತಡದಿಂದ ಆಕೆ ತನ್ನನ್ನು ನಿರಾಕರಿಸುತ್ತಿದ್ದಾಳೆ. ಒಂಬತ್ತು ವರ್ಷಗಳಿಂದ ಆಕೆಯ ಹುಟ್ಟುಹಬ್ಬಕ್ಕೆ ತಾನೇ ಕೇಕ್‌ ಕಟ್ ಮಾಡಿಸುತ್ತಿದ್ದೆ. ತಾನೇ ಆಕೆಗೆ ಮೊದಲ ಶುಭಾಶಯ ಹೇಳುತ್ತಿದ್ದೆ. ನೆನ್ನೆ ಆಕೆ ಹುಟ್ಟುಹಬ್ಬದಂದು ಆಕೆ ಸಿಕ್ಕಿಲ್ಲ ಎಂದು ನೊಂದು ಜೀವಿತ್ ವಿಷ ಸೇವಿಸಿದ್ದಾನೆ. ಸದ್ಯ ಅಸ್ವಸ್ಥಗೊಂಡಿರುವ‌ ಪ್ರೇಮಿ ಜೀವಿತ್​ಗೆ ಹಾಸನದ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ತಮ್ಮದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ ಜೀವಿತ್, ಆಕೆ ತನ್ನನ್ನೇ ಮಧುವೆಯಾಗಬೇಕು. ಇಲ್ಲ ತನಗಾದ ಮೋಸಕ್ಕೆ ನ್ಯಾಯ ಸಿಗಬೇಕು. ಒಂಬತ್ತು ವರ್ಷಗಳು ಅನ್ಯೋನ್ಯವಾಗಿದ್ದು, ಪರಸ್ಪರ ಪ್ರೀತಿಸಿ ಈಗ ಕೈಕೊಟ್ಟಿರೋದಾಗಿ ಜೀವಿತ್ ಆರೋಪ ಮಾಡಿದ್ದಾನೆ.

ಯುವತಿಗೆ ತನ್ನನ್ನು ಮದುವೆಯಾಗು ಎಂದು ಜೀವಿತ್ ಪೀಡಿಸುತ್ತಿರುವುದಾಗಿ ಆರೋಪಿಸಿ ಯುವತಿ ಪೋಷಕರು ದೂರು ನೀಡಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಗಂಡಸಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ದೂರು ಸ್ವೀಕರಿಸಿ ಗಂಡಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಕಲಬುರಗಿ: ಕಾನ್ಸ್​ಟೇಬಲ್ ಸಾವು- ಮದುವೆಗೆ 4 ದಿನ ಬಾಕಿಯಿರುವಾಗ ಶವವಾಗಿ ಪತ್ತೆ ಕಲಬುರಗಿ ಗ್ರಾಮೀಣ ಠಾಣೆ ಕಾನ್ಸ್​ಟೇಬಲ್ ಶ್ರೀನಾಥ್(25) ಕಲಬುರಗಿ ತಾಲೂಕಿನ ಸಾವಳಗಿ ರೈಲು ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ. ಅಫಜಲಪುರ ತಾಲೂಕಿನ ಮದರಾ ಕೆ ಗ್ರಾಮದ ಶ್ರೀನಾಥ್ ಅವರ ವಿವಾಹ ಡಿಸೆಂಬರ್ 1ಕ್ಕೆ ನಿಶ್ಚಯವಾಗಿತ್ತು. ಮದುವೆಗೆ 4 ದಿನ ಬಾಕಿಯಿರುವಾಗಲೇ ಶವವಾಗಿ ಪತ್ತೆಯಾಗಿದ್ದಾರೆ. ವಾಡಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶ್ರೀನಾಥ್ ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಇಂದು ಮುಂಜಾನೆ ರೈಲು ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ. ಡಿಸೆಂಬರ್ ಒಂದರಂದು ಕಲಬುರಗಿ ನಗರದಲ್ಲಿ ವಿವಾಹ ನಿಶ್ಚಯವಾಗಿತ್ತು.

ಇದನ್ನೂ ಓದಿ: ಕಲಬುರಗಿ ಪಾಲಿಕೆ ಆಯುಕ್ತರ ವಿರುದ್ಧ ವಂಚನೆ ಆರೋಪ; ಸಾಮಾಜಿಕ ಜಾಲತಾಣದ ಮೂಲಕ ಯುವತಿಯಿಂದ ಸಿಎಂಗೆ ದೂರು

Constable suicide: ಉಪ್ಪಾರಪೇಟೆ ಲಾಡ್ಜ್​ನಲ್ಲಿ ಆತ್ಮಹತ್ಯೆಗೆ ಶರಣಾದ ಗೌರಿಬಿದನೂರು ಕಾನ್ಸ್​​ಟೇಬಲ್

Published On - 1:14 pm, Sat, 27 November 21

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ