AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: 9 ವರ್ಷದಿಂದ ಪ್ರೀತಿಸಿದ ಯುವತಿ‌ ಕೈಕೊಟ್ಟ ಆರೋಪ; ಮನನೊಂದ‌ ಪ್ರೇಮಿ ಆತ್ಮಹತ್ಯೆಗೆ ಯತ್ನ

ತಮ್ಮದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ ಜೀವಿತ್, ಆಕೆ ತನ್ನನ್ನೇ ಮಧುವೆಯಾಗಬೇಕು. ಇಲ್ಲ ತನಗಾದ ಮೋಸಕ್ಕೆ ನ್ಯಾಯ ಸಿಗಬೇಕು. ಒಂಬತ್ತು ವರ್ಷಗಳು ಅನ್ಯೋನ್ಯವಾಗಿದ್ದು, ಪರಸ್ಪರ ಪ್ರೀತಿಸಿ ಈಗ ಕೈಕೊಟ್ಟಿರೋದಾಗಿ ಜೀವಿತ್ ಆರೋಪ ಮಾಡಿದ್ದಾನೆ.

ಹಾಸನ: 9 ವರ್ಷದಿಂದ ಪ್ರೀತಿಸಿದ ಯುವತಿ‌ ಕೈಕೊಟ್ಟ ಆರೋಪ; ಮನನೊಂದ‌ ಪ್ರೇಮಿ ಆತ್ಮಹತ್ಯೆಗೆ ಯತ್ನ
ಜೀವಿತ್(29) ಆತ್ಮಹತ್ಯೆಗೆ ಯತ್ನಿಸಿದ ಯುವಕ
TV9 Web
| Edited By: |

Updated on:Nov 27, 2021 | 2:13 PM

Share

ಹಾಸನ: ಕಳೆದ 9 ವರ್ಷಗಳಿಂದ ಪ್ರೀತಿಸಿ ಈಗ ಮದುವೆಯಾಗಲು ನಿರಾಕರಿಸುತ್ತಿರುವುದಾಗಿ ಯುವತಿ ವಿರುದ್ಧ ಆರೋಪ ಮಾಡಿದ ಪ್ರೇಮಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಜೀವಿತ್(29) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈಗ ಮನೆಯವರ ಒತ್ತಡದಿಂದ ಆಕೆ ತನ್ನನ್ನು ನಿರಾಕರಿಸುತ್ತಿದ್ದಾಳೆ. ಒಂಬತ್ತು ವರ್ಷಗಳಿಂದ ಆಕೆಯ ಹುಟ್ಟುಹಬ್ಬಕ್ಕೆ ತಾನೇ ಕೇಕ್‌ ಕಟ್ ಮಾಡಿಸುತ್ತಿದ್ದೆ. ತಾನೇ ಆಕೆಗೆ ಮೊದಲ ಶುಭಾಶಯ ಹೇಳುತ್ತಿದ್ದೆ. ನೆನ್ನೆ ಆಕೆ ಹುಟ್ಟುಹಬ್ಬದಂದು ಆಕೆ ಸಿಕ್ಕಿಲ್ಲ ಎಂದು ನೊಂದು ಜೀವಿತ್ ವಿಷ ಸೇವಿಸಿದ್ದಾನೆ. ಸದ್ಯ ಅಸ್ವಸ್ಥಗೊಂಡಿರುವ‌ ಪ್ರೇಮಿ ಜೀವಿತ್​ಗೆ ಹಾಸನದ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ತಮ್ಮದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ ಜೀವಿತ್, ಆಕೆ ತನ್ನನ್ನೇ ಮಧುವೆಯಾಗಬೇಕು. ಇಲ್ಲ ತನಗಾದ ಮೋಸಕ್ಕೆ ನ್ಯಾಯ ಸಿಗಬೇಕು. ಒಂಬತ್ತು ವರ್ಷಗಳು ಅನ್ಯೋನ್ಯವಾಗಿದ್ದು, ಪರಸ್ಪರ ಪ್ರೀತಿಸಿ ಈಗ ಕೈಕೊಟ್ಟಿರೋದಾಗಿ ಜೀವಿತ್ ಆರೋಪ ಮಾಡಿದ್ದಾನೆ.

ಯುವತಿಗೆ ತನ್ನನ್ನು ಮದುವೆಯಾಗು ಎಂದು ಜೀವಿತ್ ಪೀಡಿಸುತ್ತಿರುವುದಾಗಿ ಆರೋಪಿಸಿ ಯುವತಿ ಪೋಷಕರು ದೂರು ನೀಡಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಗಂಡಸಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ದೂರು ಸ್ವೀಕರಿಸಿ ಗಂಡಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಕಲಬುರಗಿ: ಕಾನ್ಸ್​ಟೇಬಲ್ ಸಾವು- ಮದುವೆಗೆ 4 ದಿನ ಬಾಕಿಯಿರುವಾಗ ಶವವಾಗಿ ಪತ್ತೆ ಕಲಬುರಗಿ ಗ್ರಾಮೀಣ ಠಾಣೆ ಕಾನ್ಸ್​ಟೇಬಲ್ ಶ್ರೀನಾಥ್(25) ಕಲಬುರಗಿ ತಾಲೂಕಿನ ಸಾವಳಗಿ ರೈಲು ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ. ಅಫಜಲಪುರ ತಾಲೂಕಿನ ಮದರಾ ಕೆ ಗ್ರಾಮದ ಶ್ರೀನಾಥ್ ಅವರ ವಿವಾಹ ಡಿಸೆಂಬರ್ 1ಕ್ಕೆ ನಿಶ್ಚಯವಾಗಿತ್ತು. ಮದುವೆಗೆ 4 ದಿನ ಬಾಕಿಯಿರುವಾಗಲೇ ಶವವಾಗಿ ಪತ್ತೆಯಾಗಿದ್ದಾರೆ. ವಾಡಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶ್ರೀನಾಥ್ ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಇಂದು ಮುಂಜಾನೆ ರೈಲು ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ. ಡಿಸೆಂಬರ್ ಒಂದರಂದು ಕಲಬುರಗಿ ನಗರದಲ್ಲಿ ವಿವಾಹ ನಿಶ್ಚಯವಾಗಿತ್ತು.

ಇದನ್ನೂ ಓದಿ: ಕಲಬುರಗಿ ಪಾಲಿಕೆ ಆಯುಕ್ತರ ವಿರುದ್ಧ ವಂಚನೆ ಆರೋಪ; ಸಾಮಾಜಿಕ ಜಾಲತಾಣದ ಮೂಲಕ ಯುವತಿಯಿಂದ ಸಿಎಂಗೆ ದೂರು

Constable suicide: ಉಪ್ಪಾರಪೇಟೆ ಲಾಡ್ಜ್​ನಲ್ಲಿ ಆತ್ಮಹತ್ಯೆಗೆ ಶರಣಾದ ಗೌರಿಬಿದನೂರು ಕಾನ್ಸ್​​ಟೇಬಲ್

Published On - 1:14 pm, Sat, 27 November 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ