AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಜಿಲ್ಲೆಯಲ್ಲಿ ಮಿತಿಮೀರಿದ ಕಾಡಾನೆ ಹಾವಳಿ: ಅಧಿಕಾರಿಗಳ ಸಭೆ

ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮಿತಿಮೀರಿದ ವಿಚಾರಕ್ಕೆ ಸಂಬಂಧಿಸಿದಂತೆ, ಸಕಲೇಶಪುರ ಪಟ್ಟಣದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಜನರ ಆಕ್ರೋಶ ಮುಗಿಲು ಮುಟ್ಟಿದೆ.

ಹಾಸನ ಜಿಲ್ಲೆಯಲ್ಲಿ ಮಿತಿಮೀರಿದ ಕಾಡಾನೆ ಹಾವಳಿ: ಅಧಿಕಾರಿಗಳ ಸಭೆ
ಕಾಡಾನೆ ಹಾವಳಿ ಮಿತಿಮೀರಿದ ವಿಚಾರ ಸಂಬಂಧಿಸಿ ಅಧಿಕಾರಿಗಳ ಸಭೆ
shruti hegde
| Edited By: ಸಾಧು ಶ್ರೀನಾಥ್​|

Updated on: Feb 16, 2021 | 5:39 PM

Share

ಹಾಸನ: ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮಿತಿಮೀರಿದ ವಿಚಾರಕ್ಕೆ ಸಂಬಂಧಿಸಿದಂತೆ, ಸಕಲೇಶಪುರ ಪಟ್ಟಣದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಹಾಜರಿದ್ದ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ ನೀಡಿದ್ದಾರೆ. ಹಾಸನ, ಚಿಕ್ಕಮಗಳೂರು, ಕೊಡಗು, ಬೇಲೂರು ಭಾಗದ ಬಹುತೇಕ ಕಾಫಿ ಬೆಳೆಗಾರರು ಬಿಜೆಪಿಗೆ ಮತ ಹಾಕುತ್ತಾರೆ. ಈ ಕಾರಣಕ್ಕಾದರೂ ಅವರ ಸಮಸ್ಯೆ ಕಡೆ ಗಮನಹರಿಸಿ ಎಂದು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ, ಅರಣ್ಯ ಸಚಿವರಿಗೆ ಮನವಿ ಮಾಡಿದ್ದಾರೆ.

ಸಭೆಯಲ್ಲಿ ಜನರ ಅಹವಾಲು ಆಲಿಸದ ಸಚಿವರ ವಿರುದ್ದ ಜನರ ಅಸಮಧಾನ ವ್ಯಕ್ತಪಡಿಸಿದ್ದಾರೆ. ಶಾಸಕರು ಸಂಸದರು ಮಾತನಾಡುತ್ತಿರುವಾಗಲೇ, ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಮಾತನಾಡಲು ಮುಂದಾಗಿದ್ದಾರೆ. ಈ ವೇಳೆ ಸಭೆಯಲ್ಲಿ ಜನರ ಅಹವಾಲು ಕೇಳದೇ ನೀವು ಹೇಗೆ ಮಾತನಾಡುತ್ತೀರಾ? ಮೊದಲು ನಮ್ಮ ಮಾತು ಕೇಳಿ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Elephant Attack ಕಾಡಾನೆ ದಾಳಿಗೆ ಮತ್ತೋರ್ವ ವ್ಯಕ್ತಿ ಬಲಿ.. ಹಾಸನದಲ್ಲಿ ಹೆಚ್ಚುತ್ತಿದೆ ಕಾಡಾನೆ ಹಾವಳಿ

ಈ ಕುರಿತಂತೆ ಮಾತನಾಡುತ್ತಿದ್ದ ಪ್ರಜ್ವಲ್ ರೆವಣ್ಣ, ನನಗೇನೂ ಬೇಜಾರಿಲ್ಲ. ಮೊದಲು ಜನರ ಸಮಸ್ಯೆ ಬಗೆಹರಿಸಿ. ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ವಾರಕ್ಕೊಂದು ಧರಣಿ ಮಾಡುತ್ತಿದ್ದರು. ಬಿಎಸ್‌ವೈ ಮುಖ್ಯಮಂತ್ರಿಯಾದ ಬಳಿಕ ಒಂದು ಪ್ರತಿಭಟನೆಯೂ ಆಗಿಲ್ಲ. ನಿಮ್ಮ ಮೇಲೆ ಕಾಫಿ ಬೆಳೆಗಾರರಿಗೆ ಅಷ್ಟೊಂದು ಅಭಿಮಾನ. ಇದಕ್ಕಾದರೂ ನೀವು ಅವರ ಸಮಸ್ಯೆಯನ್ನು ಬಗೆಹರಿಸಿ ಎಂದು ಕೇಳಿದ್ದಾರೆ.

officers meeting in hassan elephant attack

ಅಧಿಕಾರಿಗಳ ಸಭೆ

Follow Us
shruti hegde
shruti hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು