AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಸೋದರಳಿಯ ಶ್ರೇಯಸ್ ಪಟೇಲ್ ವಿರುದ್ಧ ಬಂಡಾಯವೆದ್ದ ರಾಜೇಶ್ವರಿ; ಕಾಂಗ್ರೆಸ್​ಗೆ ತಲೆಬಿಸಿ

ಲೋಕಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಮಾಡುತ್ತಿದ್ದಂತೆ ಬಂಡಾಯದ ಬಿಸಿ ಬಿಜೆಪಿಯನ್ನು ಸುಡುತ್ತಿದೆ. ಈ ನಡುವೆ, ಹಾಸನದಲ್ಲಿ ಕಾಂಗ್ರೆಸ್​ನಲ್ಲಿ ಭಿನ್ನಮತ ಶುರುವಾಗಿದೆ. ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಶ್ರೇಯಸ್ ಪಟೇಲ್​ ಅವರಿಗೆ ಘೋಷಿಸಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ದಿ.ಜಿ.ಪುಟ್ಟಸ್ವಾಮಿಗೌಡ ಅವರ ಪುತ್ರಿ ಪಿ ರಾಜೇಶ್ವರಿ ಅವರು ಸೋದರಳಿಯ ಶ್ರೇಯಸ್ ವಿರುದ್ಧವೇ ಬಂಡಾಯವೇಳುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಕ್ಷೇತ್ರದಲ್ಲಿ ಪಕ್ಷೇತರವಾಗಿ ಕಣಕ್ಕಿಳಿಯಲು ಮುಂದಾಗಿದ್ದಾರೆ.

ಹಾಸನದಲ್ಲಿ ಸೋದರಳಿಯ ಶ್ರೇಯಸ್ ಪಟೇಲ್ ವಿರುದ್ಧ ಬಂಡಾಯವೆದ್ದ ರಾಜೇಶ್ವರಿ; ಕಾಂಗ್ರೆಸ್​ಗೆ ತಲೆಬಿಸಿ
ಹಾಸನದಲ್ಲಿ ಸೋದರಳಿಯ ಶ್ರೇಯಸ್ ಪಟೇಲ್ ವಿರುದ್ಧ ಬಂಡಾಯವೆದ್ದ ರಾಜೇಶ್ವರಿ
Follow us
ಮಂಜುನಾಥ ಕೆಬಿ
| Updated By: Rakesh Nayak Manchi

Updated on: Mar 17, 2024 | 3:28 PM

ಹಾಸನ, ಮಾ.17: ಲೋಕಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಮಾಡುತ್ತಿದ್ದಂತೆ ಬಂಡಾಯದ ಬಿಸಿ ಬಿಜೆಪಿಯನ್ನು ಸುಡುತ್ತಿದೆ. ಈ ನಡುವೆ, ಹಾಸನದಲ್ಲಿ (Hassan) ಕಾಂಗ್ರೆಸ್​ನಲ್ಲಿ ಭಿನ್ನಮತ ಶುರುವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಹಾಸನ ಕ್ಷೇತ್ರದಲ್ಲಿ ಮಾಜಿ ಸಂಸದ ದಿವಂಗತ ಜಿ.ಪುಟ್ಟಸ್ವಾಮಿಗೌಡ ಅವರ ಮೊಮ್ಮಗ ಶ್ರೇಯಸ್ ಪಟೇಲ್ (Shreyas Patel)​ ಅವರಿಗೆ ಮಣೆ ಹಾಕಿದೆ. ಇದರಿಂದ ಅಸಮಾಧಾನಗೊಂಡಿರುವ ಪುಟ್ಟಸ್ವಾಮಿಗೌಡ ಪುತ್ರಿ ಪಿ ರಾಜೇಶ್ವರಿ (P Rajeshwari) ಅವರು ಸೋದರಳಿಯ ಶ್ರೇಯಸ್ ವಿರುದ್ಧವೇ ಬಂಡಾಯವೇಳುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಕ್ಷೇತ್ರದಲ್ಲಿ ಪಕ್ಷೇತರವಾಗಿ ಕಣಕ್ಕಿಳಿಯಲು ಮುಂದಾಗಿದ್ದಾರೆ.

ವಿಧಾನಸಭೆ ಚುನಾವಣೆ ಸಮಯದಲ್ಲಿ ರಾಜೇಶ್ವರಿ ಅವರು ಕಾಂಗ್ರೆಸ್ ಟಿಕೆಟ್​ಗಾಗಿ ಭಾರೀ ಪೈಪೋಟಿ ನಡೆಸಿದ್ದರೂ ಕೈತಪ್ಪಿತ್ತು. ಇದೀಗ ಲೋಕಸಭೆ ಚುನಾವಣೆಯಲ್ಲೂ ಹಾಸನ ಕ್ಷೇತ್ರದ ಟಿಕೆಟ್​ಗಾಗಿ ಲಾಭಿ ನಡೆಸಿದ್ದರು. ಇನ್ನೊಂದೆಡೆ, ಇವರ ಸೋದರಳಿ ಶ್ರೇಯಸ್ ಪಟೇಲ್ ಕೂಡ ಟಿಕೆಟ್​ಗಾಗಿ ಪೈಪೋಟಿ ನಡೆಸಿದ್ದರು. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಶ್ರೇಯಸ್ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.

ಇದನ್ನೂ ಓದಿ: ಹಾಸನ ಕ್ಷೇತ್ರದ ಗೆಲುವಿಗೆ ನಿರ್ಣಾಯಕವಾಗಿರುವ ಕಡೂರಿನಲ್ಲಿ ದಳಪತಿ ದೇವೇಗೌಡ ರಣತಂತ್ರ

ಪದೇ ಪದೇ ಕಾಂಗ್ರೆಸ್ ಹೈ ಕಮಾಂಡ್​ನಿಂದ ಅನ್ಯಾಯವಾಗುತ್ತಿದೆ ಎಂದು ಆಕ್ರೋಶಗೊಂಡಿರುವ ರಾಜೇಶ್ವರಿ ಅವರು ಹಾಸನದಲ್ಲಿ ಪಕ್ಷೇತರರ ಅಭ್ಯರ್ಥಿಯಾಗಿ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ. ಆ ಮೂಲಕ ಸೋದರಳಿಯನ ವಿರುದ್ದವೇ ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ರಾಜೇಶ್ವರಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲೇ ಬೆಂಬಲಿಗರ ಸಭೆ ಕರೆದು ತೀರ್ಮಾನ ಮಾಡಲು ರಾಜೇಶ್ವರಿ ಮತ್ತು ಕುಟುಂಬಸ್ಥರು ಮುಂದಾಗಿದ್ದಾರೆ. ಇದು ಸಹಜವಾಗಿ ಜಿಲ್ಲಾ ಕಾಂಗ್ರೆಸ್, ರಾಜ್ಯ ಹಾಗೂ ಹೈಕಮಾಂಡ್ ನಾಯಕರಿಗೆ ತಲೆಬಿಸಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ