AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಸೋದರಳಿಯ ಶ್ರೇಯಸ್ ಪಟೇಲ್ ವಿರುದ್ಧ ಬಂಡಾಯವೆದ್ದ ರಾಜೇಶ್ವರಿ; ಕಾಂಗ್ರೆಸ್​ಗೆ ತಲೆಬಿಸಿ

ಲೋಕಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಮಾಡುತ್ತಿದ್ದಂತೆ ಬಂಡಾಯದ ಬಿಸಿ ಬಿಜೆಪಿಯನ್ನು ಸುಡುತ್ತಿದೆ. ಈ ನಡುವೆ, ಹಾಸನದಲ್ಲಿ ಕಾಂಗ್ರೆಸ್​ನಲ್ಲಿ ಭಿನ್ನಮತ ಶುರುವಾಗಿದೆ. ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಶ್ರೇಯಸ್ ಪಟೇಲ್​ ಅವರಿಗೆ ಘೋಷಿಸಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ದಿ.ಜಿ.ಪುಟ್ಟಸ್ವಾಮಿಗೌಡ ಅವರ ಪುತ್ರಿ ಪಿ ರಾಜೇಶ್ವರಿ ಅವರು ಸೋದರಳಿಯ ಶ್ರೇಯಸ್ ವಿರುದ್ಧವೇ ಬಂಡಾಯವೇಳುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಕ್ಷೇತ್ರದಲ್ಲಿ ಪಕ್ಷೇತರವಾಗಿ ಕಣಕ್ಕಿಳಿಯಲು ಮುಂದಾಗಿದ್ದಾರೆ.

ಹಾಸನದಲ್ಲಿ ಸೋದರಳಿಯ ಶ್ರೇಯಸ್ ಪಟೇಲ್ ವಿರುದ್ಧ ಬಂಡಾಯವೆದ್ದ ರಾಜೇಶ್ವರಿ; ಕಾಂಗ್ರೆಸ್​ಗೆ ತಲೆಬಿಸಿ
ಹಾಸನದಲ್ಲಿ ಸೋದರಳಿಯ ಶ್ರೇಯಸ್ ಪಟೇಲ್ ವಿರುದ್ಧ ಬಂಡಾಯವೆದ್ದ ರಾಜೇಶ್ವರಿ
ಮಂಜುನಾಥ ಕೆಬಿ
| Edited By: |

Updated on: Mar 17, 2024 | 3:28 PM

Share

ಹಾಸನ, ಮಾ.17: ಲೋಕಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಮಾಡುತ್ತಿದ್ದಂತೆ ಬಂಡಾಯದ ಬಿಸಿ ಬಿಜೆಪಿಯನ್ನು ಸುಡುತ್ತಿದೆ. ಈ ನಡುವೆ, ಹಾಸನದಲ್ಲಿ (Hassan) ಕಾಂಗ್ರೆಸ್​ನಲ್ಲಿ ಭಿನ್ನಮತ ಶುರುವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಹಾಸನ ಕ್ಷೇತ್ರದಲ್ಲಿ ಮಾಜಿ ಸಂಸದ ದಿವಂಗತ ಜಿ.ಪುಟ್ಟಸ್ವಾಮಿಗೌಡ ಅವರ ಮೊಮ್ಮಗ ಶ್ರೇಯಸ್ ಪಟೇಲ್ (Shreyas Patel)​ ಅವರಿಗೆ ಮಣೆ ಹಾಕಿದೆ. ಇದರಿಂದ ಅಸಮಾಧಾನಗೊಂಡಿರುವ ಪುಟ್ಟಸ್ವಾಮಿಗೌಡ ಪುತ್ರಿ ಪಿ ರಾಜೇಶ್ವರಿ (P Rajeshwari) ಅವರು ಸೋದರಳಿಯ ಶ್ರೇಯಸ್ ವಿರುದ್ಧವೇ ಬಂಡಾಯವೇಳುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಕ್ಷೇತ್ರದಲ್ಲಿ ಪಕ್ಷೇತರವಾಗಿ ಕಣಕ್ಕಿಳಿಯಲು ಮುಂದಾಗಿದ್ದಾರೆ.

ವಿಧಾನಸಭೆ ಚುನಾವಣೆ ಸಮಯದಲ್ಲಿ ರಾಜೇಶ್ವರಿ ಅವರು ಕಾಂಗ್ರೆಸ್ ಟಿಕೆಟ್​ಗಾಗಿ ಭಾರೀ ಪೈಪೋಟಿ ನಡೆಸಿದ್ದರೂ ಕೈತಪ್ಪಿತ್ತು. ಇದೀಗ ಲೋಕಸಭೆ ಚುನಾವಣೆಯಲ್ಲೂ ಹಾಸನ ಕ್ಷೇತ್ರದ ಟಿಕೆಟ್​ಗಾಗಿ ಲಾಭಿ ನಡೆಸಿದ್ದರು. ಇನ್ನೊಂದೆಡೆ, ಇವರ ಸೋದರಳಿ ಶ್ರೇಯಸ್ ಪಟೇಲ್ ಕೂಡ ಟಿಕೆಟ್​ಗಾಗಿ ಪೈಪೋಟಿ ನಡೆಸಿದ್ದರು. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಶ್ರೇಯಸ್ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.

ಇದನ್ನೂ ಓದಿ: ಹಾಸನ ಕ್ಷೇತ್ರದ ಗೆಲುವಿಗೆ ನಿರ್ಣಾಯಕವಾಗಿರುವ ಕಡೂರಿನಲ್ಲಿ ದಳಪತಿ ದೇವೇಗೌಡ ರಣತಂತ್ರ

ಪದೇ ಪದೇ ಕಾಂಗ್ರೆಸ್ ಹೈ ಕಮಾಂಡ್​ನಿಂದ ಅನ್ಯಾಯವಾಗುತ್ತಿದೆ ಎಂದು ಆಕ್ರೋಶಗೊಂಡಿರುವ ರಾಜೇಶ್ವರಿ ಅವರು ಹಾಸನದಲ್ಲಿ ಪಕ್ಷೇತರರ ಅಭ್ಯರ್ಥಿಯಾಗಿ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ. ಆ ಮೂಲಕ ಸೋದರಳಿಯನ ವಿರುದ್ದವೇ ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ರಾಜೇಶ್ವರಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲೇ ಬೆಂಬಲಿಗರ ಸಭೆ ಕರೆದು ತೀರ್ಮಾನ ಮಾಡಲು ರಾಜೇಶ್ವರಿ ಮತ್ತು ಕುಟುಂಬಸ್ಥರು ಮುಂದಾಗಿದ್ದಾರೆ. ಇದು ಸಹಜವಾಗಿ ಜಿಲ್ಲಾ ಕಾಂಗ್ರೆಸ್, ರಾಜ್ಯ ಹಾಗೂ ಹೈಕಮಾಂಡ್ ನಾಯಕರಿಗೆ ತಲೆಬಿಸಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​