ಹಾಸನದಲ್ಲಿ ಪ್ರಿಯಕರನ ಜತೆ ಸೇರಿ ಗಂಡನನ್ನು ಕೊಲೆ ಮಾಡಿಸಿದ ಪತ್ನಿ ಅರೆಸ್ಟ್

ಕೊಡಗು ಜಿಲ್ಲೆಯ ಸೋಮವಾಪೇಟೆ ತಾಲೂಕಿ ಶನಿವಾರಸಂತೆ ಸಂತೋಷ್, ಶ್ರುತಿ ಪ್ರೀತಿಸಿ ವಿವಾಹವಾಗಿದ್ದರು. 6 ವರ್ಷಗಳ ನಂತರ ಚಂದ್ರಶೇಖರನ ಜೊತೆ ಶ್ರುತಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಅನೈತಿಕ ಸಂಬಂಧಕ್ಕೆ ಗಂಡ ಅಡ್ಡ ಬರುತ್ತಿದ್ದಾನೆಂದು ಹೆಂಡತಿ ಕೊಲೆ ಮಾಡಿಸಿದ್ದಾಳೆ.

ಹಾಸನದಲ್ಲಿ ಪ್ರಿಯಕರನ ಜತೆ ಸೇರಿ ಗಂಡನನ್ನು ಕೊಲೆ ಮಾಡಿಸಿದ ಪತ್ನಿ ಅರೆಸ್ಟ್
ಸಂತೋಷ್ ಮತ್ತು ಪತ್ನಿ ಶ್ರುತಿ
Edited By: sandhya thejappa

Updated on: Jan 05, 2022 | 12:58 PM

ಹಾಸನ: ಪ್ರಿಯಕರನ ಜತೆ ಸೇರಿ ಗಂಡನನ್ನು ಕೊಲೆ ಮಾಡಿಸಿದ ಪತ್ನಿ ಅರೆಸ್ಟ್ ಆಗಿದ್ದಾಳೆ. ಯಸಳೂರು ಪೊಲೀಸರು ಪತ್ನಿ ಶ್ರುತಿ ಮತ್ತು ಆಕೆಯ ಪ್ರಿಯಕರನನ್ನ ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮರಡಿಕೆರೆ ಗ್ರಾಮದ ಬಳಿ ಡಿ.26ರಂದು ಸಂತೋಷ್(29) ಶವ ಸಿಕ್ಕಿತ್ತು. ಕೆಲಸ ಮುಗಿಸಿ ಬೈಕ್​ನಲ್ಲಿ ಬರುತ್ತಿದ್ದ ಸಂತೋಷ್ ಅಡ್ಡಗಟ್ಟಿ ಕೊಲೆ ಮಾಡಲಾಗಿದೆ. ಕೊಲೆ ಮಾಡಿ ಅಪಘಾತ ಎಂದು ಪತ್ನಿ ಬಿಂಬಿಸಲು ಯತ್ನಿಸಿದ್ದಾಳೆ.

ಕೊಡಗು ಜಿಲ್ಲೆಯ ಸೋಮವಾಪೇಟೆ ತಾಲೂಕಿ ಶನಿವಾರಸಂತೆ ಸಂತೋಷ್, ಶ್ರುತಿ ಪ್ರೀತಿಸಿ ವಿವಾಹವಾಗಿದ್ದರು. 6 ವರ್ಷಗಳ ನಂತರ ಚಂದ್ರಶೇಖರನ ಜೊತೆ ಶ್ರುತಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಅನೈತಿಕ ಸಂಬಂಧಕ್ಕೆ ಗಂಡ ಅಡ್ಡ ಬರುತ್ತಿದ್ದಾನೆಂದು ಹೆಂಡತಿ ಕೊಲೆ ಮಾಡಿಸಿದ್ದಾಳೆ. ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ಶ್ರುತಿ, ಪ್ರಿಯಕರ ಚಂದ್ರಶೇಖರ, ಸ್ನೇಹಿತ ಧರ್ಮರಾಜ್ ಬಂಧನಕ್ಕೊಳಗಾಗಿದ್ದಾರೆ.

ಬಂಧಿತ ಆರೋಪಿಗಳು

ವಿದ್ಯಾರ್ಥಿನಿ ನೇಣಿಗೆ ಶರಣು
ದ್ವೀತಿಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದಲ್ಲಿ ನಡೆದಿದೆ. ಪೋಷಕರು ಮಲಗಿದ ಬಳಿಕ ಮನೆಯ ರೂಮ್​ನಲ್ಲಿ ನೇಣಿಗೆ ಶರಣಾಗಿದ್ದಾರೆ. 17 ವರ್ಷದ ಹೇಮಾವತಿ ಮೃತ ದುರ್ದೈವಿ. ಹೇಮಾವತಿ ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದರು. ಬೆಳಿಗ್ಗೆ 8 ಗಂಟೆಯಾದರೂ ಹೊರಬಾರದ ಕಾರಣ ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇದನ್ನೂ ಓದಿ

ಬೆಂಗಳೂರನ್ನ ಕಾಡುತ್ತಿದೆ ಕೊರೊನಾ; 2 ದಿನದಲ್ಲಿ 152ಕ್ಕೆ ಏರಿಕೆಯಾದ ಕಂಟೇನ್‌ಮೆಂಟ್ ಜೋನ್​ಗಳ ಸಂಖ್ಯೆ

‘ನೀವಿಲ್ಲದಿದ್ದರೆ ನಾನೇನು ಮಾಡುತ್ತಿದ್ದೆ’;  ಜೀವನದ ಇಬ್ಬರು ಪ್ರಮುಖ ವ್ಯಕ್ತಿಗಳನ್ನು ಪರಿಚಯಿಸಿದ ಸಮಂತಾ

Published On - 12:29 pm, Wed, 5 January 22

Web contact

TV9 Kannada

Read More
Follow Us