AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ರೇವಣ್ಣ ಅಸಿಂಧು ಪ್ರಕರಣ; ವಕೀಲ ದೇವರಾಜೇಗೌಡ ವಿರುದ್ದ ವಂಚನೆ ಆರೋಪ ಮಾಡಿದ ಮೊದಲ ಪತ್ನಿ

ನನಗೆ ಮಾನಸಿಕ, ದೈಹಿಕ ಹಾಗೂ ವರದಕ್ಷಿಣೆ ಕಿರುಕುಳ ಕೊಟ್ಟು ಜೀವನ ಹಾಳು ಮಾಡಿದ್ದರು. ಇವರ ಹಿಂಸೆ ತಾಳದೇ ಆತನಿಂದ ವಿಚ್ಚೇಧನ ಪಡೆದುಕೊಂಡಿದ್ದೇನೆ. ನನ್ನೊಟ್ಟಿಗೆ ಸಂಬಂಧ ಕಡಿದುಕೊಂಡ ಬಳಿಕ ಈಗ ನನ್ನ ಚಾರಿತ್ರ್ಯ ಹರಣ ಮಾಡುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆ, ಮಹಿಳಾ ಆಯೋಗಕ್ಕೆ ದೂರು ನೀಡೋದಾಗಿ ವಕೀಲ ದೇವರಾಜೇಗೌಡ ವಿರುದ್ದ ಮೊದಲ ಪತ್ನಿ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಅಸಿಂಧು ಪ್ರಕರಣ;  ವಕೀಲ ದೇವರಾಜೇಗೌಡ ವಿರುದ್ದ ವಂಚನೆ ಆರೋಪ ಮಾಡಿದ ಮೊದಲ ಪತ್ನಿ
ವಕೀಲ ​ದೇವರಾಜೇಗೌಡ ಮೊದಲ ಪತ್ನಿ ಆರೋಪ
ಮಂಜುನಾಥ ಕೆಬಿ
| Edited By: |

Updated on: Sep 08, 2023 | 3:52 PM

Share

ಹಾಸನ, ಸೆ.08: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಸದಸ್ಯತ್ವ ಅಸಿಂಧು ಪ್ರಕರಣದ ದೂರುದಾರ ವಕೀಲ ದೇವರಾಜೇಗೌಡ (Devarajegowda)ವಿರುದ್ದ ಇದೀಗ ಮೊದಲ ಪತ್ನಿ ಭಾಗ್ಯ ಎಂಬುವವರು ಗಂಭೀರ ಆರೋಪ ಮಾಡಿದ್ದಾರೆ. ಹೌದು, ದೇವರಾಜೇಗೌಡ ಹಾಸನ, ಬೆಂಗಳೂರಿನಲ್ಲಿ ಹಲವರಿಗೆ ವಂಚನೆ ಮಾಡಿದ್ದು, 2016 ರಲ್ಲಿ ಯಾವುದೇ ಆಸ್ತಿ ಇಲ್ಲದ ವ್ಯಕ್ತಿಯು 2023 ರ ವೇಳೆಗೆ 80 ಕೋಟಿ ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಹಾಸನದಲ್ಲಿ ಮಾದ್ಯಮಗೋಷ್ಠಿ ನಡೆಸಿ ಮಾತನಾಡಿದ ದೇವರಾಜೇಗೌಡ ಅವರ ಮೊದಲ ಪತ್ನಿ ಭಾಗ್ಯ ಅವರು ‘ ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರ ಗ್ರಾಮದವರಾದ ದೇವರಾಜೇಗೌಡರನ್ನ 26 ವರ್ಷಗಳ ಹಿಂದೆ ಮದುವೆ ಆಗಿದ್ದು, ಬಳಿಕ 13 ವರ್ಷ ಸಂಸಾರ ಮಾಡಿದ್ದೆವು. ಬಳಿಕ ತನ್ನೊಟ್ಟಿಗೆ ವಿಚ್ಛೇದನ ಪಡೆದುಕೊಂಡ ನನ್ನ ಚಾರಿತ್ರ ಹರಣ ಮಾಡಿದ್ದಾರೆ. ಪ್ರಭಾವಿ ರಾಜಕಾರಣಿ ಜೊತೆಗೆ ತನಗೆ ಸಂಬಂಧ ಇರುವ ಬಗ್ಗೆ ಆರೋಪ ಮಾಡಿ, ಗೌರವಕ್ಕೆ ಧಕ್ಕೆ ತಂದಿದ್ದಾರೆ‌ ಎಂದು ಕಣ್ಣೀರು ಇಟ್ಟಿದ್ದಾರೆ.

ಇದನ್ನೂ ಓದಿ:ಸಂಸದ ಸ್ಥಾನದಿಂದ ಪ್ರಜ್ವಲ್​ ರೇವಣ್ಣ ಅನರ್ಹ; ತಾತ ದೇವೇಗೌಡರ ಜೊತೆ ಚರ್ಚಿಸಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲು ತಯಾರಿ

ಕಿರುಕುಳ ಕೊಟ್ಟು ಜೀವನ ಹಾಳು ಮಾಡಿದ ಆರೋಪ

‘ನನಗೆ ಮಾನಸಿಕ, ದೈಹಿಕ ಹಾಗೂ ವರದಕ್ಷಿಣೆ ಕಿರುಕುಳ ಕೊಟ್ಟು ಜೀವನ ಹಾಳು ಮಾಡಿದ್ದರು. ಇವರ ಹಿಂಸೆ ತಾಳದೆ ಆತನಿಂದ ವಿಚ್ಚೇಧನ ಪಡೆದುಕೊಂಡಿದ್ದೇನೆ. ನನ್ನೊಟ್ಟಿಗೆ ಸಂಬಂಧ ಕಡಿದುಕೊಂಡ ಬಳಿಕ ಈಗ ನನ್ನ ಚಾರಿತ್ರ್ಯ ಹರಣ ಮಾಡುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆ, ಮಹಿಳಾ ಆಯೋಗಕ್ಕೆ ದೂರು ನೀಡೋದಾಗಿ ಹೇಳಿದ್ದಾರೆ. ಇನ್ನು ಈ ಬಗ್ಗೆ ಕಾನೂನು ಹೋರಾಟ ಮಾಡುವುದಾಗಿ ಅಳಲು ತೋಡಿಕೊಂಡಿದ್ದು, ಈ ಕುರಿತು ಕುಟುಂಬ ಸದಸ್ಯರ ಜೊತೆಗೆ ಹಾಸನದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ತಮ್ಮ ಮಾಜಿ ಪತಿ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ