ಪ್ರಜ್ವಲ್ ರೇವಣ್ಣ ಅಸಿಂಧು ಪ್ರಕರಣ; ವಕೀಲ ದೇವರಾಜೇಗೌಡ ವಿರುದ್ದ ವಂಚನೆ ಆರೋಪ ಮಾಡಿದ ಮೊದಲ ಪತ್ನಿ

ನನಗೆ ಮಾನಸಿಕ, ದೈಹಿಕ ಹಾಗೂ ವರದಕ್ಷಿಣೆ ಕಿರುಕುಳ ಕೊಟ್ಟು ಜೀವನ ಹಾಳು ಮಾಡಿದ್ದರು. ಇವರ ಹಿಂಸೆ ತಾಳದೇ ಆತನಿಂದ ವಿಚ್ಚೇಧನ ಪಡೆದುಕೊಂಡಿದ್ದೇನೆ. ನನ್ನೊಟ್ಟಿಗೆ ಸಂಬಂಧ ಕಡಿದುಕೊಂಡ ಬಳಿಕ ಈಗ ನನ್ನ ಚಾರಿತ್ರ್ಯ ಹರಣ ಮಾಡುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆ, ಮಹಿಳಾ ಆಯೋಗಕ್ಕೆ ದೂರು ನೀಡೋದಾಗಿ ವಕೀಲ ದೇವರಾಜೇಗೌಡ ವಿರುದ್ದ ಮೊದಲ ಪತ್ನಿ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಅಸಿಂಧು ಪ್ರಕರಣ;  ವಕೀಲ ದೇವರಾಜೇಗೌಡ ವಿರುದ್ದ ವಂಚನೆ ಆರೋಪ ಮಾಡಿದ ಮೊದಲ ಪತ್ನಿ
ವಕೀಲ ​ದೇವರಾಜೇಗೌಡ ಮೊದಲ ಪತ್ನಿ ಆರೋಪ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 08, 2023 | 3:52 PM

ಹಾಸನ, ಸೆ.08: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಸದಸ್ಯತ್ವ ಅಸಿಂಧು ಪ್ರಕರಣದ ದೂರುದಾರ ವಕೀಲ ದೇವರಾಜೇಗೌಡ (Devarajegowda)ವಿರುದ್ದ ಇದೀಗ ಮೊದಲ ಪತ್ನಿ ಭಾಗ್ಯ ಎಂಬುವವರು ಗಂಭೀರ ಆರೋಪ ಮಾಡಿದ್ದಾರೆ. ಹೌದು, ದೇವರಾಜೇಗೌಡ ಹಾಸನ, ಬೆಂಗಳೂರಿನಲ್ಲಿ ಹಲವರಿಗೆ ವಂಚನೆ ಮಾಡಿದ್ದು, 2016 ರಲ್ಲಿ ಯಾವುದೇ ಆಸ್ತಿ ಇಲ್ಲದ ವ್ಯಕ್ತಿಯು 2023 ರ ವೇಳೆಗೆ 80 ಕೋಟಿ ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಹಾಸನದಲ್ಲಿ ಮಾದ್ಯಮಗೋಷ್ಠಿ ನಡೆಸಿ ಮಾತನಾಡಿದ ದೇವರಾಜೇಗೌಡ ಅವರ ಮೊದಲ ಪತ್ನಿ ಭಾಗ್ಯ ಅವರು ‘ ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರ ಗ್ರಾಮದವರಾದ ದೇವರಾಜೇಗೌಡರನ್ನ 26 ವರ್ಷಗಳ ಹಿಂದೆ ಮದುವೆ ಆಗಿದ್ದು, ಬಳಿಕ 13 ವರ್ಷ ಸಂಸಾರ ಮಾಡಿದ್ದೆವು. ಬಳಿಕ ತನ್ನೊಟ್ಟಿಗೆ ವಿಚ್ಛೇದನ ಪಡೆದುಕೊಂಡ ನನ್ನ ಚಾರಿತ್ರ ಹರಣ ಮಾಡಿದ್ದಾರೆ. ಪ್ರಭಾವಿ ರಾಜಕಾರಣಿ ಜೊತೆಗೆ ತನಗೆ ಸಂಬಂಧ ಇರುವ ಬಗ್ಗೆ ಆರೋಪ ಮಾಡಿ, ಗೌರವಕ್ಕೆ ಧಕ್ಕೆ ತಂದಿದ್ದಾರೆ‌ ಎಂದು ಕಣ್ಣೀರು ಇಟ್ಟಿದ್ದಾರೆ.

ಇದನ್ನೂ ಓದಿ:ಸಂಸದ ಸ್ಥಾನದಿಂದ ಪ್ರಜ್ವಲ್​ ರೇವಣ್ಣ ಅನರ್ಹ; ತಾತ ದೇವೇಗೌಡರ ಜೊತೆ ಚರ್ಚಿಸಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲು ತಯಾರಿ

ಕಿರುಕುಳ ಕೊಟ್ಟು ಜೀವನ ಹಾಳು ಮಾಡಿದ ಆರೋಪ

‘ನನಗೆ ಮಾನಸಿಕ, ದೈಹಿಕ ಹಾಗೂ ವರದಕ್ಷಿಣೆ ಕಿರುಕುಳ ಕೊಟ್ಟು ಜೀವನ ಹಾಳು ಮಾಡಿದ್ದರು. ಇವರ ಹಿಂಸೆ ತಾಳದೆ ಆತನಿಂದ ವಿಚ್ಚೇಧನ ಪಡೆದುಕೊಂಡಿದ್ದೇನೆ. ನನ್ನೊಟ್ಟಿಗೆ ಸಂಬಂಧ ಕಡಿದುಕೊಂಡ ಬಳಿಕ ಈಗ ನನ್ನ ಚಾರಿತ್ರ್ಯ ಹರಣ ಮಾಡುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆ, ಮಹಿಳಾ ಆಯೋಗಕ್ಕೆ ದೂರು ನೀಡೋದಾಗಿ ಹೇಳಿದ್ದಾರೆ. ಇನ್ನು ಈ ಬಗ್ಗೆ ಕಾನೂನು ಹೋರಾಟ ಮಾಡುವುದಾಗಿ ಅಳಲು ತೋಡಿಕೊಂಡಿದ್ದು, ಈ ಕುರಿತು ಕುಟುಂಬ ಸದಸ್ಯರ ಜೊತೆಗೆ ಹಾಸನದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ತಮ್ಮ ಮಾಜಿ ಪತಿ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ