AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್​​ ವಿಡಿಯೋ ವೈರಲ್​​ ಹಿಂದೆ ಜೆಡಿಎಸ್​​ನವರದ್ದೂ ಕೈವಾಡ: ಚಾರ್ಜ್​​ಶೀಟ್​​ನಲ್ಲಿ ಸ್ಫೋಟಕ ಮಾಹಿತಿ ರಿವೀಲ್​​

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ SIT ಸಲ್ಲಿಸಿರುವ ದೋಷಾರೋಪ ಪಟ್ಟಿಯು ಜೆಡಿಎಸ್ ವಲಯದಲ್ಲಿ ತಲ್ಲಣ ಮೂಡಿಸಿದೆ. ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಜೊತೆ ಜೆಡಿಎಸ್ ಸದಸ್ಯರೂ ಆರೋಪಿಗಳಾಗಿರುವುದು ಪಕ್ಷದ ನಾಯಕರನ್ನು ಅಚ್ಚರಿಗೊಳಿಸಿದೆ. ದೂರುದಾರರು, ನಿಜವಾದ ಅಪರಾಧಿಗಳನ್ನು ಪತ್ತೆಹಚ್ಚಲು ಮತ್ತಷ್ಟು ತನಿಖೆಗೆ ಒತ್ತಾಯಿಸಿದ್ದಾರೆ. ಐಟಿ ಕಾಯ್ದೆ 67ಎ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿದ್ದು, ಜೆಡಿಎಸ್ ಕಾರ್ಯಕರ್ತರ ಸೇರ್ಪಡೆ ಕುರಿತು ಷಡ್ಯಂತ್ರದ ಅನುಮಾನ ವ್ಯಕ್ತವಾಗಿದೆ.

ಪ್ರಜ್ವಲ್​​ ವಿಡಿಯೋ ವೈರಲ್​​ ಹಿಂದೆ ಜೆಡಿಎಸ್​​ನವರದ್ದೂ ಕೈವಾಡ: ಚಾರ್ಜ್​​ಶೀಟ್​​ನಲ್ಲಿ ಸ್ಫೋಟಕ ಮಾಹಿತಿ ರಿವೀಲ್​​
ಪ್ರಜ್ವಲ್​ ರೇವಣ್ಣImage Credit source: Google
ಮಂಜುನಾಥ ಕೆಬಿ
| Edited By: |

Updated on:Mar 19, 2026 | 2:54 PM

Share

ಹಾಸನ, ಮಾರ್ಚ್​​ 19: ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಕೇಸ್​ ಸಂಬಂಧ SIT ಸಲ್ಲಿಕೆ ಮಾಡಿರುವ ದೋಷಾರೋಪ ಪಟ್ಟಿ ಜೆಡಿಎಸ್ ವಲಯದಲ್ಲಿಯೇ ತಲ್ಲಣ ಮೂಡಿಸಿದೆ. ಪೆನ್​ಡ್ರೈವ್​ ಹಂಚಿದ ಕೇಸ್​ನ ಆರೋಪಿಗಳ ಪಟ್ಟಿಯಲ್ಲಿ ಬಿಜೆಪಿ, ಕಾಂಗ್ರೆಸ್​​ ಜೊತೆ ಜೆಡಿಎಸ್ ಕಾರ್ಯಕರ್ತರನ್ನೂ ಕೂಡ SIT ಆರೋಪಿಗಳಾಗಿಸಿರೋದು ನಾಯಕರ ಅಚ್ಚರಿಗೆ ಕಾರಣವಾಗಿದೆ. ಚಾರ್ಜ್​ಶೀಟ್​ನಲ್ಲಿ ಶಾಸಕ ಸ್ವರೂಪ್ ಚಿಕ್ಕಪ್ಪ ಹರ್ಷ ಅವರ ಪುತ್ರ ರೇವಂತ್, ರೇವಂತ್ ಸ್ನೇಹಿತ ತೇಜಸ್, ಭವಾನಿ ರೇವಣ್ಣ ಆಪ್ತ ಎನ್​.ಸಿ.ಹರೀಶ್, JDS ಕಾರ್ಯಕರ್ತ ಬೂವನಹಳ್ಳಿ ಮಂಜು ಅಲಿಯಾಸ್ ವಸಂತ್ ಕುಮಾರ್, ಬಾಲಸುಬ್ರಹ್ಮಣ್ಯ, ಜಯಸೂರ್ಯ ಸೇರಿ 7ಕ್ಕೂ ಹೆಚ್ಚು ಜನರ ಹೆಸರಿದೆ.

ಪ್ರಕರಣ ದೇಶಾದ್ಯಂತ ಸದ್ದು ಮಾಡಿದ್ದ ಬೆನ್ನಲ್ಲೇ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರೇ ರಾಜಕೀಯ ಉದ್ದೇಶದಿಂದ ವಿಡಿಯೋ ವೈರಲ್ ಮಾಡಿದ್ದಾರೆ ಎಂದು ಕೆಲ ಜೆಡಿಎಸ್​ ನಾಯಕರು ಗಂಭೀರ ಆರೋಪ ಮಾಡಿದ್ದರು. ಆದರೀಗ ಎಸ್​ಐಟಿ ಅಧಿಕಾರಿಗಳ ತನಿಖೆ ಬಳಿಕ ಸ್ಫೋಟಕ ಮಾಹಿತಿ ಬಯಲಾಗಿದ್ದು, ಜೆಡಿಎಸ್​​ ಕಾರ್ಯಕರ್ತರೂ ಈ ಪ್ರಕರಣದಲ್ಲಿ ಇರೋದಾಗಿ ತನಿಖಾ ವರದಿ ಹೇಳಿದೆ. ಐಟಿ ಆ್ಯಕ್ಟ್​​ 2008ರ ಸೆಕ್ಷನ್ 67ಎ ಅಡಿ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

ಇದನ್ನೂ ಓದಿ:  ಪ್ರಜ್ವಲ್ ರೇವಣ್ಣ ಪ್ರಕರಣ; ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ಬಿಗ್ ರಿಲೀಫ್

ಇನ್ನು ಚಾರ್ಜ್​​​ಶೀಟ್​​ನಲ್ಲಿ ಜೆಡಿಎಸ್​​ ಕಾರ್ಯಕರ್ತರ ಹೆಸರು ಉಲ್ಲೇಖ ವಿಚಾರ ಸಂಬಂಧ ಟಿವಿ9ಗೆ ದೂರುದಾರ ಮತ್ತು ವಕೀಲ ಪೂರ್ಣಚಂದ್ರ ಪ್ರತಿಕ್ರಿಯಿಸಿದ್ದಾರೆ. ಆರೋಪಿಗಳು ಯಾವ ಪಕ್ಷದವರು ಎಂಬುದು ನಮಗೆ ಮುಖ್ಯವಲ್ಲ. ಚಾರ್ಜ್​​ಶೀಟ್​​ ಪ್ರತಿ ಇನ್ನೂ ನನ್ನ ಕೈಗೆ ಸಿಕ್ಕಿಲ್ಲ. ದಾಖಲೆ ನೋಡಿದ ಬಳಿಕ ಯಾರ ಮೇಲೆ ಏನು ಆರೋಪ‌ಮಾಡಲಾಗಿದೆ ಎಂದು ಮಾತನಾಡುತ್ತೇನೆ. ಆದರೆ ಪ್ರಕರಣ ಸಂಬಂಧ ತಪ್ಪಿತಸ್ಥರಿಗೆ ಶಿಕ್ಕೆ ಆಗೋವರೆಗೂ ನಾನು ಸುಮ್ಮನಿರಲ್ಲ. ನಾನು ಯಾರಮೇಲೆ‌ ದೂರು ಕೊಟ್ಟಿದ್ದೆ? ಅವರ ಹಿಂದೆ ಇರೋದು ಯಾರು? ಅವರನ್ನು ಯಾಕೆ‌ ವಿಚಾರಣೆಯನ್ನೇ ಮಾಡಲಿಲ್ಲ? ಎಂಬ ಷಡ್ಯಂತ್ರ ಬಯಲಾಗಬೇಕು. ಪ್ರಕರಣದ ನಿಜ ಆರೋಪಿಗಳು ಹೊರ ಬರಬೇಕಾದರೆ ಮತ್ತಷ್ಟು ತನಿಖೆ ಆಗಲೇ‌ಬೇಕು. ಜೆಡಿಎಸ್ ನಾಯಕರ ಬಾಯಿ ಮುಚ್ಚಿಸುವ ಸಲುವಾಗಿ ಕೆಲ‌ ಜೆಡಿಎಸ್ ಕಾರ್ಯಕರ್ತರ ಹೆಸರನ್ನು ಆರೋಪಿಗಳ ಪಟ್ಟಿಯಲ್ಲಿ ಸೇರಿಸಲಾಗಿದೆಯಾ ಎನ್ನುವ ಅನುಮಾನ ಈಗ ನಮ್ಮನ್ನು ಕಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:53 pm, Thu, 19 March 26

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!