AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರ ಪ್ರಜ್ವಲ್​​ ವಿರುದ್ಧದ ಆರೋಪದ ಕುರಿತು ಹೆಚ್​ಡಿ ರೇವಣ್ಣ ಮೊದಲ ಬಾರಿಗೆ ಹೇಳಿದ್ದಿಷ್ಟು

ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ಈ ಪ್ರಕರಣ ದಿನದಿಂದ ದಿನಕ್ಕೆ ರೋಚಕತೆ ಪಡೆದುಕೊಳ್ಳುತ್ತಿದೆ. ಇದೀಗ, ಪುತ್ರನ ವಿರುದ್ಧ ಕುರಿತು ಕೇಳಿಬಂದಿರುವ ಆರೋಪಕ್ಕೆ ತಂದೆ, ಮಾಜಿ ಸಚಿವ ಹೆಚ್​ಡಿ ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

ಪುತ್ರ ಪ್ರಜ್ವಲ್​​ ವಿರುದ್ಧದ ಆರೋಪದ ಕುರಿತು ಹೆಚ್​ಡಿ ರೇವಣ್ಣ ಮೊದಲ ಬಾರಿಗೆ ಹೇಳಿದ್ದಿಷ್ಟು
ಮಾಜಿ ಸಚಿವ ಹೆಚ್​​ಡಿ ರೇವಣ್ಣ
ಮಂಜುನಾಥ ಕೆಬಿ
| Edited By: |

Updated on: May 22, 2024 | 12:47 PM

Share

ಹಾಸನ, ಮೇ 22: ಮಾಜಿ ಸಚಿವ ಹೆಚ್​ಡಿ ರೇವಣ್ಣ (HD Revanna) ಪುತ್ರ, ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್​ಡ್ರೈವ್​ (Pen Drive) ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿದೆ. ತಮ್ಮ ಮಗನ ವಿರುದ್ಧ ಕೇಳಿಬಂದಿರುವ ಆರೋಪಗಳ ಬಗ್ಗೆ ತಂದೆ, ಜೆಡಿಎಸ್​ ಶಾಸಕ ಹೆಚ್​ಡಿ ರೇವಣ್ಣ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರ ವಿಚಾರ ಏನು ಗೊತ್ತಿಲ್ಲ. ನಾನು ಯಾರ ಬಗ್ಗೆ ಮಾತನಾಡಲ್ಲ ನನಗೇನೂ ಗೊತ್ತಿಲ್ಲ. ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ ಎಂದು ಹೇಳಿದರು.

ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುವ ವಿಚಾರವಾಗಿ ಹೊಳೆನರಸೀಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಅವರು, ನಾನು ಯಾರ ಬಗ್ಗೆಯೂ ಮಾತನಾಡಲ್ಲ. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಪ್ರಜ್ವಲ್‌ ರೇವಣ್ಣ ವಿಚಾರ ಏನು ಗೊತ್ತಿಲ್ಲ ಎಂದರು.

ಇದನ್ನೂ ಓದಿ: ವಿಡಿಯೋ ಹರಿಬಿಟ್ಟವರ ವಿರುದ್ಧ ಕಾನೂನು ಹೋರಾಟಕ್ಕೆ ಸಜ್ಜಾದ ಕುಮಾರಸ್ವಾಮಿ

ಹಾಸನ ಜಿಲ್ಲೆಯ ನಮಗೆ ಶಕ್ತಿ ಕೊಟ್ಟಿದ್ದಾರೆ. 25 ವರ್ಷ ನಾನು ಶಾಸಕನಾಗಿ ಇಲ್ಲಿ ಕೆಲಸ ಮಾಡಿದ್ದೇನೆ. ಯಾರೂ ಧೃತಿಗೆಡುವುದು ಬೇಡ. ಇಂದು (ಮೇ 22) ಜಿಲ್ಲೆಯ ನಾಲ್ಕು ಶಾಸಕರ ಜೊತೆ ಜೊತೆ ಚರ್ಚಿಸುತ್ತೇನೆ. ಪ್ರಕರಣ ಕೋರ್ಟ್​​ನಲ್ಲಿರುವುದರಿಂದ ಏನೂ ಹೇಳಲ್ಲ. ನನಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ನಾನು ಅದರ ಬಗ್ಗೆ ಏನೂ ಮಾತನಾಡಲ್ಲ ಎಂದು ಹೇಳಿದರು.

ಈ ವೇಳೆ ಬೆಂಬಲಿಗರು ಜೈಕಾರ ಹಾಕುತ್ತಿದ್ದಂತೆ ಹೆಚ್​​ಡಿ ರೇವಣ್ಣ ಅವರು ಭಾವುಕರಾದರು.

ದೇವಸ್ಥಾನಗಳಿಗೆ ಭೇಟಿ

ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರು ಅಪಹರಣ ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ದಿನದಿಂದ ಇಂದಿನವರೆಗೂ ಹಾಸನ, ಬೆಂಗಳೂರು ಮತ್ತು ಮೈಸೂರು ಜಿಲ್ಲೆಗಳ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು (ಮೇ 22) ಸಹ ಹೊಳೆನರಸೀಪುರದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದರು. ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಕುಟುಂಬಸ್ಥರ ಹೆಸರಿನಲ್ಲಿ ಅರ್ಚನೆ ಮಾಡಿಸಿದರು. ಬಳಿಕ ಹೆಚ್​ಡಿ ರೇವಣ್ಣ ಹೊಳೆನರಸೀಪುರದ ಲಕ್ಷ್ಮೀನರಸಿಂಹ ದೇಗುಲಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?