AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳದೆ ಮಾತನಾಡಿದ್ದೇನೆ, ಕ್ಷಮಿಸಿ ಎಂದ ಪ್ರಜ್ವಲ್ ರೇವಣ್ಣ

ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಜೆಡಿಎಸ್​ ಮತ್ತು ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಜ್ವಲ್‌ ರೇವಣ್ಣ, ‘ ನನ್ನ ಗಮನಕ್ಕೆ ಬಾರದೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದೇನೆ. ನಾನೊಬ್ಬ ಯುವಕನಾಗಿ ಹೋರಾಟದ ಮೂಲಕ ಮಾತನಾಡುತ್ತಿದ್ದೆ. ಆದರೆ, ಇವತ್ತು ಅರಿವಾಗಿದೆ, ಹಾಗಾಗಿ ನಿಮ್ಮೆಲ್ಲರ ಕ್ಷಮೆ ಕೇಳುತ್ತೇನೆ ಎಂದರು.

ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳದೆ ಮಾತನಾಡಿದ್ದೇನೆ, ಕ್ಷಮಿಸಿ ಎಂದ ಪ್ರಜ್ವಲ್ ರೇವಣ್ಣ
ಪ್ರಜ್ವಲ್​ ರೇವಣ್ಣ
ಮಂಜುನಾಥ ಕೆಬಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Apr 07, 2024 | 8:36 AM

Share

ಹಾಸನ, ಏ.07: ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳದೆ ಮಾತನಾಡಿದ್ದೇನೆ, ಈ ಸಭೆಯಲ್ಲಿ RSS ಮುಖಂಡರು ಅಥವಾ ಕಾರ್ಯಕರ್ತರಿದ್ದರೆ ನನ್ನನ್ನು ಕ್ಷಮಿಸಿ ಎಂದು ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಹೇಳಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಅವರು, ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಜೆಡಿಎಸ್​ ಮತ್ತು ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ‘ ನನ್ನ ಗಮನಕ್ಕೆ ಬಾರದೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದೇನೆ. ನಾನೊಬ್ಬ ಯುವಕನಾಗಿ ಹೋರಾಟದ ಮೂಲಕ ಮಾತನಾಡುತ್ತಿದ್ದೆ. ಆದರೆ, ಇವತ್ತು ಅರಿವಾಗಿದೆ, ಹಾಗಾಗಿ ನಿಮ್ಮೆಲ್ಲರ ಕ್ಷಮೆ ಕೇಳುತ್ತೇನೆ ಎಂದರು.

‘ನಾನು ಆಯ್ಕೆಯಾದ ಸಂದರ್ಭದಲ್ಲಿ ನನಗೆ 27 ವರ್ಷ ವಯಸ್ಸು, ಐದು ವರ್ಷ ಸಂಸದನಾಗಿ ಕೆಲಸ ಮಾಡಿದ್ದೇನೆ. ​ಐದು ವರ್ಷ ಮಾಡಿದ ಕೆಲಸ, ಪ್ರಗತಿ ಬಗ್ಗೆ ಯಾರೂ ಪ್ರಶ್ನೆ ಮಾಡಲ್ಲ. ಪ್ರಜ್ವಲ್‌ ರೇವಣ್ಣ ಗೆದ್ದರೆ ಬಿಜೆಪಿ ಕಾರ್ಯಕರ್ತರನ್ನು ತೆಗೆದುಕೊಂಡು ಹೋಗುವ ಕೆಲಸ ಮಾಡ್ತಾನಾ ಎಂಬ ಪ್ರಶ್ನೆ ನಿಮ್ಮಲ್ಲಿದೆ. ನಮ್ಮ ರಾದಾ ಮೋಹನ್ ದಾಸ್ ಅವರು ಹೇಳಿದ್ದಾರೆ. ನಮ್ಮದು ಕಾಂಟ್ರಾಕ್ಟ್ ಮದುವೆ ಅಲ್ಲ, ಐವತ್ತು, ಅರವತ್ತು ವರ್ಷ ಕೊಂಡೊಯ್ಯುವ ಸಂಬಂಧ ಎಂದು.  ಜೆಡಿಎಸ್-ಬಿಜೆಪಿ ಪ್ರತಿಯೊಬ್ಬರನ್ನೂ ಕಾರ್ಯಕರ್ತರನ್ನು ಗೌರವಿಸಿ, ಒಗ್ಗಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇನೆ. ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲೆ ಇರಲಿ ಎಂದು ಹೇಳಿದರು.

ಇದನ್ನೂ ಓದಿ:ಸಂಸದ ಪ್ರಜ್ವಲ್ ರೇವಣ್ಣರ 5 ವರ್ಷದ ಅಭಿವೃದ್ಧಿ ಕಾರ್ಯಗಳ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಿದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ

ನಾನು ಐದು ವರ್ಷದಲ್ಲಿ ಸಣ್ಣಪುಟ್ಟ ತಪ್ಪುಗಳನ್ನು ಮಾಡಿದ್ದರೆ ಕ್ಷಮಿಸಿ, ಒಬ್ಬ ಯುವಕ ನಡೆಯುವಾಗ ಎಡವುತ್ತಾನೆ, ಈಗ ಎಡವಿರಬಹುದು. ಸಣ್ಣಪುಟ್ಟ ವಿಚಾರಗಳಲ್ಲಿ ಎಡವಿದ್ರೆ, ತಪ್ಪು ತಿದ್ದಿಕೋ‌ ಎಂದು ಸಂದೇಶ ಕೊಟ್ಟರೆ ಕೈ ಮುಗಿದು ನಮಸ್ಕಾರ ಮಾಡುತ್ತೇನೆ. ದಯವಿಟ್ಟು ನನ್ನ ಮೇಲೆ ವಿಶ್ವಾಸವಿಡಿ. ತಪ್ಪುಗಳನ್ನು ಸರಿ ಮಾಡಿಕೊಂಡು ಯಾರಿಗೂ ಕೆಟ್ಟ ಹೆಸರು ಬಾರದೆ ಕೆಲಸ ಮಾಡುತ್ತೇನೆ. ಒಬ್ಬ ಸಂಸದನಾಗಿ ಅಲ್ಲ, ಒಬ್ಬ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. 400 ಸೀಟ್ ಗೆಲ್ಲಿಸುವ ಮೂಲಕ ಮತ್ತೊಮ್ಮೆ ನರೇಂದ್ರಮೋದಿ ಅವರು ಪ್ರಧಾನ ಮಂತ್ರಿಯಾಗಬೇಕು. ಅದರಲ್ಲಿ ನಾನೊಬ್ಬ ಇರಲು ಅವಕಾಶ ಮಾಡಿ ಕೊಡಿ‌ ಎಂದು ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು