AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್ ಹತ್ಯೆ ಪ್ರಕರಣ: ಕೊಲೆ ಪ್ರಕರಣದ ತನಿಖೆಗೆ ಕ್ಷೇತ್ರದ ಶಾಸಕನಾಗಿ ಸಹಕಾರ ನೀಡುತ್ತೇನೆ: ಬಿಜೆಪಿ ಶಾಸಕ ಪ್ರೀತಂಗೌಡ

ನಗರಸಭೆ ಸದಸ್ಯ ಪ್ರಶಾಂತ್ ಕೊಲೆ ಒಂದು ದುರದೃಷ್ಟಕರ. ಮೃತ ಪ್ರಶಾಂತ್ ನಿವಾಸಕ್ಕೆ ಹೋಗಿ ಸಾಂತ್ವನ ಹೇಳುತ್ತೇನೆ. ಕೊಲೆ ಪ್ರಕರಣದ ತನಿಖೆಗೆ ಕ್ಷೇತ್ರದ ಶಾಸಕನಾಗಿ ಸಹಕಾರ ನೀಡುತ್ತೇನೆ ಎಂದು ಟಿವಿ 9ಗೆ ಬಿಜೆಪಿ ಶಾಸಕ ಪ್ರೀತಂಗೌಡ ಹೇಳಿಕೆ ನೀಡಿದ್ದಾರೆ.

ಪ್ರಶಾಂತ್ ಹತ್ಯೆ ಪ್ರಕರಣ: ಕೊಲೆ ಪ್ರಕರಣದ ತನಿಖೆಗೆ ಕ್ಷೇತ್ರದ ಶಾಸಕನಾಗಿ ಸಹಕಾರ ನೀಡುತ್ತೇನೆ: ಬಿಜೆಪಿ ಶಾಸಕ ಪ್ರೀತಂಗೌಡ
ಬಿಜೆಪಿ ಶಾಸಕ ಪ್ರೀತಂಗೌಡ
TV9 Web
| Edited By: |

Updated on: Jun 03, 2022 | 1:29 PM

Share

ಹಾಸನ: ನಗರಸಭೆ ಜೆಡಿಎಸ್​ ಸದಸ್ಯ ಪ್ರಶಾಂತ್ ಹತ್ಯೆ ಪ್ರಕರಣ ಹಿನ್ನೆಲೆ ನಗರದಲ್ಲಿ ಟಿವಿ 9ಗೆ ಬಿಜೆಪಿ ಶಾಸಕ ಪ್ರೀತಂಗೌಡ ಹೇಳಿಕೆ ನೀಡಿದ್ದು, ನಗರಸಭೆ ಸದಸ್ಯ ಪ್ರಶಾಂತ್ ಕೊಲೆ ಒಂದು ದುರದೃಷ್ಟಕರ. ಮೃತ ಪ್ರಶಾಂತ್ ನಿವಾಸಕ್ಕೆ ಹೋಗಿ ಸಾಂತ್ವನ ಹೇಳುತ್ತೇನೆ. ಕೊಲೆ ಪ್ರಕರಣದ ತನಿಖೆಗೆ ಕ್ಷೇತ್ರದ ಶಾಸಕನಾಗಿ ಸಹಕಾರ ನೀಡುತ್ತೇನೆ. ಈ ರೀತಿಯ ಘಟನೆ ಇಡೀ ರಾಜ್ಯದಲ್ಲಿ ಎಲ್ಲೂ ಆಗಬಾರದು. ನನ್ನ ಮತ್ತು ಪ್ರಶಾಂತ್ ನಾಗರಾಜ್ ನಡುವೆ ಆತ್ಮೀಯತೆ ಇತ್ತು. ಪಕ್ಷ ಯಾವುದೇ ಇರಲಿ ನಮ್ಮ ಜತೆ ಉತ್ತಮ ಸಂಬಂಧವಿತ್ತು ಎಂದು ಹೇಳಿದರು. ನಾನು ವಿರೋಧ ಪಕ್ಷದ ಶಾಸಕನಾದರು ನನ್ನ ಜೊತೆ ಒಳ್ಳೆಯ ಸಂಬಂಧವನ್ನು ಇಟ್ಟುಕೊಂಡಿದ್ದರು. ನಾನೊಬ್ಬ ಶಾಸಕನಾಗಿ ಯಾರನ್ನ ಆದರೂ ನಮ್ಮ ಪಾರ್ಟಿಗೆ ಸಹಕಾರ ಕೊಡಿ ಅಂತ ಹೇಳೋದು ಸಹಜ. ಎಲ್ಲಾ ನಗರಸಬೆ ಸದಸ್ಯರನ್ನು ನಮ್ಮ ಪಾರ್ಟಿ ಗೆ ಸಹಕಾರ ಕೊಡಿ ಎಂದು ಕೇಳಿದ್ದೆ ಅದರಲ್ಲಿ ತಪ್ಪೆನಿದೆ. ಕೊಲೆಯಾದ ಪ್ರಶಾಂತ್​ರನ್ನ ಬಿಜೆಪಿಗೆ ಸೆಳೆಯಲು ಒತ್ತಡ ಹೇರಲಾಗಿತ್ತು ಎಂಬ ಜೆಡಿಎಸ್ ಆರೋಪಕ್ಕೆ ತಿರುಗೇಟು ನೀಡಿದರು.

ಇದನ್ನೂ ಓದಿ: Literature : ನೆರೆನಾಡ ನುಡಿಯೊಳಗಾಡಿ; ಈ ರಾಗವನ್ನು ಕಂಠಪಾಠ ಮಾಡಲೆಂದು ಬಹುಕಾಲ ನಾನು ಹುಡುಕಿ ಅಲೆದೆ

ಈ ಘಟನೆ ಸಂಬಂಧ ಇಬ್ಬರು ಆರೋಪಗಳನ್ನ ಪೊಲೀಸರು ಬಂಧಿಸಿದ್ದು, ಆರೋಪಿಗಳ ಬಂಧನದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಮಾಹಿತಿ ನೀಡಿದರು. ಘಟನೆ ನಡೆದ ಮಾರನೇ ದಿನ ಇಬ್ಬರು ಆರೋಪಿಗಳ ಬಂಧನವಾಗಿದೆ. ಈ ಕೊಲೆಹಿಂದೆ ಯಾವುದೇ ರಾಜಕೀಯ ಶಡ್ಯಂತ್ರ ಇಲ್ಲಾ. ಎರಡು ಕುಟುಂಬಗಳ ನಡುವಿನ ಗಲಾಟೆಯಿಂದ ಕೊಲೆ ನಡೆದಿದೆ ಎನ್ನೋ ಮಾಹಿತಿ ಇದೆ. ಈ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದೆ. ತನಿಖೆ ಬಳಿಕ ಕೊಲೆಗೆ ನಿಖರ ಕಾರಣ ತಿಳಿಯಲಿದೆ ಎಂದು ಹಾಸನದಲ್ಲಿ ಸಚಿವ ಕೆ. ಗೋಪಾಲಯ್ಯ ಹೇಳಿಕೆ ನೀಡಿದ್ದಾರೆ.

ಪ್ರಕರಣ ಏನು?

ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಪ್ರಶಾಂತ್ನನ್ನು ಹಿಂಬಾಲಿಸಿ ಅಟ್ಟಾಡಿಸಿ ಕೊಲೆ ಮಾಡಲಾಗಿದೆ. ಹಾಸನ ನಗರದ ಲಕ್ಣ್ಮಿಪುರ ಬಡಾವಣೆಯಲ್ಲಿ ಹತ್ಯೆ ನಡೆದಿದೆ. ಹಾಸನ ನಗರದ 16ನೇ ವಾರ್ಡ್ನಿಂದ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಶಾಂತ್ ಆಯ್ಕೆಯಾಗಿದ್ದರು. ಇಂದು ಸಂಜೆ ಕೆಲಸ ಮುಗಿಸಿ ಮನೆಗೆ ತೆರಳೋ ವೇಳೆ ಅಟ್ಯಾಕ್ ಮಾಡಿ ಹತ್ಯೆ ಮಾಡಲಾಗಿದೆ. ಭೀಕರವಾಗಿ ಕೊಚ್ಚಿ ಹಂತಕರು ಕೊಲೆ ಮಾಡಿದ್ದಾರೆ. ಹಾಸನ ಪೆನ್ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ