AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಬಾಡೂಟಕ್ಕೆ ಕರೆಯದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ!

ಚೌಡೇಶ್ವರಿ ದೇಗುಲದಲ್ಲಿ ಪೂಜೆ ಮಾಡಿ ಬಾಡೂಟ ಆಯೋಜನೆ ಮಾಡಲಾಗಿತ್ತು. ಶರತ್ ಸಂಬಂಧಿಕರು ಪೂಜೆ ಮಾಡಿ ಬಾಡೂಟ ಏರ್ಪಡಿಸಿದ್ದರು. ತಮ್ಮನ್ನ ಕರೆಯದೇ ಹಬ್ಬದೂಟ ಮಾಡಿದ್ದೀರಾ ಎಂದು ಕ್ಯಾತೆ ಎತ್ತಿದ್ದಾರೆ.

ಹಾಸನದಲ್ಲಿ ಬಾಡೂಟಕ್ಕೆ ಕರೆಯದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ!
ಪ್ರಾತಿನಿಧಿಕ ಚಿತ್ರ
TV9 Web
| Edited By: sandhya thejappa|

Updated on:Jan 18, 2022 | 3:04 PM

Share

ಹಾಸನ: ಬಾಡೂಟಕ್ಕೆ ಕರೆಯದ್ದಕ್ಕೆ ನಡೆದ ಜಗಳ ಕೊಲೆಯಲ್ಲಿ (Murder) ಅಂತ್ಯವಾಗಿದೆ. ಹಾಸನ (Hassan) ಜಿಲ್ಲೆಯ ಅರಸೀಕೆರೆ ತಾಲೂಕಿನ ಪುರಲೆಹಳ್ಳಿಯಲ್ಲಿ ಶರತ್(28) ಎಂಬ ಯುವಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಚೌಡೇಶ್ವರಿ ದೇಗುಲದಲ್ಲಿ ಪೂಜೆ ಮಾಡಿ ಬಾಡೂಟ ಆಯೋಜನೆ ಮಾಡಲಾಗಿತ್ತು. ಶರತ್ ಸಂಬಂಧಿಕರು ಪೂಜೆ ಮಾಡಿ ಬಾಡೂಟ ಏರ್ಪಡಿಸಿದ್ದರು. ತಮ್ಮನ್ನ ಕರೆಯದೇ ಹಬ್ಬದೂಟ ಮಾಡಿದ್ದೀರಾ ಎಂದು ಕ್ಯಾತೆ ಎತ್ತಿದ್ದಾರೆ. ಅಲ್ಲದೇ ಪುರಲೆಹಳ್ಳಿಯ ಧನಪಾಲ್, ಅರ್ಜುನ್, ನಟರಾಜ್, ಮಂಜುನಾಥ ಮತ್ತಿತರಿಂದ ಶರತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಶರತ್, ರಾಕೇಶ್, ಯೋಗೇಶ್ ಎಂಬುವವರು ಹಲ್ಲೆಯಲ್ಲಿ ಗಾಯಗೊಂಡಿದ್ದರು. ಗಂಭೀರ ಗಾಯಗೊಂಡಿದ್ದ ಶರತ್ನ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅರಸೀಕೆರೆ ತಾಲೂಕಿನ ಬಾಣಾವರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸದ್ಯ ಕೊಲೆ ಕೇಸ್ ದಾಖಲಿಸಿಕೊಂಡು ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

ಮಾರಕಾಸ್ತ್ರಗಳಿಂದ ಏಕಾಏಕಿ ಹಲ್ಲೆ                                                                                                                                                          ಗದಗದಲ್ಲಿ ಯುವಕರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಯುವಕ ಸಮೀರ್ ಶಾಪುರ(20) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಯುವಕ ಸಮೀರ್ ಶಾಪುರ ಮೃತಪಟ್ಟಿದ್ದು, ಮತ್ತೊಬ್ಬ ಗಾಯಾಳು ಶಮ್ಮಶಾನ್ ಪಠಾಣ(21) ಪರಿಸ್ಥಿತಿ ಗಂಭೀರವಾಗಿದೆ. ಪುರಸಭಾ ಕಚೇರಿ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಏಕಾಏಕಿ ಹಲ್ಲೆ ಮಾಡಿದ್ದಾರೆ. ಮಚ್ಚು, ಚಾಕುವಿನಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ನರಗುಂದ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ

ಈ ವಾರ ಮಹಾರಾಷ್ಟ್ರ, ಹರ್ಯಾಣ, ಗುಜರಾತ್‌ನಲ್ಲಿ ಕೊವಿಡ್ ಮೂರನೇ ಅಲೆ ಉತ್ತುಂಗಕ್ಕೇರಲಿದೆ: ಮುನ್ಸೂಚನೆ ನೀಡಿದ ಐಐಟಿ

‘ಮ್ಯಾಟ್ನಿ’ ಶೂಟಿಂಗ್​ ಸೆಟ್​​ನಲ್ಲಿ ಸತೀಶ್​ ‘ನೀನಾಸಂ’, ರಚಿತಾ ರಾಮ್​; ಇಲ್ಲಿವೆ ಫೋಟೋಗಳು

Published On - 2:42 pm, Tue, 18 January 22

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್