AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಬುಲೆನ್ಸ್ ಸಿಗದೆ ನಡುರಾತ್ರಿ ಸ್ಟ್ರೆಚರ್ ಮೂಲಕ ರೋಗಿಯನ್ನ ಮತ್ತೊಂದು ಆಸ್ಪತ್ರೆಗೆ ಶಿಪ್ಟ್ ಮಾಡಿದ ಸಂಬಂಧಿಕರು

ಆಂಬುಲೆನ್ಸ್ ಸಿಗದೆ ನಡುರಾತ್ರಿ ರಸ್ತೆಯಲ್ಲಿ ರೋಗಿಯನ್ನ ಸ್ಟ್ರೆಚರ್ ಮೂಲಕ ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರಗೆ  ಶಿಪ್ಟ್ ಮಾಡಿದ ಅಮಾನವೀಯ ಘಟನೆ ಹಾಸನ ನಗರದ ಸಂಪಿಗೆ ರಸ್ತೆಯಲ್ಲಿ ನಡೆದಿದೆ.

ಆಂಬುಲೆನ್ಸ್ ಸಿಗದೆ ನಡುರಾತ್ರಿ  ಸ್ಟ್ರೆಚರ್ ಮೂಲಕ ರೋಗಿಯನ್ನ ಮತ್ತೊಂದು ಆಸ್ಪತ್ರೆಗೆ ಶಿಪ್ಟ್ ಮಾಡಿದ ಸಂಬಂಧಿಕರು
ಆಂಬುಲೆನ್ಸ್ ಸಿಗದೆ ಸ್ಟ್ರೆಚರ್ ಮೂಲಕ ರೋಗಿಯ ಶಿಪ್ಟ್
TV9 Web
| Edited By: |

Updated on:May 27, 2022 | 9:37 AM

Share

ಹಾಸನ: ಆಂಬುಲೆನ್ಸ್ (Ambulance) ಸಿಗದೆ ನಡುರಾತ್ರಿ ರಸ್ತೆಯಲ್ಲಿ ರೋಗಿಯನ್ನ ಸ್ಟ್ರೆಚರ್ ಮೂಲಕ ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರಗೆ  ಶಿಪ್ಟ್ ಮಾಡಿದ ಅಮಾನವೀಯ ಘಟನೆ ಹಾಸನ (Hassan) ನಗರದ ಸಂಪಿಗೆ ರಸ್ತೆಯಲ್ಲಿ ನಡೆದಿದೆ. ರೋಗಿಯನ್ನು ಒಂದು ಖಾಸಗಿ ಆಸ್ಪತ್ರೆಯಿಂದ ಇನ್ನೊಂದು ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಬೇಕಿತ್ತು. ಇದಕ್ಕೆ ಆಸ್ಪತ್ರೆ ಸಿಬ್ಬಂದಿ ಆಂಬುಲೆನ್ಸ ಒದಗಿಸಿಲ್ಲ.  ಆಗ ಸಂಬಂಧಿಕರು ರೋಗಿಯನ್ನು ತುಂತುರು ಮಳೆಯ ನಡುವೆಯೇ  ಒಂದು ಖಾಸಗಿ ಆಸ್ಪತ್ರೆಯಿಂದ ಮತ್ತೊಂದು ಖಾಸಗಿ ಆಸ್ಪತ್ರೆಗೆ ರಸ್ತೆಯಲ್ಲಿ  ಸ್ಟ್ರೆಚರ್ ಮೂಲಕ ಶಿಫ್ಟ್ ಮಾಡಿದ್ದಾರೆ. ಈ ಮನಕಲಕುವ ವಿಡಿಯೋ ಸಾಮಾಜಿಕ ತಾಲತಾಣದಲ್ಲಿ ವೈರಲ್ ಆಗಿದೆ. ಆಂಬುಲೆನ್ಸ ಒದಗಿಸದ ಆಸ್ಪತ್ರೆ ಸಿಬ್ಬಂದಿ ವಿರುಧ್ದ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸುತ್ತಲೇ ರೋಗಿಯನ್ನು ಸ್ಥಳಾಂತರ ಮಾಡಿದ್ದಾರೆ. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ, ರೋಗಿಯ ಸ್ಥಿತಿ ಗಂಭಿರವಾಗಿದ್ದರು ಆಸ್ಪತ್ರೆ ಸಿಬ್ಬಂದಿ ತುರ್ತು ನೆರವು ನೀಡಲಿಲ್ಲ.

ಇದನ್ನು ಓದಿ: ವಿಮಾನದ ಕಿಟಕಿ ಬಳಿ ಗುಟ್ಕಾ ಚಿತ್ತಾರ, ಥೂ ಅಸಹ್ಯ ಎಂದ ನೆಟ್ಟಿಗರಿಂದ ಟ್ರೋಲ್​ಗಳ ಸುರಿಮಳೆ

ಹೃದಯ ವಿದ್ರಾವಕ ಘಟನೆಯ ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತೀವ್ರ ಆಕ್ರೋಶ ಹೊರ ಹಾಕಿದ್ದು, ಅಮಾನವೀಯವಾಗಿ ವರ್ತಿಸಿದ ಆಸ್ಪತ್ರೆ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ
Image
Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?
Image
ಹೊಸ ಪಠ್ಯಕ್ರಮದ ಪರಿಷ್ಕರಣ ಸಮತಿ ವಜಾ ಮಾಡಿ ಹಳೆಯ ಪಠ್ಯಕ್ರಮವನ್ನೇ ಮುಂದುವರಿಸಿ; ಸರ್ಕಾರಕ್ಕೆ ಮೇ 31ರವರೆಗೆ ಗಡುವು ನೀಡಿದ ಸಂಘಟನೆಗಳು
Image
RR vs RCB: ಕ್ವಾಲಿಫೈಯರ್-2 ಮುನ್ನ ಆರ್​ಸಿಬಿ ತಂಡದಲ್ಲಾಗುತ್ತಾ ಮೂರು ಮೇಜರ್ ಸರ್ಜರಿ
Image
Climate Change:ಹವಾಮಾನ ಬದಲಾವಣೆ ಮುಂದೊಂದು ದಿನ ನಿಮ್ಮ ನಿದ್ರೆಯನ್ನೇ ಕಸಿಯಬಹುದು

ಇದನ್ನು ಓದಿ: ಏರ್​ ಇಂಡಿಯಾದಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪೊಲೀಸರ ವಿಚಾರಣೆ ಅಂಜಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣು

ಕಲಬುರಗಿ: ಪೊಲೀಸರ ವಿಚಾರಣೆ ಮತ್ತು ಮರ್ಯಾದೆಗೆ ಅಂಜಿ ವ್ಯಕ್ತಿಯೋರ್ವ ಆತ್ಮಹತ್ಯೆ ಘಟನೆ ಕಲಬುರಗಿ ಜಿಲ್ಲೆಯ ಶಹಬಾದ್ ತಾಲೂಕಿನ ಮರತೂರ ಗ್ರಾಮದಲ್ಲಿ ನಡೆದಿದೆ. ಮನೋಜ ಸಿಂದೆ(32) ಮೃತ ದುರ್ದೈವಿ. ಮನೋಜ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಮನೋಜ್​ನ ಹೆಂಡತಿಯ ಅಣ್ಣನ ಮಗು ಕಾಣೆಯಾಗಿತ್ತು. ಹೀಗಾಗಿ ಆ ಮಗುವನ್ನು ಮನೋಜನೇ ತೆಗೆದುಕೊಂಡು ಹೋಗಿದ್ದಾನೆ ಎಂದು ಶಹಬಾದ್ ಠಾಣೆ ಪೊಲೀಸ್ ರು ಕಿರುಕುಳ ನಿಡುತ್ತಿದ್ದಾರೆಂದು ಆರೋಪಿಸಲಾಗಿತ್ತು. ಎರಡು ದಿನ ಪೊಲೀಸ್ ಠಾಣೆಯಲ್ಲಿ ಕೂಡಿ ಹಾಕಿ ಮನೋಜನಿಗೆ ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.  ಇವತ್ತು ಬಿಟ್ಟಿದ್ದೇವೆ, ನಾಳೆ ನಿನ್ನ ಹೆಂಡತಿಯನ್ನೂ ಕೂಡ ಕರೆದುಕೊಂಡು ಬಂದು ಇಬ್ಬರಿಗೂ ಜೈಲಿಗೆ ಹಾಕುತ್ತೇವೆ ಅಂತ ಬೆದರಿಕೆ ಹಾಕಿದ್ದರಂತೆ. ಈ ಸಂಬಂಧ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಹಬಾದ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:37 am, Fri, 27 May 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್