AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡೀ ರಾಜ್ಯದಲ್ಲಿ ಏಕೈಕ ಎಂಪಿ ಗೆಲ್ಲಿಸಿಕೊಂಡವರು ರೇವಣ್ಣ: ಬಿಜೆಪಿ ಶಾಸಕ ಪ್ರೀತಂಗೌಡ ಬಹುಪರಾಕ್

ರೇವಣ್ಣ ಅವರು ಜಿಲ್ಲೆಯಲ್ಲಿ ಅವರದ್ದೇ ಆದ ಶಕ್ತಿ ಇಟ್ಟುಕೊಂಡಿದ್ದಾರೆ. ಇಡೀ ರಾಜ್ಯದಲ್ಲಿ ಏಕೈಕ ಎಂಪಿ ಗೆಲ್ಲಿಸಿಕೊಂಡವರು ರೇವಣ್ಣ, ಅವರು ಒಂದು ಶಕ್ತಿ, ಅವರಿಂದಲೇ ಜೆಡಿಎಸ್ ಅಭ್ಯರ್ಥಿ ಗೆಲ್ಲುತ್ತಿದ್ದರು ಎಂದು ಬಿಜೆಪಿ ಶಾಸಕ ಪ್ರೀತಂಗೌಡ ಹೇಳಿದ್ದಾರೆ.

ಇಡೀ ರಾಜ್ಯದಲ್ಲಿ ಏಕೈಕ ಎಂಪಿ ಗೆಲ್ಲಿಸಿಕೊಂಡವರು ರೇವಣ್ಣ: ಬಿಜೆಪಿ ಶಾಸಕ ಪ್ರೀತಂಗೌಡ ಬಹುಪರಾಕ್
ಪ್ರೀತಂಗೌಡ, ರೇವಣ್ಣ
ಕಿರಣ್ ಹನುಮಂತ್​ ಮಾದಾರ್
|

Updated on:Apr 13, 2023 | 1:02 PM

Share

ಹಾಸನ: ‘ಯಾರೇ ಅಭ್ಯರ್ಥಿಯಾದರೂ ಒಂದು ಲಕ್ಷ ಓಟು ಪಡೆದುಕೊಳ್ಳಬೇಕು ಎಂದು ಕಾರ್ಯಕರ್ತರು ನಿರ್ಧರಿಸಿದ್ದಾರೆ ಎಂದು ಬಜೆಪಿ ಶಾಸಕ ಪ್ರೀತಂಗೌಡ(Preethamgowda) ಹೇಳಿದರು.  ರೇವಣ್ಣ(H. D. Revanna) ಸ್ಪರ್ಧಿಸಿದರೆ ಐವತ್ತು ಸಾವಿರ ಮತಗಳ ಲೀಡ್‌ನಿಂದ ಗೆಲ್ಲುತ್ತೇನೆ ಎಂಬ ಸವಾಲು ವಿಚಾರವಾಗಿ ಮಾತನಾಡಿದ ಅವರು ‘ಹದಿನೆಂಟು ತಿಂಗಳ ಹಿಂದೆ ಸವಾಲು ಹಾಕಿದ್ದೆ. ಆಗ ಯಾರು ಉತ್ತರ ಕೊಡಬೇಕು ಕೊಟ್ಟರೆ ಅದಕ್ಕೆ ಮಾನ್ಯತೆ ಇರುತ್ತಿತ್ತು. ಈಗ ಅದು ಅಪ್ರಸ್ತುತ, ಈಗ ಅವರು ಮಾತನಾಡಿದರೆ ನಾನು ಚರ್ಚೆ ಮಾಡುತ್ತೇನೆ. ಐವತ್ತು ಸಾವಿರ ಮತಗಳ ಲೀಡ್‌ಗೆ ಈಗಲೂ ಬದ್ದ, ಮುಂದಿನ ಚುನಾವಣೆಗೂ ಅವಕಾಶ ಕೋಡುತ್ತೇನೆ ಎಂದರು.

ಇಂದು ಹಾಸನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರೀತಂಗೌಡ ಅವರು ‘ರೇವಣ್ಣ ಅವರು ಜಿಲ್ಲೆಯಲ್ಲಿ ಅವರದ್ದೇ ಆದ ಶಕ್ತಿ ಇಟ್ಟುಕೊಂಡಿದ್ದಾರೆ. ಇಡೀ ರಾಜ್ಯದಲ್ಲಿ ಏಕೈಕ ಎಂಪಿ ಗೆಲ್ಲಿಸಿಕೊಂಡವರು ರೇವಣ್ಣ ಅವರು, ಎಂಪಿ, ಎಂಎಲ್‌ಸಿ ಚುನಾವಣೆಯಲ್ಲಿ ಇಬ್ಬರು ಮಕ್ಕಳನ್ನು ಗೆಲ್ಲಿಸಿಕೊಂಡಿದ್ದಾರೆ. ರೇವಣ್ಣ ಅವರು ಒಂದು ಶಕ್ತಿ, ಅವರಿಂದಲೇ ಜೆಡಿಎಸ್ ಅಭ್ಯರ್ಥಿ ಗೆಲ್ಲುತ್ತಿದ್ದರು. ಅವರ ಬೆಂಬಲ ಇಲ್ಲದಿದ್ದರೆ ಜೆಡಿಎಸ್ ಅಭ್ಯರ್ಥಿ ಇಪ್ಪತ್ತು ಸಾವಿರ ಓಟು ಪಡೆದುಕೊಳ್ಳತ್ತಾರೆ. ರೇವಣ್ಣ ಬೆಂಬಲ ಇಲ್ಲದೆ ಸ್ಪರ್ಧೆ ಮಾಡಿದ್ರೆ ಅವರ ಅಭ್ಯರ್ಥಿ ಠೇವಣಿ ಕಳೆದುಕೊಳ್ಳುತ್ತಾರೆ. ಹಿರಿಯ ನಾಯಕರು, ಅವರ ಶಕ್ತಿ ಹಾಗಾಗಿ ಅವರಿಗೆ ಗೌರವ ಕೊಡುತ್ತೇನೆ. ಸವಾಲೇ ಬೇರೆ ರೇವಣ್ಣ ಅವರ ಶಕ್ತಿನೇ ಬೇರೆ, ಯಾರೂ ಅಲ್ಲೆಗಳಿಯಬಾರದು ಎಂದು ಪರೋಕ್ಷವಾಗಿ ರೇವಣ್ಣ ಅವರದ್ದು ಕುಟುಂಬ ರಾಜಕಾರಣ ಎಂದು ಪ್ರೀತಂಗೌಡ ಕಾಲೆಳೆದಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ: ಇದೇ ಮೊದಲ ಬಾರಿಗೆ ಆನ್ ಲೈನ್​ ಮೂಲಕ ಸಲ್ಲಿಸಲು ಅವಕಾಶ

ಇನ್ನು ಚಾಮುಂಡೇಶ್ವರಿ, ಹುಣಸೂರು, ಚಾಮರಾಜನಗರಕ್ಕೆ ನಾಮಪತ್ರ ಸಲ್ಲಿಸುವಾಗ ಹೋಗುವಂತೆ ಹೈಕಮಾಂಡ್ ನನಗೆ ಸೂಚಿಸಿದೆ. ಮೊದಲ ಬಾರಿ ಸ್ಪರ್ಧೆ ಮಾಡಿದಾಗ ಶಾಸಕನಾಗಲು ಅವಕಾಶ, ಈಬಾರಿ ಗೆದ್ದರೆ ಸಚಿವರಾಗುತ್ತಾರೆ ಎಂಬ ಚರ್ಚೆ ಕುರಿತು‘ ನಾನು ರಾಜಕೀಯ ಸನ್ಯಾಸಿಯಲ್ಲ, ಗೆದ್ದರೆ ಸಚಿವ ಸ್ಥಾನ ಕೊಡಿ ಎಂದು ಕಾರ್ಯಕರ್ತರು ಕೇಳುತ್ತಾರೆ. ಕಾರ್ಯಕರ್ತರು ಕೇಳುವುದರಲ್ಲಿ ತಪ್ಪೇನಿದೆ ಹೇಳಿ ಎಂದು ಪ್ರೀತಂಗೌಡ ಹೇಳಿದ್ದಾರೆ.

‘ಕಳೆದ ಚುನಾವಣೆ ವೇಳೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇನೆ, ಧೂಳುಮುಕ್ತ, ಕಸಮುಕ್ತ ನಗರ, ರಿಂಗ್ ರೋಡ್, ಏರ್‌ಪೋರ್ಟ್, 24 ಗಂಟೆ ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಲಾಗಿದೆ. ಯಡಿಯೂರಪ್ಪ ಅವರ ಆಶೀರ್ವಾದ, ವಿಜಯೇಂದ್ರ ಅವರ ಶಕ್ತಿಯಿಂದ ಈ‌ ಎಲ್ಲಾ ಕೆಲಸಗಳನ್ನು ಮಾಡಲು ಸಾಧ್ಯವಾಯಿತು ಎಂದರು.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ

Published On - 12:57 pm, Thu, 13 April 23

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು