AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಕ್ಕೂ, ಹೊಳೆನರಸೀಪುರಕ್ಕೂ ಏನು ಸಂಬಂಧ? ಶಾಸಕ ರೇವಣ್ಣಗೆ ಕಂದಾಯ ಸಚಿವ ಅಶೋಕ್ ನೇರ ಪ್ರಶ್ನೆ

ಹಾಸನಕ್ಕೂ, ಹೊಳೆನರಸೀಪುರಕ್ಕೂ ಏನು ಸಂಬಂಧ ರೇವಣ್ಣನವರೇ? ಎಂದು ನೇರವಾಗಿ ಪ್ರಶ್ನಿಸಿರುವ ಸಚಿವ ಅಶೋಕ್ ಅಭಿವೃದ್ಧಿ ಕೆಲಸಗಳಿಗೆ ಯಾರೂ ತೊಂದರೆ ನೀಡಬಾರದು. ಹಾಸನದಲ್ಲಿ ಆಡಳಿತಸೌಧ ನಿರ್ಮಿಸಿದರೆ ನಿಮಗ್ಯಾಕೆ ಹೊಟ್ಟೆ ಉರಿ? ಎಂದು ಸಚಿವ ಅಶೋಕ್ ಪ್ರಶ್ನಿಸಿದ್ದಾರೆ

ಹಾಸನಕ್ಕೂ, ಹೊಳೆನರಸೀಪುರಕ್ಕೂ ಏನು ಸಂಬಂಧ? ಶಾಸಕ ರೇವಣ್ಣಗೆ ಕಂದಾಯ ಸಚಿವ ಅಶೋಕ್ ನೇರ ಪ್ರಶ್ನೆ
ಹಾಸನಕ್ಕೂ, ಹೊಳೆನರಸೀಪುರಕ್ಕೂ ಏನು ಸಂಬಂಧ ರೇವಣ್ಣನವರೇ? ಅಭಿವೃದ್ಧಿ ಕೆಲಸಗಳಿಗೆ ಯಾರೂ ತೊಂದರೆ ನೀಡಬಾರದು- ಕಂದಾಯ ಸಚಿವ ಅಶೋಕ್ ಗರಂ
TV9 Web
| Edited By: |

Updated on:Apr 27, 2022 | 4:34 PM

Share

ಹಾಸನ: ಹಾಸನದಲ್ಲಿ ತಾಲೂಕು ಕಚೇರಿ ಮತ್ತು ಡಿಸಿ ಕಚೇರಿ ನಿರ್ಮಾಣ ವಿಚಾರವಾಗಿ ನೂತನ ಕಟ್ಟಡಗಳ ನಿರ್ಮಾಣಕ್ಕೆ ಹೊಳೆನರಸೀಪುರ ಶಾಸಕ ಹೆಚ್​.ಡಿ. ರೇವಣ್ಣ ವಿರೋಧ ವ್ಯಕ್ತಪಡಿಸಿದ್ದು ಸ್ಥಳೀಯ ಅಧಿಕಾರಿಗಳ ವಿರುದ್ಧ ವಾಚಾಗೋಚರವಾಗಿ ಬೈದಾಡಿದ್ದಾರೆ. ಹಾಸನ ಡಿಸಿ ಕಛೇರಿ ಮತ್ತು ತಾಲ್ಲೂಕು ಕಛೇರಿ ತೆರವಿಗೆ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಿಗೇ ಹಾಸನದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ರೇವಣ್ಣ ವರ್ತನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಹಾಸನಕ್ಕೂ, ಹೊಳೆನರಸೀಪುರಕ್ಕೂ ಏನು ಸಂಬಂಧ ರೇವಣ್ಣನವರೇ? ಎಂದು ನೇರವಾಗಿ ಪ್ರಶ್ನಿಸಿರುವ ಸಚಿವ ಅಶೋಕ್ ಅಭಿವೃದ್ಧಿ ಕೆಲಸಗಳಿಗೆ ಯಾರೂ ತೊಂದರೆ ನೀಡಬಾರದು. ಹಾಸನದಲ್ಲಿ ಆಡಳಿತಸೌಧ ನಿರ್ಮಿಸಿದರೆ ನಿಮಗ್ಯಾಕೆ ಹೊಟ್ಟೆ ಉರಿ? ನಿಮ್ಮ ಕೈಯಲ್ಲಿ ಮಾಡಲು ಆಗದಿದ್ದರೂ, ಯಾಕೆ ಕಲ್ಲು ಹಾಕೋ ಕೆಲಸ ಮಾಡ್ತೀರಾ? ನಿಮ್ಮ ಕ್ಷೇತ್ರವನ್ನು ನೋಡಿಕೊಳ್ಳಿ, ಇಲ್ಲಿಯವರೆಗೂ ಬರೋದು ಬೇಡ ಎಂದು ಮಾಜಿ ಸಚಿವ ಹೆಚ್​​. ಡಿ.ರೇವಣ್ಣಗೆ ಸಚಿವ ಅಶೋಕ್ ಟಾಂಗ್​​ ನೀಡಿದ್ದಾರೆ. ಅವರ ಅವಧಿಯಲ್ಲಿ ಈ ಕೆಲಸ ಮಾಡಿಲ್ಲ ಅಂತ ಬೇಸರ ಇರಬಹುದು. ನಾನೇ ಮಾಡಿದ್ದು ಅನ್ನೋ ಮೈಂಡ್ ಸೆಟ್​ನಿಂದ ರೇವಣ್ಣ ಹೊರಬರಲಿ ಎಂದು ಸಚಿವ ಅಶೋಕ್ ಕಿವಿಮಾತು ಹೇಳಿದರು.

ಮಾಜಿ ಸಚಿವ ರೇವಣ್ಣ ವಿಷಾದ: ಇನ್ನು, ಹಾಸನದ ಟ್ರಕ್ ಟರ್ಮಿನಲ್ ನಿರ್ಮಾಣ ವಿಚಾರವಾಗಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ (ಇಓ) ಯಶ್ವಂತ್ ಗೆ ಮಂಗಳವಾರ ನಿಂದನೆ ಮಾಡಿದ ವಿಚಾರವಾಗಿ ಇದೀಗತಾನೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ರೇವಣ್ಣ ಅವರು ಜಿಲ್ಲಾಧಿಕಾರಿಯವರು ಬೇರೆ ಸ್ಥಳದಲ್ಲಿ ಟ್ರಕ್ ಟರ್ಮಿನಲ್ ಮಾಡ್ತೀನಿ ಅಂದಿದ್ದರು. ಆದರೆ ಮತ್ತೆ ಅದೇ ಸ್ಥಳದಲ್ಲಿ ಮತ್ತೆ ಕಾಮಗಾರಿ ಮಾಡೋಕೆ ಮುಂದಾದಾಗ ನನಗೆ ಕೋಪ ಬಂದಿದೆ. ನಾನು ಹಾಗೆ ಮಾತನಾಡಿದ್ದರ ಬಗ್ಗೆ ನಾನು ಅಲ್ಲೇ ಡಿಸಿ ಹಾಗೂ ಇಓ ಗೆ ಹೇಳಿದೆ. ನಾನು ಸಿಟ್ಟಿನಲ್ಲಿ ಆಡಿದ ಮಾತಿಗೆ ಬೇಜಾರು ಮಾಡಿಕೊಳ್ಳದಂತೆ ಹೇಳಿದ್ದೆ. ನಾನು ಉದ್ದೇಶಪೂರ್ವಕವಾಗಿ ಹಾಗೆ ಮಾತಾಡಿಲ್ಲ ಎಂದು ಇಓ ಬಗ್ಗೆ ಆಡಿದ ಮಾತಿಗೆ ಮಾಜಿ ಸಚಿವ ರೇವಣ್ಣ ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಾಸನ ಜನರೆದುರೇ ತಾ.ಪಂ. ಅಧಿಕಾರಿಗೆ ಏಕವಚನದಲ್ಲಿ ತರಾಟೆ, ಜಿಲ್ಲಾಧಿಕಾರಿಗೂ ವಾರ್ನ್ ಮಾಡಿದ ಜೆಡಿಎಸ್​ ಶಾಸಕ ರೇವಣ್ಣ

ಇದನ್ನೂ ಓದಿ: ಹೆಚ್ಡಿ ರೇವಣ್ಣಗೆ ಶಿಕ್ಷಣ ಎಂದರೆ ಏನೆಂದು ಗೊತ್ತಿಲ್ಲ; ತಮ್ಮ ಬಗ್ಗೆ ಟೀಕೆ ಮಾಡಿದ್ದ ರೇವಣ್ಣಗೆ ತಿರುಗೇಟು ಕೊಟ್ಟ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್

Published On - 2:18 pm, Wed, 27 April 22

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು