AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಕ್ಕೂ, ಹೊಳೆನರಸೀಪುರಕ್ಕೂ ಏನು ಸಂಬಂಧ? ಶಾಸಕ ರೇವಣ್ಣಗೆ ಕಂದಾಯ ಸಚಿವ ಅಶೋಕ್ ನೇರ ಪ್ರಶ್ನೆ

ಹಾಸನಕ್ಕೂ, ಹೊಳೆನರಸೀಪುರಕ್ಕೂ ಏನು ಸಂಬಂಧ ರೇವಣ್ಣನವರೇ? ಎಂದು ನೇರವಾಗಿ ಪ್ರಶ್ನಿಸಿರುವ ಸಚಿವ ಅಶೋಕ್ ಅಭಿವೃದ್ಧಿ ಕೆಲಸಗಳಿಗೆ ಯಾರೂ ತೊಂದರೆ ನೀಡಬಾರದು. ಹಾಸನದಲ್ಲಿ ಆಡಳಿತಸೌಧ ನಿರ್ಮಿಸಿದರೆ ನಿಮಗ್ಯಾಕೆ ಹೊಟ್ಟೆ ಉರಿ? ಎಂದು ಸಚಿವ ಅಶೋಕ್ ಪ್ರಶ್ನಿಸಿದ್ದಾರೆ

ಹಾಸನಕ್ಕೂ, ಹೊಳೆನರಸೀಪುರಕ್ಕೂ ಏನು ಸಂಬಂಧ? ಶಾಸಕ ರೇವಣ್ಣಗೆ ಕಂದಾಯ ಸಚಿವ ಅಶೋಕ್ ನೇರ ಪ್ರಶ್ನೆ
ಹಾಸನಕ್ಕೂ, ಹೊಳೆನರಸೀಪುರಕ್ಕೂ ಏನು ಸಂಬಂಧ ರೇವಣ್ಣನವರೇ? ಅಭಿವೃದ್ಧಿ ಕೆಲಸಗಳಿಗೆ ಯಾರೂ ತೊಂದರೆ ನೀಡಬಾರದು- ಕಂದಾಯ ಸಚಿವ ಅಶೋಕ್ ಗರಂ
TV9 Web
| Edited By: ಸಾಧು ಶ್ರೀನಾಥ್​|

Updated on:Apr 27, 2022 | 4:34 PM

Share

ಹಾಸನ: ಹಾಸನದಲ್ಲಿ ತಾಲೂಕು ಕಚೇರಿ ಮತ್ತು ಡಿಸಿ ಕಚೇರಿ ನಿರ್ಮಾಣ ವಿಚಾರವಾಗಿ ನೂತನ ಕಟ್ಟಡಗಳ ನಿರ್ಮಾಣಕ್ಕೆ ಹೊಳೆನರಸೀಪುರ ಶಾಸಕ ಹೆಚ್​.ಡಿ. ರೇವಣ್ಣ ವಿರೋಧ ವ್ಯಕ್ತಪಡಿಸಿದ್ದು ಸ್ಥಳೀಯ ಅಧಿಕಾರಿಗಳ ವಿರುದ್ಧ ವಾಚಾಗೋಚರವಾಗಿ ಬೈದಾಡಿದ್ದಾರೆ. ಹಾಸನ ಡಿಸಿ ಕಛೇರಿ ಮತ್ತು ತಾಲ್ಲೂಕು ಕಛೇರಿ ತೆರವಿಗೆ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಿಗೇ ಹಾಸನದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ರೇವಣ್ಣ ವರ್ತನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಹಾಸನಕ್ಕೂ, ಹೊಳೆನರಸೀಪುರಕ್ಕೂ ಏನು ಸಂಬಂಧ ರೇವಣ್ಣನವರೇ? ಎಂದು ನೇರವಾಗಿ ಪ್ರಶ್ನಿಸಿರುವ ಸಚಿವ ಅಶೋಕ್ ಅಭಿವೃದ್ಧಿ ಕೆಲಸಗಳಿಗೆ ಯಾರೂ ತೊಂದರೆ ನೀಡಬಾರದು. ಹಾಸನದಲ್ಲಿ ಆಡಳಿತಸೌಧ ನಿರ್ಮಿಸಿದರೆ ನಿಮಗ್ಯಾಕೆ ಹೊಟ್ಟೆ ಉರಿ? ನಿಮ್ಮ ಕೈಯಲ್ಲಿ ಮಾಡಲು ಆಗದಿದ್ದರೂ, ಯಾಕೆ ಕಲ್ಲು ಹಾಕೋ ಕೆಲಸ ಮಾಡ್ತೀರಾ? ನಿಮ್ಮ ಕ್ಷೇತ್ರವನ್ನು ನೋಡಿಕೊಳ್ಳಿ, ಇಲ್ಲಿಯವರೆಗೂ ಬರೋದು ಬೇಡ ಎಂದು ಮಾಜಿ ಸಚಿವ ಹೆಚ್​​. ಡಿ.ರೇವಣ್ಣಗೆ ಸಚಿವ ಅಶೋಕ್ ಟಾಂಗ್​​ ನೀಡಿದ್ದಾರೆ. ಅವರ ಅವಧಿಯಲ್ಲಿ ಈ ಕೆಲಸ ಮಾಡಿಲ್ಲ ಅಂತ ಬೇಸರ ಇರಬಹುದು. ನಾನೇ ಮಾಡಿದ್ದು ಅನ್ನೋ ಮೈಂಡ್ ಸೆಟ್​ನಿಂದ ರೇವಣ್ಣ ಹೊರಬರಲಿ ಎಂದು ಸಚಿವ ಅಶೋಕ್ ಕಿವಿಮಾತು ಹೇಳಿದರು.

ಮಾಜಿ ಸಚಿವ ರೇವಣ್ಣ ವಿಷಾದ: ಇನ್ನು, ಹಾಸನದ ಟ್ರಕ್ ಟರ್ಮಿನಲ್ ನಿರ್ಮಾಣ ವಿಚಾರವಾಗಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ (ಇಓ) ಯಶ್ವಂತ್ ಗೆ ಮಂಗಳವಾರ ನಿಂದನೆ ಮಾಡಿದ ವಿಚಾರವಾಗಿ ಇದೀಗತಾನೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ರೇವಣ್ಣ ಅವರು ಜಿಲ್ಲಾಧಿಕಾರಿಯವರು ಬೇರೆ ಸ್ಥಳದಲ್ಲಿ ಟ್ರಕ್ ಟರ್ಮಿನಲ್ ಮಾಡ್ತೀನಿ ಅಂದಿದ್ದರು. ಆದರೆ ಮತ್ತೆ ಅದೇ ಸ್ಥಳದಲ್ಲಿ ಮತ್ತೆ ಕಾಮಗಾರಿ ಮಾಡೋಕೆ ಮುಂದಾದಾಗ ನನಗೆ ಕೋಪ ಬಂದಿದೆ. ನಾನು ಹಾಗೆ ಮಾತನಾಡಿದ್ದರ ಬಗ್ಗೆ ನಾನು ಅಲ್ಲೇ ಡಿಸಿ ಹಾಗೂ ಇಓ ಗೆ ಹೇಳಿದೆ. ನಾನು ಸಿಟ್ಟಿನಲ್ಲಿ ಆಡಿದ ಮಾತಿಗೆ ಬೇಜಾರು ಮಾಡಿಕೊಳ್ಳದಂತೆ ಹೇಳಿದ್ದೆ. ನಾನು ಉದ್ದೇಶಪೂರ್ವಕವಾಗಿ ಹಾಗೆ ಮಾತಾಡಿಲ್ಲ ಎಂದು ಇಓ ಬಗ್ಗೆ ಆಡಿದ ಮಾತಿಗೆ ಮಾಜಿ ಸಚಿವ ರೇವಣ್ಣ ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಾಸನ ಜನರೆದುರೇ ತಾ.ಪಂ. ಅಧಿಕಾರಿಗೆ ಏಕವಚನದಲ್ಲಿ ತರಾಟೆ, ಜಿಲ್ಲಾಧಿಕಾರಿಗೂ ವಾರ್ನ್ ಮಾಡಿದ ಜೆಡಿಎಸ್​ ಶಾಸಕ ರೇವಣ್ಣ

ಇದನ್ನೂ ಓದಿ: ಹೆಚ್ಡಿ ರೇವಣ್ಣಗೆ ಶಿಕ್ಷಣ ಎಂದರೆ ಏನೆಂದು ಗೊತ್ತಿಲ್ಲ; ತಮ್ಮ ಬಗ್ಗೆ ಟೀಕೆ ಮಾಡಿದ್ದ ರೇವಣ್ಣಗೆ ತಿರುಗೇಟು ಕೊಟ್ಟ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್

Published On - 2:18 pm, Wed, 27 April 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು