AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಕ್ಕೂ, ಹೊಳೆನರಸೀಪುರಕ್ಕೂ ಏನು ಸಂಬಂಧ? ಶಾಸಕ ರೇವಣ್ಣಗೆ ಕಂದಾಯ ಸಚಿವ ಅಶೋಕ್ ನೇರ ಪ್ರಶ್ನೆ

ಹಾಸನಕ್ಕೂ, ಹೊಳೆನರಸೀಪುರಕ್ಕೂ ಏನು ಸಂಬಂಧ ರೇವಣ್ಣನವರೇ? ಎಂದು ನೇರವಾಗಿ ಪ್ರಶ್ನಿಸಿರುವ ಸಚಿವ ಅಶೋಕ್ ಅಭಿವೃದ್ಧಿ ಕೆಲಸಗಳಿಗೆ ಯಾರೂ ತೊಂದರೆ ನೀಡಬಾರದು. ಹಾಸನದಲ್ಲಿ ಆಡಳಿತಸೌಧ ನಿರ್ಮಿಸಿದರೆ ನಿಮಗ್ಯಾಕೆ ಹೊಟ್ಟೆ ಉರಿ? ಎಂದು ಸಚಿವ ಅಶೋಕ್ ಪ್ರಶ್ನಿಸಿದ್ದಾರೆ

ಹಾಸನಕ್ಕೂ, ಹೊಳೆನರಸೀಪುರಕ್ಕೂ ಏನು ಸಂಬಂಧ? ಶಾಸಕ ರೇವಣ್ಣಗೆ ಕಂದಾಯ ಸಚಿವ ಅಶೋಕ್ ನೇರ ಪ್ರಶ್ನೆ
ಹಾಸನಕ್ಕೂ, ಹೊಳೆನರಸೀಪುರಕ್ಕೂ ಏನು ಸಂಬಂಧ ರೇವಣ್ಣನವರೇ? ಅಭಿವೃದ್ಧಿ ಕೆಲಸಗಳಿಗೆ ಯಾರೂ ತೊಂದರೆ ನೀಡಬಾರದು- ಕಂದಾಯ ಸಚಿವ ಅಶೋಕ್ ಗರಂ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Apr 27, 2022 | 4:34 PM

ಹಾಸನ: ಹಾಸನದಲ್ಲಿ ತಾಲೂಕು ಕಚೇರಿ ಮತ್ತು ಡಿಸಿ ಕಚೇರಿ ನಿರ್ಮಾಣ ವಿಚಾರವಾಗಿ ನೂತನ ಕಟ್ಟಡಗಳ ನಿರ್ಮಾಣಕ್ಕೆ ಹೊಳೆನರಸೀಪುರ ಶಾಸಕ ಹೆಚ್​.ಡಿ. ರೇವಣ್ಣ ವಿರೋಧ ವ್ಯಕ್ತಪಡಿಸಿದ್ದು ಸ್ಥಳೀಯ ಅಧಿಕಾರಿಗಳ ವಿರುದ್ಧ ವಾಚಾಗೋಚರವಾಗಿ ಬೈದಾಡಿದ್ದಾರೆ. ಹಾಸನ ಡಿಸಿ ಕಛೇರಿ ಮತ್ತು ತಾಲ್ಲೂಕು ಕಛೇರಿ ತೆರವಿಗೆ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಿಗೇ ಹಾಸನದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ರೇವಣ್ಣ ವರ್ತನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಹಾಸನಕ್ಕೂ, ಹೊಳೆನರಸೀಪುರಕ್ಕೂ ಏನು ಸಂಬಂಧ ರೇವಣ್ಣನವರೇ? ಎಂದು ನೇರವಾಗಿ ಪ್ರಶ್ನಿಸಿರುವ ಸಚಿವ ಅಶೋಕ್ ಅಭಿವೃದ್ಧಿ ಕೆಲಸಗಳಿಗೆ ಯಾರೂ ತೊಂದರೆ ನೀಡಬಾರದು. ಹಾಸನದಲ್ಲಿ ಆಡಳಿತಸೌಧ ನಿರ್ಮಿಸಿದರೆ ನಿಮಗ್ಯಾಕೆ ಹೊಟ್ಟೆ ಉರಿ? ನಿಮ್ಮ ಕೈಯಲ್ಲಿ ಮಾಡಲು ಆಗದಿದ್ದರೂ, ಯಾಕೆ ಕಲ್ಲು ಹಾಕೋ ಕೆಲಸ ಮಾಡ್ತೀರಾ? ನಿಮ್ಮ ಕ್ಷೇತ್ರವನ್ನು ನೋಡಿಕೊಳ್ಳಿ, ಇಲ್ಲಿಯವರೆಗೂ ಬರೋದು ಬೇಡ ಎಂದು ಮಾಜಿ ಸಚಿವ ಹೆಚ್​​. ಡಿ.ರೇವಣ್ಣಗೆ ಸಚಿವ ಅಶೋಕ್ ಟಾಂಗ್​​ ನೀಡಿದ್ದಾರೆ. ಅವರ ಅವಧಿಯಲ್ಲಿ ಈ ಕೆಲಸ ಮಾಡಿಲ್ಲ ಅಂತ ಬೇಸರ ಇರಬಹುದು. ನಾನೇ ಮಾಡಿದ್ದು ಅನ್ನೋ ಮೈಂಡ್ ಸೆಟ್​ನಿಂದ ರೇವಣ್ಣ ಹೊರಬರಲಿ ಎಂದು ಸಚಿವ ಅಶೋಕ್ ಕಿವಿಮಾತು ಹೇಳಿದರು.

ಮಾಜಿ ಸಚಿವ ರೇವಣ್ಣ ವಿಷಾದ: ಇನ್ನು, ಹಾಸನದ ಟ್ರಕ್ ಟರ್ಮಿನಲ್ ನಿರ್ಮಾಣ ವಿಚಾರವಾಗಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ (ಇಓ) ಯಶ್ವಂತ್ ಗೆ ಮಂಗಳವಾರ ನಿಂದನೆ ಮಾಡಿದ ವಿಚಾರವಾಗಿ ಇದೀಗತಾನೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ರೇವಣ್ಣ ಅವರು ಜಿಲ್ಲಾಧಿಕಾರಿಯವರು ಬೇರೆ ಸ್ಥಳದಲ್ಲಿ ಟ್ರಕ್ ಟರ್ಮಿನಲ್ ಮಾಡ್ತೀನಿ ಅಂದಿದ್ದರು. ಆದರೆ ಮತ್ತೆ ಅದೇ ಸ್ಥಳದಲ್ಲಿ ಮತ್ತೆ ಕಾಮಗಾರಿ ಮಾಡೋಕೆ ಮುಂದಾದಾಗ ನನಗೆ ಕೋಪ ಬಂದಿದೆ. ನಾನು ಹಾಗೆ ಮಾತನಾಡಿದ್ದರ ಬಗ್ಗೆ ನಾನು ಅಲ್ಲೇ ಡಿಸಿ ಹಾಗೂ ಇಓ ಗೆ ಹೇಳಿದೆ. ನಾನು ಸಿಟ್ಟಿನಲ್ಲಿ ಆಡಿದ ಮಾತಿಗೆ ಬೇಜಾರು ಮಾಡಿಕೊಳ್ಳದಂತೆ ಹೇಳಿದ್ದೆ. ನಾನು ಉದ್ದೇಶಪೂರ್ವಕವಾಗಿ ಹಾಗೆ ಮಾತಾಡಿಲ್ಲ ಎಂದು ಇಓ ಬಗ್ಗೆ ಆಡಿದ ಮಾತಿಗೆ ಮಾಜಿ ಸಚಿವ ರೇವಣ್ಣ ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಾಸನ ಜನರೆದುರೇ ತಾ.ಪಂ. ಅಧಿಕಾರಿಗೆ ಏಕವಚನದಲ್ಲಿ ತರಾಟೆ, ಜಿಲ್ಲಾಧಿಕಾರಿಗೂ ವಾರ್ನ್ ಮಾಡಿದ ಜೆಡಿಎಸ್​ ಶಾಸಕ ರೇವಣ್ಣ

ಇದನ್ನೂ ಓದಿ: ಹೆಚ್ಡಿ ರೇವಣ್ಣಗೆ ಶಿಕ್ಷಣ ಎಂದರೆ ಏನೆಂದು ಗೊತ್ತಿಲ್ಲ; ತಮ್ಮ ಬಗ್ಗೆ ಟೀಕೆ ಮಾಡಿದ್ದ ರೇವಣ್ಣಗೆ ತಿರುಗೇಟು ಕೊಟ್ಟ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್

Published On - 2:18 pm, Wed, 27 April 22

ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು