AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ: ಕೈಮುಗಿದರೂ ಬಿಡದ ಕಿಡಿಗೇಡಿಗಳು

ಹಾಸನದ ಸಕಲೇಶಪುರದ ಬೆಟ್ಟ ಭೈರವೇಶ್ವರ ದೇಗುಲದಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್‌ಗೆ ಸ್ಥಳೀಯರು ವಿರೋಧಿಸಿ ಹಲ್ಲೆ ನಡೆಸಿದ್ದಾರೆ. ದೇವಾಲಯದ ಪಾವಿತ್ರ್ಯತೆಗೆ ಧಕ್ಕೆ ಆರೋಪಿಸಿ ನಡೆದ ಈ ಘಟನೆಯಲ್ಲಿ ಕ್ಯಾಮೆರಾ, ಮೊಬೈಲ್‌ಗಳು ಜಖಂಗೊಂಡಿವೆ. ಪೊಲೀಸರ ಸಮ್ಮುಖದಲ್ಲೂ ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ದೇಗುಲಗಳಲ್ಲಿ ಫೋಟೋಶೂಟ್‌ಗೆ ಅನುಮತಿ ಮತ್ತು ನಿಯಮ ಪಾಲನೆ ಅಗತ್ಯ ಎಂದು ಘಟನೆ ಒತ್ತಿಹೇಳುತ್ತದೆ.

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ: ಕೈಮುಗಿದರೂ ಬಿಡದ ಕಿಡಿಗೇಡಿಗಳು
ಹಾಸನದಲ್ಲಿ ಗಲಾಟೆImage Credit source: Tv9 kannada
ಮಂಜುನಾಥ ಕೆಬಿ
| Edited By: |

Updated on: Mar 28, 2026 | 3:51 PM

Share

ಸಕಲೇಶಪುರ, ಮಾ.28: ಸಿನೆಮಾಗಳ ಚಿತ್ರೀಕರಣಕ್ಕೆ ಹೆಸರಾದ ಹಾಸನದ ಸಕಲೇಶಪುರ ತಾಲೂಕಿನ ಪ್ರಸಿದ್ಧ ಬೆಟ್ಟದ ಭೈರವೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್ ನಡೆಸುತ್ತಿದ್ದ ತಂಡದ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಘಟನೆ ತಾರಕಕ್ಕೇರಿ ಪೊಲೀಸ್ ಠಾಣೆಯ ಮುಂದೆಯೇ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. ಬೆಟ್ಟದ ಭೈರವೇಶ್ವರ ದೇಗುಲದ ಸುಂದರ ಪರಿಸರದಲ್ಲಿ ಇಂದು ಮುಂಜಾನೆ ಬೆಂಗಳೂರು ಮತ್ತು ಹಾಸನದಿಂದ ಬಂದಿದ್ದ ನಾಲ್ಕು ಫೋಟೋಗ್ರಫಿ ತಂಡಗಳು ಶೂಟಿಂಗ್‌ನಲ್ಲಿ ನಿರತವಾಗಿದ್ದವು. ಈ ವೇಳೆ ಅಲ್ಲಿಗೆ ಬಂದ ಸ್ಥಳೀಯ ಕೆಲ ಕಿಡಿಗೇಡಿಗಳು, “ದೇವಸ್ಥಾನದ ಪಾವಿತ್ರತೆಗೆ ಧಕ್ಕೆ ತರುತ್ತಿದ್ದೀರಿ” ಎಂದು ಆರೋಪಿಸಿ ವಿನಾಕಾರಣ ಗಲಾಟೆ ಆರಂಭಿಸಿದ್ದಾರೆ. ಫೋಟೋಗ್ರಾಫರ್‌ಗಳು ಕೈಮುಗಿದು ಬೇಡಿಕೊಂಡರೂ ಕೇಳದ ಪುಂಡರು ಚೇತನ್, ಯಶು ಮತ್ತು ಸೋಮಶೇಖರ್ ಎಂಬುವವರ ಮೇಲೆ ತೀವ್ರ ಹಲ್ಲೆ ನಡೆಸಿದ್ದಾರೆ.

ಹಲ್ಲೆಕೋರರು ಲಕ್ಷಾಂತರ ರೂಪಾಯಿ ಬೆಲೆಯ ಕ್ಯಾಮೆರಾ, ಮೊಬೈಲ್‌ಗಳನ್ನು ಜಖಂಗೊಳಿಸಿದ್ದಾರೆ. ಮೇಕಪ್ ಆರ್ಟಿಸ್ಟ್‌ಗಳ ಮೇಲೂ ಹಲ್ಲೆ ನಡೆದಿದೆ ಎನ್ನಲಾಗಿದೆ. ಘಟನೆ ಸಂಬಂಧ ದೂರು ನೀಡಲು ಸಕಲೇಶಪುರ ಗ್ರಾಮಾಂತರ ಠಾಣೆಗೆ ಬಂದಾಗ, ಪೊಲೀಸರ ಸಮ್ಮುಖದಲ್ಲೇ ಎರಡೂ ಗುಂಪುಗಳ ನಡುವೆ ಮತ್ತೆ ವಾಗ್ವಾದ ನಡೆದು ಮಾರಾಮಾರಿ ಸಂಭವಿಸಿದೆ. ಹಲ್ಲೆಗೊಳಗಾದ ಫೋಟೋಗ್ರಾಫರ್ ಒಬ್ಬರು ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೊಂದೆಡೆ ಸ್ಥಳೀಯರು, “ಇದು ಪ್ರವಾಸಿ ತಾಣವಲ್ಲ, ನಮ್ಮ ಶ್ರದ್ಧಾ ಕೇಂದ್ರ. ಇಲ್ಲಿಗೆ ಬರುವವರು ಅಸಭ್ಯ ಉಡುಗೆ ತೊಟ್ಟು ಪಾವಿತ್ರತೆ ಹಾಳು ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ. ಸುತ್ತಲೂ ಬೇಲಿ ಹಾಕಿ ಧಾರ್ಮಿಕ ಕೇಂದ್ರವನ್ನು ರಕ್ಷಿಸುವಂತೆ ಅವರು ಒತ್ತಾಯಿಸಿದ್ದಾರೆ. ಸದ್ಯ ಸಕಲೇಶಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!

ಇನ್ನು ದೇವಾಲಯದಲ್ಲಿ ಫೋಟೋಶೂಟ್​​ ಮಾಡುವಾಗ ಕೆಲವೊಂದು ಕ್ರಮಗಳನ್ನು ಹಾಗೂ ನಿಯಮಗಳನ್ನು ಪಾಲಿಸಲೇಬೇಕು. ದೇವಸ್ಥಾನಗಳು ಕೇವಲ ಪ್ರವಾಸಿ ತಾಣಗಳಲ್ಲ, ಅವು ನಂಬಿಕೆಯ ಕೇಂದ್ರಗಳು. ಅಲ್ಲಿ ಶೂಟಿಂಗ್ ಮಾಡುವಾಗ ಈ ಕೆಳಗಿನ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳುವುದು ಫೋಟೋಗ್ರಾಫರ್‌ಗಳು ಮತ್ತು ಜೋಡಿಗಳ ಕರ್ತವ್ಯ. ದೇವಸ್ಥಾನದ ಆಡಳಿತ ಮಂಡಳಿ ಅಥವಾ ಮುಜರಾಯಿ ಇಲಾಖೆಯಿಂದ ಲಿಖಿತ ಅನುಮತಿ ಪಡೆಯುವುದು ಒಳಿತು. ಖಾಸಗಿ ದೇವಸ್ಥಾನವಾಗಿದ್ದರೆ ಅಲ್ಲಿನ ಅರ್ಚಕರು ಅಥವಾ ಧರ್ಮದರ್ಶಿಗಳ ಗಮನಕ್ಕೆ ತರಬೇಕು. ಒಂದು ವೇಳೆ ಈ ಕೆಲಸ ಮಾಡದಿದ್ದರೆ ಇಂತಹ ಘಟನೆಗಳು ನಡೆಯುತ್ತದೆ. ಗರ್ಭಗುಡಿಯ ಒಳಗೆ ಅಥವಾ ದೇವಸ್ಥಾನದ ಆವರಣದಲ್ಲಿ ಪಾದರಕ್ಷೆ ಧರಿಸಿ ಶೂಟಿಂಗ್ ಮಾಡಬಾರದು. ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಭಂಗಿಗಳಲ್ಲಿ ಫೋಟೋ ತೆಗೆಯಬಾರದು ಎಂಬ ಬಗ್ಗೆ ಮೊದಲೇ ಆಲೋಚನೆ ಇರಬೇಕು. ದೇವಸ್ಥಾನದ ಮರ್ಯಾದೆಗೆ ತಕ್ಕಂತೆ ಸಾಂಪ್ರದಾಯಿಕ ಅಥವಾ ಸಭ್ಯ ಉಡುಗೆಗಳನ್ನು ತೊಡುವುದು ಉತ್ತಮ. ಅತಿಯಾದ ಮಾಡರ್ನ್ ಅಥವಾ ಅಸಭ್ಯ ಉಡುಗೆಗಳು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಬಹುದು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
ಮಾದಪ್ಪನ ಸನ್ನಿಧಿಯಲ್ಲಿ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ ಸಂಗ್ರಹ!
ಮಾದಪ್ಪನ ಸನ್ನಿಧಿಯಲ್ಲಿ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ ಸಂಗ್ರಹ!
ಗೌರಿ ಕಲ್ಯಾಣ ಸೀರಿಯಲ್ ಸಂತೆ; ಕಣ್ಣು ಕಟ್ಟಿದರೂ ಚಂದನಾ ಪತ್ತೆ ಹಚ್ಚಿದ ಹರಿ
ಗೌರಿ ಕಲ್ಯಾಣ ಸೀರಿಯಲ್ ಸಂತೆ; ಕಣ್ಣು ಕಟ್ಟಿದರೂ ಚಂದನಾ ಪತ್ತೆ ಹಚ್ಚಿದ ಹರಿ