AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಮನೆಗೆ ಮರಳಿದ ಸಾಲುಮರದ ತಿಮ್ಮಕ್ಕ, ಇಬ್ಬರು ನರ್ಸ್‌ಗಳ ನಿಯೋಜನೆ

ಅನಾರೋಗ್ಯದಿಂದ ಬಳಲುತ್ತಿದ್ದ ವೃಕ್ಷಮಾತೆ, ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಬೇಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಇದೀಗ ಮನೆಗೆ ಮರಳಿದ್ದಾರೆ. ಸರ್ಕಾರ ಸಂಪುದ ದರ್ಜೆ ಸ್ಥಾನಮಾನ ನೀಡಿದ್ದರೂ ಸಹ ಚಿಕಿತ್ಸೆ ಪಡೆದುಕೊಂಡು ಆಸ್ಪತ್ರೆಯಿಂದ ಅಂಬ್ಯಲೆನ್ಸ್‌‌ನಲ್ಲೇ ಮನೆಗೆ ವಾಪಾಸ್ಸಾಗಿದ್ದಾರೆ.

ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಮನೆಗೆ ಮರಳಿದ ಸಾಲುಮರದ ತಿಮ್ಮಕ್ಕ, ಇಬ್ಬರು ನರ್ಸ್‌ಗಳ ನಿಯೋಜನೆ
ಸಾಲುಮರದ ತಿಮ್ಮಕ್ಕ
ಮಂಜುನಾಥ ಕೆಬಿ
| Edited By: |

Updated on:Sep 27, 2023 | 11:55 AM

Share

ಹಾಸನ, (ಸೆಪ್ಟೆಂಬರ್ 27): ಅನಾರೋಗ್ಯದಿಂದ ಬಳಲುತ್ತಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ (Saalumarada timmakka) ಬೇಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಇದೀಗ ಮನೆಗೆ ಮರಳಿದ್ದಾರೆ. ಜ್ವರ, ಮೈಕೈ ನೋವಿದಿಂದ ಸುಸ್ತಾಗಿದ್ದ ತಿಮ್ಮಕ್ಕ ಅವರನ್ನು ಬೇಲೂರು ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇದೀಗ ಆರೋಗ್ಯ ಸುಧಾರಣೆಯಾಗಿದ್ದರಿಂದ ಬೇಲೂರು ತಾಲ್ಲೂಕಿನ ಬಳ್ಳೂರಿನರುವ ತಮ್ಮ ನಿವಾಸಕ್ಕೆ ಮರಳಿದ್ದಾರೆ. ಇನ್ನು ಹಾಸನ ಜಿಲ್ಲಾಡಳಿತವು ತಿಮ್ಮಕ್ಕ ಅವರಿಗೆ ಚಿಕಿತ್ಸೆ ನೀಡಲು ಇಬ್ಬರು ನರ್ಸ್‌ಗಳನ್ನು ನಿಯೋಜನೆ ಮಾಡಿದೆ.

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಸರ್ಕಾರ ಸಂಪುದ ದರ್ಜೆ ಸ್ಥಾನಮಾನ ನೀಡಿದ್ದರೂ ಸಹ ಚಿಕಿತ್ಸೆ ಪಡೆದುಕೊಂಡು ಆಸ್ಪತ್ರೆಯಿಂದ ಅಂಬ್ಯಲೆನ್ಸ್‌‌ನಲ್ಲೇ ಮನೆಗೆ ವಾಪಾಸ್ಸಾಗಿರುವುದು ವಿಶೇಷ. ಇನ್ನು ಮನೆಯಲ್ಲಿ ತಿಮ್ಮಕ್ಕ ಅವರಿಗೆ ಚಿಕಿತ್ಸೆ ನೀಡಲು ಇಬ್ಬರು ನರ್ಸ್‌ಗಳನ್ನು ಜಿಲ್ಲಾಡಳಿತ ನಿಯೋಜನೆ ಮಾಡಿದೆ. ಬಳ್ಳೂರಿನ ನಿವಾಸಕ್ಕೆ ತೆರಳಿದ ಸಾಲುಮರದ ತಿಮ್ಮಕ್ಕ ವಿಶ್ರಾಂತಿ ಪಡೆಯುತ್ತಿದ್ದು, ಕೆಲ ದಿನಗಳ ಕಾಲ ನರ್ಸ್‌ಗಳೇ ಆರೋಗ್ಯ ನಿಗಾವಹಿಸಲಿದ್ದಾರೆ.

ಇದನ್ನೂ ಓದಿ: Saalumarada Thimmakka: ಕಾಲು ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ: ಆಸ್ಪತ್ರೆಗೆ ದಾಖಲು

ಇತ್ತೀಚೆಗಷ್ಟೇ ತಿಮ್ಮಕ್ಕ ಬೆಂಗಳೂರಿನ ಮಂಜುನಾಥನಗರದಲ್ಲಿರುವ ನಿವಾಸದಲ್ಲಿ ಕಾಲು ಜಾರಿ ಬಿದ್ದಿದ್ದು, ಬೆನ್ನು ಮೂಳೆಗೆ ಪೆಟ್ಟಾಗಿತ್ತು. ಹಾಗಾಗಿ ಅವರನ್ನು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಸಾಲುಮರದ ತಿಮ್ಮಕ್ಕ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಳ್ಳೂರಿನರುವ ನಿವಾಸದಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಇದರ ಮಧ್ಯೆ ಮೈಕೈ ನೋವಿನಿಂದ ಜ್ವರ ಬಂದಿತ್ತು. ಹೀಗಾಗಿ ಬೇಲೂಕು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗಿದೆ.

ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕ ಅವರು ಪರಿಸರದ ಮೇಲಿನ ತಮ್ಮ ಪ್ರೀತಿಯಿಂದ ಸಾಲುಮರದ ತಿಮ್ಮಕ್ಕ ಎಂದೇ ಖ್ಯಾತರಾದವರು. ಕಿತ್ತು ತಿನ್ನುವ ಬಡತನದ ನಡುವೆಯೂ ಸಾಲು ಸಾಲು ಗಿಡಗಳನ್ನು ನೆಟ್ಟು ಪೋಷಿಸಿ ಬೆಳೆಸಿರುವ ಈ ವೃಕ್ಷಮಾತೆ ಎಂತಹವರಿಗೂ ಸ್ಪೂರ್ತಿ. ಸುಮಾರು 112ರ ವಯಸ್ಸಿನ ತಿಮ್ಮಕ್ಕ ಅವರು ಕಳೆದ 65 ವರ್ಷಗಳಿಂದ ಗಿಡಗಳನ್ನು ನೆಟ್ಟು ಪೋಷಿಸುವಂತಹ ಕಾಯಕದಲ್ಲಿ ತೊಡಗಿದ್ದಾರೆ. ಇಲ್ಲಿಯವರೆಗೂ ಸರಿಸುಮಾರು 8 ಸಾವಿರಕ್ಕೂ ಅಧಿಕ ಗಿಡಗಳನ್ನು ನೆಟ್ಟು ‘ವೃಕ್ಷ ಮಾತೆ’ ಎಂದು ಪ್ರಖ್ಯಾತಿ ಗಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:46 am, Wed, 27 September 23

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ