AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಸು ನಿಗಮವನ್ನೂ ಬಿಟ್ಟಿಲ್ಲ! ಹಾಸನ ಜಿಲ್ಲೆಯಲ್ಲೂ ಕಾಂಗ್ರೆಸ್ ಸರ್ಕಾರದ ಅಕ್ರಮ ಬೆಳಕಿಗೆ? ರಾತ್ರೋ ರಾತ್ರಿ ಕಡತಗಳಿಗೆ ಬೆಂಕಿ!

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಒಂದಲ್ಲಾ ಒಂದು ಹಗರಣಗಳು ಸದ್ದು ಮಾಡುತ್ತಲೇ ಇವೆ. ವಾಲ್ಮೀಕಿ ನಿಗಮ ಹಗರಣ, ಮುಡಾ ಅಕ್ರಮ ಇಡೀ ರಾಜ್ಯಕ್ಕೆ ಕಪ್ಪು ಚುಕ್ಕಿಯಾದರೆ, ಬಾಗಲಕೋಟೆಯಲ್ಲಿ ನಡೆದ ಪ್ರವಾಸೋದ್ಯಮ ಇಲಾಖೆ, ಕಾರ್ಮಿಕ ಇಲಾಖೆಯ ಅಕ್ರಮಗಳು ಚರ್ಚೆಗೆ ಗ್ರಾಸವಾಗಿದ್ದವು. ಇದೀಗ ಮತ್ತೊಂದು ಹಗರಣ ಬಯಲಾಗಿದ್ದು ಕಡಿತ ನಾಶಪಡಿಸಿರುವ ಸಂಬಂಧ ಹಾಸನ ಡಿಸಿಗೆ ದೂರು ಸಲ್ಲಿಸಲಾಗಿದೆ.

ಅರಸು ನಿಗಮವನ್ನೂ ಬಿಟ್ಟಿಲ್ಲ! ಹಾಸನ ಜಿಲ್ಲೆಯಲ್ಲೂ ಕಾಂಗ್ರೆಸ್ ಸರ್ಕಾರದ ಅಕ್ರಮ ಬೆಳಕಿಗೆ? ರಾತ್ರೋ ರಾತ್ರಿ ಕಡತಗಳಿಗೆ ಬೆಂಕಿ!
ರಾತ್ರೋ ರಾತ್ರಿ ಕಡತಗಳಿಗೆ ಬೆಂಕಿ!
ಮಂಜುನಾಥ ಕೆಬಿ
| Updated By: ಆಯೇಷಾ ಬಾನು|

Updated on: Jul 23, 2024 | 11:41 AM

Share

ಹಾಸನ, ಜುಲೈ. 23: ಕಾಂಗ್ರೆಸ್ ಸರ್ಕಾರ (Congress Government) ಬಂದು 14 ತಿಂಗಳಷ್ಟೇ ಪೂರೈಸಿದೆ. ಈಗಾಗಲೇ ದೇಶ, ರಾಜ ಮಟ್ಟದಲ್ಲಿ ಚರ್ಚೆ ಆಗುವಂತೆ ಹಗರಣಗಳ ಮೇಲೆ ಹಗರಣಗಳು ಬಯಲಾಗುತ್ತಿವೆ. ವಾಲ್ಮೀಕಿ ನಿಗಮ ಹಗರಣ, ಮುಡಾ ಅಕ್ರಮ ರಾಜ್ಯ ಮಟ್ಟದಲ್ಲಿ ಚರ್ಚೆಯಾದರೆ ಪ್ರವಾಸೋದ್ಯಮ ಇಲಾಖೆಯಲ್ಲಿ ಹಣ ಅಕ್ರಮ ವರ್ಗಾವಣೆ, ಕಾರ್ಮಿಕ ಇಲಾಖೆಯಲ್ಲಿ ಹಣ ಲೂಟಿ ಅಕ್ರಮಗಳು ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಇದೀಗ ಮತ್ತೊಂದು ಜಿಲ್ಲೆಯ ಅಕ್ರಮ ಬಯಲಾಗಿದೆ. ಹಾಸನದ (Hassan) ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಲ್ಲಿ ಭಾರಿ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ.

ಹಾಸನದ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎನ್ನಲಾಗುತ್ತಿದೆ. ಸರ್ಕಾರದ ಅನುಮತಿ ಇಲ್ಲದೆ, ಖಾಸಗಿ ಜಾಗದಲ್ಲಿ ರಾತ್ರೋ ರಾತ್ರಿ ಕಡತ ನಾಶ ಮಾಡಿರುವ ಆರೋಪ ದೇವರಾಜ ಅರಸು ನಿಗಮದ ಜಿಲ್ಲಾ ವ್ಯವಸ್ಥಾಪಕ ನಾಗೇಂದ್ರ ವಿರುದ್ದ ಕೇಳಿ ಬಂದಿದೆ. ದೇವರಾಜ ಅರಸು ನಿಗಮದ್ದು ಎಂದು ಹೇಳಲಾದ ದಾಖಲೆಗಳನ್ನು ಸುಡುತ್ತಿರುವ ವಿಡಿಯೋಗಳ ಸಮೇತ ಹಾಸನ ಜಿಲ್ಲಾಧಿಕಾರಿಗೆ ಗ್ರಾ.ಪಂ. ಸದಸ್ಯ, ಜೆಡಿಎಸ್ ಮುಖಂಡ ದೂರು ನೀಡಿದ್ದಾರೆ. ಈ ಮೂಲಕ ಈ ಅಕ್ರಮ ಬಯಲಾಗಿದೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಮತ್ತೊಂದು ಅಕ್ರಮ ಬಹಿರಂಗ; ಕಾರ್ಮಿಕ ಇಲಾಖೆ ಗುತ್ತಿಗೆ ನೌಕರನ ವಿರುದ್ಧ 2 ಕೋಟಿ ಹಣ ದುರ್ಬಳಕೆ ಆರೋಪ

ಕೆಲ ಮದ್ಯವರ್ತಿಗಳ ಜೊತೆ ಸೇರಿ ಸರ್ಕಾರಿ ಯೋಜನೆ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಕುರುವಂಕ ಗ್ರಾ.ಪಂ. ಸದಸ್ಯ ಬೈರಗೊಂಡನಹಳ್ಳಿಯ ಉಮೇಶ್ ಅವರು ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ನಿಗಮಗಳ ಅಕ್ರಮ ಸರಣಿಯಾಗಿ ಹೊರ ಬರುತ್ತಿರುವ ಹಿನ್ನೆಲೆ ರಾತ್ರೋ ರಾತ್ರಿ ಕಡತ ನಾಶ ಮಾಡಲಾಗಿದೆ ಎಂದು ಉಮೇಶ್ ಅವರು ಡಿಸಿಗೆ ದೂರು ಸಲ್ಲಿಸಿದ್ದಾರೆ.

ಜುಲೈ 7 ರಿಂದ 10ರ ಅವಧಿಯಲ್ಲಿ ಅರಸೀಕೆರೆ ತಾಲೂಕಿನಲ್ಲಿ ಹಬ್ಬನಘಟ್ಟ ಗ್ರಾಮದ ಖಾಸಗಿ ಜಾಗದಲ್ಲಿ ಕಡತಗಳನ್ನು ಸುಟ್ಟು ನಾಶ ಮಾಡಲಾಗಿದೆ ಎಂದು ಉಮೇಶ್ ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ನಡೆಸಲು ನಿನ್ನೆ ಡಿಸಿಗೆ ದೂರು ನೀಡಿದ್ದು ಇದೀಗ ಮತ್ತೊಂದು ಹಗರಣ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೆಳಕಿಗೆ ಬಂದಿದೆ. ಇದು ಯಾವ ತಿರುವು ಪಡೆದುಕೊಳ್ಳುತ್ತೆ ಎಂದು ಕಾದು ನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್