AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಎಲ್​​ಸಿ ಸೂರಜ್ ರೇವಣ್ಣ ಬಂಧನ

ಅಸಹಜ ಲೈಂಗಿಕ ದೌರ್ಜನ್ಯ ಎಂದು ನನ್ನ ಮೇಲೆ ಸುಳ್ಳು ದೂರು ದಾಖಲಾಗಿದೆ. ಮತ್ತು ಬ್ಲ್ಯಾಕ್​ಮೇಲ್​ ಮಾಡಲಾಗುತ್ತಿದೆ ಎಂದು ಸೂರಜ್​ ರೇವಣ್ಣ ಅವರು ದೂರು ನೀಡುಲು ಹಾಸನದ ಸೆನ್​ ಠಾಣೆಗೆ ಹೋಗಿದ್ದರು. ಈ ವೇಳೆ ಪೊಲೀಸರು ಸೂರಜ್​ ರೇವಣ್ಣ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದರು. ಇದೀಗ ಬಂಧಿಸಿದ್ದಾರೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಎಲ್​​ಸಿ ಸೂರಜ್ ರೇವಣ್ಣ ಬಂಧನ
ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ
ವಿವೇಕ ಬಿರಾದಾರ
|

Updated on:Jun 23, 2024 | 8:50 AM

Share

ಹಾಸನ, ಜೂನ್​ 23: ಅಸಹಜ ಲೈಂಗಿಕ ದೌರ್ಜನ್ಯ (Sexual assault) ಆರೋಪದಲ್ಲಿ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಸಹೋದರ, ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ (Suraj Revanna) ಅವರನ್ನು ಹಾಸನದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶನಿವಾರ ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತ ಪೊಲೀಸ್​ ಠಾಣೆಯಲ್ಲಿ ಸೆಕ್ಷನ್​​ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಡಿಜಿಪಿ ಕಚೇರಿಯಲ್ಲಿ ದೂರು ನೀಡಿದ್ದ ಸಂತ್ರಸ್ತ ಹಾಸನ ಎಸ್ಪಿಗೂ ದೂರಿನ ಪ್ರತಿಯನ್ನು ಮೇಲ್ ಮಾಡಿದ್ದರು.

ಸೂರಜ್​ ರೇವಣ್ಣ ಅವರು ತಮ್ಮ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಅರಕಲಗೂಡು ಮೂಲದ ಜೆಡಿಎಸ್​​ ಕಾರ್ಯಕರ್ತರೊಬ್ಬರು ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಸೂರಜ್​ ವಿರುದ್ಧ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರೇವಣ್ಣ ಕುಟುಂಬಕ್ಕೆ ಮುಂದುವರಿದ ಕಂಟಕ: ಈಗೆಲ್ಲಿದ್ದಾರೆ ಹೆಚ್​ಡಿ ರೇವಣ್ಣ, ಭವಾನಿ?

ದೂರುದಾರ ತಮ್ಮನ್ನು ಬ್ಲ್ಯಾಕ್​ ಮೇಲ್​ ಮಾಡಿದ್ದಾನೆ ಎಂದು ಆರೋಪಿಸಿ ದೂರು ನೀಡಲು ರವಿವಾರ ಸೂರಜ್​ ರೇವಣ್ಣ ಹಾಸನದ ಸೆನ್​ ಪೊಲೀಸ್​ ಠಾಣೆಗೆ ಆಗಮಿಸಿದ್ದರು. ಈ ವೇಳೆ ಪೊಲೀಸರು ಸೂರಜ್​ ರೇವಣ್ಣ ಅವರನ್ನು  ಮುಂಜಾನೆ 4 ಗಂಟೆಯವರೆಗೆ ಸೂರಜ್​ ವಿಚಾರಣೆ ನಡೆಸಿದರು. ವಿಚಾರಣೆ ಬಳಿಕ ಸೂರಜ್ ರೇವಣ್ಣನನ್ನು ಬಂಧಿಸಿದರು. ವಿಚಾರಣೆಗಾಗಿ ಸರ್ಕಾರ  ಸಕಲೇಶಪುರ ಡಿವೈಎಸ್​ಪಿ ನೇಮಿಸಿದ್ದಾರೆ. ವಿಚಾರಣೆ ಬಳಿಕ ಸೂರಜ್ ರೇವಣ್ಣ ಅವರನ್ನು ತನಿಖಾಧಿಕಾರಿ ಪ್ರಮೋದ್ ಕುಮಾರ್ ಬಂಧಿಸಿದ್ದಾರೆ.

ಏನಿದು ಪ್ರಕರಣ

ಜೆಡಿಎಸ್ ಕಾರ್ಯಕರ್ತರಾಗಿದ್ದ ದೂರುದಾರ, ಡಾ.ಸೂರಜ್ ರೇವಣ್ಣಗೆ ಪರಿಚಿತರು. ನೌಕರಿ ಕೊಡಿಸುವಂತೆ ಕೋರಿ ಜೂ.16 ರಂದು ಸೂರಜ್ ರೇವಣ್ಣ ಅವರ ಗನ್ನಿಕಡ ಫಾರಂಹೌಸ್‌ಗೆ ತೆರಳಿದ್ದ ವೇಳೆ ತಮ್ಮ ಮೇಲೆ ಸೂರಜ್ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಈ ಮಧ್ಯೆ, ಸೂರಜ್ ರೇವಣ್ಣ ಅವರ ಆಪ್ತ ಹನುಮನಹಳ್ಳಿಯ ಶಿವಕುಮಾರ್ ಎಂಬುವರು ದೂರುದಾರನೇ ವಿರುದ್ಧವೇ ಹೊಳೆನರಸೀಪುರ ಠಾಣೆಯಲ್ಲಿ ಶುಕ್ರವಾರ ಪ್ರತಿದೂರುದಾಖಲಿಸಿದ್ದಾರೆ. ದೂರುದಾರ ಜೂ.16ರಂದು ತಮ್ಮ ನಾಯಕ (ಸೂರಜ್)ರ ಬಳಿ ಕೆಲಸ ಕೇಳಲು ಬಂದಿದ್ದರು. ಬಳಿಕ, ನಿಮ್ಮ ನಾಯಕರಿಂದ ಕೆಲಸ ಕೊಡಿಸಲು ಸಾಧ್ಯವಿಲ್ಲ. ನನಗೆ ತುಂಬಾ ಕಷ್ಟವಿದೆ ಎಂದು ಹೇಳಿ 5 ಕೋಟಿ ರು. ಗಾಗಿ ಬೇಡಿಕೆ ಇಟ್ಟಿದ್ದರು. ಹಣ ನೀಡದಿದ್ದರೆ ಶಾಸಕರ ವಿರುದ್ಧ ಅನೈಸರ್ಗಿಕ ಲೈಂಗಿಕ ದೌರ್ಜನ್ಯದ ಕೇಸು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಖುದ್ದು ಸೂರಜ್ ಅವರೇ ಶನಿವಾರ ಸಂಜೆ ಹಾಸನ ಪೊಲೀಸ್ ಠಾಣೆಗೆ ಬಂದು ದೂರು ದಾರನ ವಿರುದ್ಧ ಪ್ರತಿದೂರು ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:21 am, Sun, 23 June 24

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ