AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು – ಮಂಗಳೂರು ವಾಹನ ಸವಾರರಿಗೆ ಗುಡ್ ನ್ಯೂಸ್: ಶಿರಾಡಿ ಘಾಟ್ ರಸ್ತೆ ಕಾಮಗಾರಿ ಬಗ್ಗೆ ಬಿಗ್ ಅಪ್​ಡೇಟ್

ಬೆಂಗಳೂರು-ಮಂಗಳೂರು ಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಮಾರ್ಗದ ಕಾಮಗಾರಿ ದಶಕಗಳ ನಂತರ ಕಡೆಗೂ ಬಹುತೇಕ ಪೂರ್ಣಗೊಂಡಿದೆ. ಇದರಿಂದ ಮಳೆಗಾಲದಲ್ಲಿ ಸಂಚಾರ ಸ್ಥಗಿತಗೊಳ್ಳುವ ಆತಂಕ ದೂರವಾಗಿದ್ದು, ಪ್ರಯಾಣದ ಸಮಯ ಕೂಡ ಗಣನೀಯವಾಗಿ ಇಳಿಕೆಯಾಗಲಿದೆ. ಪ್ರತಿ ವರ್ಷ ಈ ಭಾಗದಲ್ಲಿ ರಸ್ತೆ ಕಾಮಗಾರಿಯ ಕಿರಿಕಿರಿಯಿಂದ ಸಂಚಾರ ದುಸ್ತರವಾಗುತ್ತಿತ್ತು.

ಬೆಂಗಳೂರು - ಮಂಗಳೂರು ವಾಹನ ಸವಾರರಿಗೆ ಗುಡ್ ನ್ಯೂಸ್: ಶಿರಾಡಿ ಘಾಟ್ ರಸ್ತೆ ಕಾಮಗಾರಿ ಬಗ್ಗೆ ಬಿಗ್ ಅಪ್​ಡೇಟ್
ಶಿರಾಡಿ ಘಾಟ್ ರಸ್ತೆ ಕಾಮಗಾರಿImage Credit source: tv9
ಮಂಜುನಾಥ ಕೆಬಿ
| Edited By: |

Updated on: May 18, 2026 | 11:16 AM

Share

ಹಾಸನ, ಮೇ 18: ಕರ್ನಾಟಕ ರಾಜಧಾನಿ ಬೆಂಗಳೂರು (Bengaluru) ಮತ್ತು ಪ್ರಮುಖ ಬಂದರು ನಗರಿ ಮಂಗಳೂರನ್ನು (Mangaluru) ಸಂಪರ್ಕಿಸುವ ಅತ್ಯಂತ ಮಹತ್ವದ ರಾಷ್ಟ್ರೀಯ ಹೆದ್ದಾರಿ 75ರ (NH 75) ಶಿರಾಡಿ ಘಾಟ್ (Shiradi Ghat) ಮಾರ್ಗದ ದಶಕಗಳ ದುರವಸ್ಥೆಗೆ ಕಡೆಗೂ ಮುಕ್ತಿ ಸಿಗುವ ಕಾಲ ಹತ್ತಿರವಾಗಿದೆ. ಪ್ರತೀ ವರ್ಷ ಮಳೆಗಾಲದಲ್ಲಿ ಸಂಚಾರ ಬಂದ್ ಆಗಿ ಪ್ರಯಾಣಿಕರು ಮತ್ತು ಸರಕು ಸಾಗಣೆದಾರರು ಅನುಭವಿಸುತ್ತಿದ್ದ ನರಕಯಾತನೆಗೆ ಬ್ರೇಕ್ ಬೀಳುವ ಲಕ್ಷಣಗಳು ಕಾಣುತ್ತಿವೆ. ಮಳೆಗಾಲ ಪ್ರಾರಂಭವಾಗಲು ಕೆಲವೇ ದಿನಗಳು ಬಾಕಿ ಇರುವಂತೆ, ಬಹುಕಾಲದಿಂದ ನನೆಗುದಿಗೆ ಬಿದ್ದಿದ್ದ ಹೆದ್ದಾರಿ ಚತುಷ್ಪತ ಕಾಮಗಾರಿ ಬಹುತೇಕ ಮುಗಿದಿದ್ದು, ವಾಹನ ಸವಾರರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಮುಖ್ಯಾಂಶಗಳು

  • ಕಳೆದ ಹತ್ತು ವರ್ಷಗಳಿಂದ ಅರ್ಧಕ್ಕೆ ನಿಂತಿದ್ದ ಕಾಮಗಾರಿ.
  • ಸಕಲೇಶಪುರದ ಮಾರನಹಳ್ಳಿವರೆಗಿನ 45 ಕಿಲೋಮೀಟರ್ ಚತುಷ್ಪತ ರಸ್ತೆ ನಿರ್ಮಾಣ ಬಹುತೇಕ ಪೂರ್ಣ
  • ಗುಡ್ಡ ಕುಸಿದ ಸ್ಥಳಗಳಲ್ಲಿ ತಡೆಗೋಡೆ ಹಾಗೂ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ಅನಾಹುತಗಳನ್ನು ತಡೆಯುವ ವ್ಯವಸ್ಥೆ.

ಪ್ರಯಾಣದ ಸಮಯ ಶೇ 50ರಷ್ಟು ಇಳಿಕೆ

ಹಿಂದೆಲ್ಲಾ ಹಾಸನದಿಂದ ಮಾರನಹಳ್ಳಿ ತಲುಪಲು ಐದಾರು ಗಂಟೆಗಳ ಕಾಲ ಹಿಡಿಯುತ್ತಿದ್ದ ಪ್ರಯಾಣ, ಈಗ ಉತ್ತಮ ರಸ್ತೆಯಿಂದಾಗಿ ಕೇವಲ ಎರಡು-ಮೂರು ಗಂಟೆಗಳಿಗೆ ಇಳಿಕೆಯಾಗಿದ್ದು, ಆರ್ಥಿಕತೆಗೂ ಭಾರಿ ಬೂಸ್ಟ್ ಸಿಗಲಿದೆ.

ಆರ್ಥಿಕತೆ ಮತ್ತು ಪ್ರವಾಸೋದ್ಯಮಕ್ಕೆ ಭಾರಿ ಅನುಕೂಲ

ಮಂಗಳೂರು ಬಂದರಿನಿಂದ ಪೆಟ್ರೋಲಿಯಂ ಉತ್ಪನ್ನಗಳು ಮತ್ತು ವಾಣಿಜ್ಯ ಸರಕುಗಳ ಸಾಗಣೆಗೆ ಶಿರಾಡಿ ಘಾಟ್ ಪ್ರಮುಖ ಮಾರ್ಗವಾಗಿದೆ. ಈ ಕಾಮಗಾರಿ ಪೂರ್ಣಗೊಂಡಿರುವುದು ಕೇವಲ ಸರಕು ಸಾಗಣೆಗೆ ಮಾತ್ರವಲ್ಲದೆ, ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರಗಳಿಗೆ ಮತ್ತು ಪ್ರವಾಸಿ ತಾಣಗಳಿಗೆ ಲಕ್ಷಾಂತರ ಜನರು ಸುಗಮವಾಗಿ ಸಂಚರಿಸಲು ಅನುವು ಮಾಡಿಕೊಡಲಿದೆ. ಹಾಸನ ಮತ್ತು ಸಕಲೇಶಪುರ ಭಾಗದ ಪ್ರವಾಸೋದ್ಯಮಕ್ಕೂ ಇದು ದೊಡ್ಡ ಕೊಡುಗೆ ನೀಡಲಿದೆ.

ದೋಣಿಗಲ್, ದೊಡ್ಡತಪ್ಲು ಬಳಿ ಗುಡ್ಡ ಕುಸಿದರೆ ಪರ್ಯಾಯ ವ್ಯವಸ್ಥೆ

Shiradi Ghat Road Work Almost Ends

ಭೂಕುಸಿತದ ವೇಳೆ ರಸ್ತೆಗೆ ಹಾನಿಯಾಗದಂತೆ ತಡೆಗೋಡೆಗಳ ನಿರ್ಮಾಣ ಮಾಡುತ್ತಿರುವುದು

ನಿರಂತರ ಭೂಕುಸಿತದ ಭೀತಿಯಿಂದಾಗಿ ರಾತ್ರಿಯಿಡೀ ನರಳಬೇಕಾದ ಅನಿವಾರ್ಯತೆ ಇನ್ನು ತಪ್ಪಲಿದೆ ಎಂದು ವಾಹನ ಚಾಲಕರು ನೆಮ್ಮದಿ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷಗಳಲ್ಲಿ ಸಂಭವಿಸಿದ ಭೀಕರ ಭೂಕುಸಿತದ ಸ್ಥಳಗಳಲ್ಲಿ, ವಿಶೇಷವಾಗಿ ದೋಣಿಗಲ್ ಮತ್ತು ದೊಡ್ಡತಪ್ಲು ಬಳಿ, ಈಗ ಚತುಷ್ಪತ ರಸ್ತೆ ನಿರ್ಮಿಸಲಾಗಿದ್ದು, ಅನಿವಾರ್ಯ ಸಂದರ್ಭದಲ್ಲಿ ಒಂದು ಮಾರ್ಗದಲ್ಲಾದರೂ ಸಂಚಾರಕ್ಕೆ ಅವಕಾಶ ನೀಡುವ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಹಾಸನ: ಟೈರ್ ಸ್ಫೋಟಗೊಂಡು ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್, 36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು!

ವೈದ್ಯಕೀಯ ತುರ್ತು ಸಂದರ್ಭಗಳಿಗೂ ಇದು ದೊಡ್ಡ ಅನುಕೂಲವಾಗಿದೆ. ದಶಕಗಳ ಕನಸು ನನಸಾಗುತ್ತಿರುವ ಖುಷಿ ಒಂದೆಡೆಯಾದರೆ, ಮುಂಬರುವ ಭೀಕರ ಮಳೆಗಾಲದ ಪರೀಕ್ಷೆಯಲ್ಲಿ ಈ ಕಾಮಗಾರಿಯ ಗುಣಮಟ್ಟ ಮತ್ತು ಸುಸ್ಥಿರತೆ ಸಾಬೀತಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Manjunath KB
Manjunath KB