AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ತಂದೆಗೆ, ಮಧ್ಯಾಹ್ನ ಮಗನಿಗೆ, ಸಂಜೆ ಸೊಸೆಗೆ ನಮಸ್ಕಾರ ಮಾಡಬೇಕು: ದೇವೇಗೌಡ ಕುಟುಂಬ ರಾಜಕಾರಣ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ

ಬೆಳಗ್ಗೆ ತಂದೆಗೆ ನಮಸ್ಕಾರ, ಮಧ್ಯಾಹ್ನ ಮಗನಿಗೆ ನಮಸ್ಕಾರ, ಸಂಜೆ ಸೊಸೆಗೆ ಸಮಸ್ಕಾರ ಮಾಡಬೇಕು, ಇದಕ್ಕೆ ಬೇಸತ್ತು ಪ್ರಧಾನಿ ನರೇಂದ್ರ ಮೋದಿ ಆಡಳಿತ ಮೆಚ್ಚಿ ಅವರು ಬಿಜೆಪಿಗೆ ಬಂದರು ಎಂದು ಹೆಚ್​ಡಿಡಿ ಕುಟುಂಬದ ವಿರುದ್ಧ ಸಚಿವೆ ಶೋಭಾ ವಾಗ್ದಾಳಿ ನಡೆಸಿದ್ದಾರೆ.

ಬೆಳಗ್ಗೆ ತಂದೆಗೆ, ಮಧ್ಯಾಹ್ನ ಮಗನಿಗೆ, ಸಂಜೆ ಸೊಸೆಗೆ ನಮಸ್ಕಾರ ಮಾಡಬೇಕು: ದೇವೇಗೌಡ ಕುಟುಂಬ ರಾಜಕಾರಣ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ
ಶೋಭಾ ಕರಂದ್ಲಾಜೆ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on:Nov 21, 2021 | 7:58 PM

Share

ಹಾಸನ: ಈ ಜಿಲ್ಲೆಯಲ್ಲೂ ಪ್ರಜಾತಂತ್ರ ವ್ಯವಸ್ಥೆ ಜಾರಿಯಾಗಬೇಕು. ಹಾಸನ ಜನ ಬುದ್ಧಿವಂತರು, ಕೃಷಿಕರು, ಒಳ್ಳೆ ನಾಯಕರ ಜಿಲ್ಲೆ. ಆದರೆ ನಿರಂತರವಾಗಿ ಕುಟುಂಬಕ್ಕೆ ಯಾಕೆ ಶರಣಾಗುತ್ತೀರಿ? ಒಂದು ಕುಟುಂಬಕ್ಕೆ ಯಾಕೆ ಶರಣಾಗ್ತಿದ್ದೀರಿ ಅರ್ಥವಾಗುತ್ತಿಲ್ಲ. ವಿಧಾನಸಭೆಗೆ ಹೆಚ್.ಡಿ.ರೇವಣ್ಣ, ಸಂಸತ್​​ಗೆ ಪ್ರಜ್ವಲ್ ಸಾಕಿತ್ತು. ಆದರೆ ಇನ್ನೂ ಎಷ್ಟು ಜನರನ್ನು ನೀವು ಗೆಲ್ಲಿಸುತ್ತೀರಾ ಹೇಳಿ? ಎಂದು ಹಾಸನದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಂದು (ನವೆಂಬರ್ 21) ಹೇಳಿಕೆ ನೀಡಿದ್ದಾರೆ.

ಪ್ರಜಾತಂತ್ರ ವ್ಯವಸ್ಥೆ ಅಣಕಿಸುವಂತೆ ರಾಜಕೀಯ ಮಾಡ್ತಿದ್ದಾರೆ. ಹೆಂಡ ಮಾರುವವರನ್ನು ಕರೆತರುವ ಪ್ರಯತ್ನ ಮಾಡುತ್ತಿದೆ. ಆದರೆ ನಾವು ಒಳ್ಳೆಯ ಅಭ್ಯರ್ಥಿಯನ್ನ ತಂದು ನಿಲ್ಲಿಸಿದ್ದೇವೆ. ಕೆ. ಗೋಪಾಲಯ್ಯನವರು ಜೆಡಿಎಸ್ ಪಕ್ಷ ತೊರೆದು ಬಂದರು. ಬೆಳಗ್ಗೆ ತಂದೆಗೆ ನಮಸ್ಕಾರ, ಮಧ್ಯಾಹ್ನ ಮಗನಿಗೆ ನಮಸ್ಕಾರ, ಸಂಜೆ ಸೊಸೆಗೆ ಸಮಸ್ಕಾರ ಮಾಡಬೇಕು, ಇದಕ್ಕೆ ಬೇಸತ್ತು ಪ್ರಧಾನಿ ನರೇಂದ್ರ ಮೋದಿ ಆಡಳಿತ ಮೆಚ್ಚಿ ಅವರು ಬಿಜೆಪಿಗೆ ಬಂದರು ಎಂದು ಹೆಚ್​ಡಿಡಿ ಕುಟುಂಬದ ವಿರುದ್ಧ ಸಚಿವೆ ಶೋಭಾ ವಾಗ್ದಾಳಿ ನಡೆಸಿದ್ದಾರೆ.

ದೇವೇಗೌಡ ಕುಟುಂಬದಲ್ಲಿ ರಾಜಕಾರಣಕ್ಕೆ ಬರದಿರೋದು ಯಾರು? ಹೆಚ್.ಡಿ ದೇವೇಗೌಡ ಕುಟುಂಬದಲ್ಲಿ ಎಷ್ಟು ಜನ ರಾಜಕೀಯದಲ್ಲಿದ್ದಾರೆ ಗೊತ್ತಾ? ದೇವೇಗೌಡ ಕುಟುಂಬದಲ್ಲಿ ರಾಜಕಾರಣಕ್ಕೆ ಬರದಿರೋದು ಯಾರು? ದೇವೇಗೌಡ, ಕುಮಾರಸ್ವಾಮಿ, ರೇವಣ್ಣ, ಭವಾನಿ, ನಿಖಿಲ್, ಪ್ರಜ್ವಲ್, ಅನಿತಾ ಇವರನ್ನ ಬಿಟ್ಟರೆ ಬೇರೆ ಯಾರಿದ್ದಾರೆ? ಎಂದು ಹಾಸನದಲ್ಲಿ ಜೆಡಿಎಸ್​ ವಿರುದ್ಧ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ದೇವೇಗೌಡರನ್ನು ಚುನಾವಣೆಯಲ್ಲಿ ನಾವು ಸೋಲಿಸಿದ್ವಾ? ಮಂಡ್ಯ ಎಂಪಿ ಚುನಾವಣೆಯಲ್ಲಿ ನಿಖಿಲ್ ಸೋಲಿಸಿಲ್ಲವೆ? 8 ಜನ ರಾಜಕೀಯದಲ್ಲಿರುವ ಕುಟುಂಬ ಬೇರೆ ಯಾವುದಿದೆ? ಒಂದೇ ಕುಟುಂಬದ 8 ಜನ ರಾಜಕಾರಣ ಮಾಡಬಾರದು. ಅದನ್ನು ಈ ಚುನಾವಣೆ ಮೂಲಕ ನಿರ್ಧಾರ ಮಾಡಬೇಕು ಎಂದು ದೇವೇಗೌಡ ಕುಟುಂಬದ ವಿರುದ್ಧ ಸಚಿವ ಈಶ್ವರಪ್ಪ ಹರಿಹಾಯ್ದಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್​ ನಮಗೆ 2 ಕಣ್ಣುಗಳಿದ್ದಂತೆ: ಜಿ ಪರಮೇಶ್ವರ್ ಹೇಳಿಕೆ

ಇದನ್ನೂ ಓದಿ: ಶಂಖನಾದವನ್ನು 15 ದಿನ ಮುಂದೂಡಿ, ಜನರ ನೆರವಿಗೆ ಬನ್ನಿ: ಬಿಜೆಪಿ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಟೀಕೆ

Published On - 7:42 pm, Sun, 21 November 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ