AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಯು ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್, ತಪ್ಪಿದ ಭಾರಿ ಅನಾಹುತ: 24 ನವಜಾತ ಶಿಶುಗಳು ಬೇರೆಡೆಗೆ ಶಿಫ್ಟ್

ಹಾಸನ: ನಗರದ ವೈದ್ಯಕೀಯ ಬೋದಕ ಆಸ್ಪತ್ರೆಯ ನವಜಾತ ಶಿಶುಗಳ ಐಸಿಯು ವಾರ್ಡ್‌ನಲ್ಲಿ ಶಾರ್ಟ್​​ ಸರ್ಕ್ಯೂಟ್ ಸಂಭವಿಸಿದ್ದು, ಭಾರಿ ಅನಾಹುತ ತಪ್ಪಿರುವಂತಹ ಘಟನೆ ನಗರದಲ್ಲಿ ನಡೆದಿದೆ. 24 ನವಜಾತ ಶಿಶುಗಳನ್ನು ಸಿಬ್ಬಂದಿಗಳು ಬೇರೆಡೆಗೆ ಶಿಫ್ಟ್ ಮಾಡಿದ್ದಾರೆ.

ಐಸಿಯು ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್, ತಪ್ಪಿದ ಭಾರಿ ಅನಾಹುತ: 24 ನವಜಾತ ಶಿಶುಗಳು ಬೇರೆಡೆಗೆ ಶಿಫ್ಟ್
ಶಾರ್ಟ್ ಸರ್ಕ್ಯೂಟ್
TV9 Web
| Edited By: |

Updated on:Jul 02, 2023 | 4:40 PM

Share

ಹಾಸನ: ನಗರದ ವೈದ್ಯಕೀಯ ಬೋದಕ ಆಸ್ಪತ್ರೆಯ ನವಜಾತ ಶಿಶುಗಳ ಐಸಿಯು ವಾರ್ಡ್‌ನಲ್ಲಿ ಶಾರ್ಟ್​​ ಸರ್ಕ್ಯೂಟ್ (Short circuit) ಸಂಭವಿಸಿದ್ದು, ಭಾರಿ ಅನಾಹುತ ತಪ್ಪಿರುವಂತಹ ಘಟನೆ ಹಾಸನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಐಸಿಯುನಲ್ಲಿ ನಡೆದಿದೆ. ಐಸಿಯುನ ಎಸಿಯ ವಿದ್ಯುತ್ ಪರಿವರ್ತಕ ಬ್ಲಾಸ್ಟ್​ ಆದ ಪರಿಣಾಮ ಅವಘಡ ಸಂಭವಿಸಿದೆ. ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಐಸಿಯುನಲ್ಲಿದ್ದ 24 ನವಜಾತ ಶಿಶುಗಳನ್ನು ಸಿಬ್ಬಂದಿಗಳು ಬೇರೆಡೆಗೆ ಶಿಫ್ಟ್ ಮಾಡಿದ್ದಾರೆ. ಆ ಮೂಲಕ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.

ಶಾರ್ಟ್​​ ಸರ್ಕ್ಯೂಟ್​​ನಿಂದ ಐಸಿಯು ಕೋಣೆಯೊಳೆಗೆ ಹೊಗೆ ತುಂಬಿಕೊಂಡಿದೆ. ಆಸ್ಪತ್ರೆಯ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಕಿಟಕಿ ಗಾಜುಗಳನ್ನು ಒಡೆದು‌ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಸ್ಥಳಕ್ಕೆ ಹಿಮ್ಸ್‌ನ ನಿರ್ದೇಶಕ ರವಿಕುಮಾರ್​ ಮತ್ತು ಜಿಲ್ಲಾ ಶಸ್ತ್ರ ಚಿಕಿತ್ಸಕ ಕೃಷ್ಣಮೂರ್ತಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಕೇಂದ್ರ ಸರ್ಕಾರ ಧಾರವಾಡ ಜಿಲ್ಲೆಗೆ 1400 ರೂ. ಅನುದಾನ ನೀಡಿದೆ: ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ

ಘಟನೆ ಕುರಿತಾಗಿ ಮಕ್ಕಳ ಐಸಿಯು ವಾರ್ಡ್​ ಮುಖ್ಯಸ್ಥ ಡಾ.ಕುಮಾರ್ ಮಾತನಾಡಿದ್ದು, ಐಸಿಯುನಲ್ಲಿದ್ದ 24 ನವಜಾತ ಶಿಶುಗಳು ಸುರಕ್ಷಿತವಾಗಿದ್ದಾರೆ. ಮಕ್ಕಳ ವಾರ್ಡ್​ನ ತುರ್ತು ನಿಗಾ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ನಿಗಾಘಟಕದಲ್ಲಿ ಹೊಗೆ ಬಂದಿದ್ದರಿಂದ ಪೋಷಕರು ಗಾಬರಿಯಾಗಿದ್ದರು. ಎಸಿ ವಿದ್ಯುತ್ ಪರಿವರ್ತಕದಲ್ಲಿ ಶಾರ್ಟ್​ ಸರ್ಕ್ಯೂಟ್​ನಿಂದ ಅವಘಡ ಸಂಭವಿಸಿತ್ತು. ಕೂಡಲೇ ಎಚ್ಚೆತ್ತು ಮಕ್ಕಳನ್ನು ಆಸ್ಪತ್ರೆ ಸಿಬ್ಬಂದಿ ಸ್ಥಳಾಂತರಿಸಿದ್ದಾರೆ ಎಂದು ಹೇಳಿದರು.

ಶಾರ್ಟ್ ಸರ್ಕ್ಯೂಟ್​ನಿಂದ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾಗಿದ ಗೃಹೋಪಯೋಗಿ ವಸ್ತುಗಳು 

ಕೋಲಾರ: ಶಾರ್ಟ್ ಸರ್ಕ್ಯೂಟ್​ನಿಂದ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಸಾವಿರಾರು ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ. ಕೋಲಾರದ ಗಾಂಧಿ ನಗರದಲ್ಲಿ ಘಟನೆ‌ ಕಂಡುಬಂದಿದ್ದು, ಆನಂದ ಎಂಬುವವರಿಗೆ ಸೇರಿದ ಮನೆಯಾಗಿದೆ. ಮೀಟರ್ ಬೋರ್ಡ್​ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿ ಎನ್ನಲಾಗಿದೆ. ಫ್ರಿಡ್ಜ್, ಟಿವಿ, ಪ್ಯಾನ್, ಬಲ್ಬ್​ಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಲ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇದನ್ನೂ ಓದಿ: Gruha Lakshmi Scheme: ಜುಲೈ 14ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ: ಸಚಿವ ಲಕ್ಷ್ಮೀ ಹೆಬ್ಬಾಳ್ಕರ್

ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥ

ರಾಯಚೂರು: ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವಂತಹ ಘಟನೆ ತಾಲೂಕಿನ ಅಪ್ಪನದೊಡ್ಡಿ ಸರ್ಕಾರಿ ಶಾಲೆಯಲ್ಲಿ ನಿನ್ನೆ ನಡೆದಿತ್ತು. ವೈದ್ಯರನ್ನು ಕರೆಸಿ ಶಾಲೆಯಲ್ಲೇ ಅಸ್ವಸ್ಥ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿತ್ತು. ಮಧ್ಯಾಹ್ನ ಬಿಸಿಯೂಟಕ್ಕೆ ಸಿಬ್ಬಂದಿಗಳು ಉಪ್ಪಿಟ್ಟು ಮಾಡಿದ್ದರು. ಬಳಿಕ ಅಡುಗೆ ಪಾತ್ರೆಯ ತಳಹದಿಯಲ್ಲಿ ಹಲ್ಲಿ ಪತ್ತೆಯಾಗಿತ್ತು. ಘಟನೆಗೆ ಸದ್ಯ ಇಬ್ಬರು ಅಡುಗೆ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪ ಕೇಳಿಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:03 pm, Sun, 2 July 23

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ