Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಹೇಮಾವತಿ ನದಿಯ ದಡದ ಬಂಡೆಯ ಮೇಲೆ ರಾಮನ ಪಾದದ ಗುರುತು ಗೋಚರ

ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀರಾಮಚಂದ್ರ ಇರುವಿಕೆಯ ಕುರುಹುಗಳು ದೇಶದ ವಿವಿಧ ಸ್ಥಳಗಳಲ್ಲಿ ಸಿಗುತ್ತವೆ. ಹಾಗೆಯೇ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕಾಗನೂರು ಸಮೀಪ ಶ್ರೀರಾಮಚಂದ್ರ ಸಂಚರಿಸಿದ್ದ ಪುರಾವೆಗಳು ಗೋಚರವಾಗಿವೆ.

ಹಾಸನ: ಹೇಮಾವತಿ ನದಿಯ ದಡದ ಬಂಡೆಯ ಮೇಲೆ ರಾಮನ ಪಾದದ ಗುರುತು ಗೋಚರ
ಶ್ರೀರಾಮನ ಪಾದ
Follow us
ಮಂಜುನಾಥ ಕೆಬಿ
| Updated By: ವಿವೇಕ ಬಿರಾದಾರ

Updated on:Dec 29, 2023 | 11:27 AM

ಹಾಸನ, ಡಿಸೆಂಬರ್​ 29: ಅಯೋಧ್ಯೆಯಲ್ಲಿ (Ayodhya) ಶ್ರೀ ರಾಮಮಂದಿರ (Shri ram) ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಜನವರಿ 22 ರಂದು ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ದೇವಸ್ಥಾನ ಗತವೈಭವದೊಂದಿಗೆ ಲೋಕಾರ್ಪಣೆಗೊಳ್ಳಲಿದೆ. ಇನ್ನು ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀರಾಮಚಂದ್ರ ಇರುವಿಕೆಯ ಕುರುಹುಗಳು ದೇಶದ ವಿವಿಧ ಸ್ಥಳಗಳಲ್ಲಿ ಸಿಗುತ್ತವೆ. ಹಾಗೆಯೇ ಹಾಸನ (Hassan) ಜಿಲ್ಲೆಯ ಆಲೂರು ತಾಲೂಕಿನ ಕಾಗನೂರು ಸಮೀಪ ಶ್ರೀರಾಮಚಂದ್ರ ಸಂಚರಿಸಿದ್ದ ಪುರಾವೆಗಳು ಗೋಚರವಾಗಿವೆ.

ಹೌದು ಕಾಗನೂರು ಸಮೀಪದ ಹೇಮಾವತಿ ನದಿಯ ದಡದಲ್ಲಿರುವ ಬೃಹದಾಕಾರದ ಬಂಡೆಯ ಮೇಲೆ ಶ್ರೀರಾಮದ ಪಾದದ ಗುರುತು ಪತ್ತೆಯಾಗಿದೆ. ಶ್ರೀರಾಮಚಂದ್ರನ ಪಾದುಕೆ ಮಾತ್ರವಲ್ಲದೇ ಆಂಜನೇಯ ಪಾದ ಹಾಗೂ ಶಿವಲಿಂಗ ಮೂರ್ತಿ ಕೂಡ ಗೋಚರವಾಗಿದೆ. ಈ ವಿಚಾರ ತಿಳಿದು ಸ್ಥಳಕ್ಕೆ ಬಂದ ಸಾರ್ವಜನಿಕರು ರಾಮನ ಪಾದದ ದರ್ಶನ ಪಡೆಯುತ್ತಿದ್ದಾರೆ. ಇನ್ನು ಶ್ರೀರಾಮನ ಪಾದ ಗೋಚರವಾದ ಸ್ಥಳದಿಂದ ಅರ್ದ ಕಿಲೋಮೀಟರ್ ದೂರದಲ್ಲಿ ಆಂಜನೇಯನ ದೇವಸ್ಥಾನವಿದೆ.

ನೀರಲ್ಲಿ ಮುಳುಗಿದ್ದ ಬಂಡೆ ಈಗ ಪ್ರತ್ಯಕ್ಷ

ಬೃಹದಾಕಾರದ ಬಂಡೆಯ ಮೇಲಿನ ರಾಮನ ಪಾದಗಳಿಗೆ ಶತಮಾನಗಳಿಂದಲೂ ಪೂಜೆ ಪುನಸ್ಕಾರ ನಡೆಯುತ್ತಿತ್ತು. ಆದರೆ 70 ರ ದಶಕದಲ್ಲಿ ಈ ಸ್ಥಳದಲ್ಲಿ ಜಲಾಶಯ ನಿರ್ಮಾಣ ಮಾಡಲಾಯಿತು. ಹೀಗಾಗಿ  ಈ ಬಂಡೆ ಮುಚ್ಚಿ ಹೋಗಿತ್ತು. ಈ ವರ್ಷ ಮಳೆ ಕಡಿಮೆ ಆದ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ನೀರು ಕಡಿಮೆಯಾಗಿ ಮತ್ತೆ ಬಂಡೆ ಗೋಚರಿಸಿದಾಗ ಶ್ರೀರಾಮನ ಪಾದಗಳು ಗೋಚರವಾಗಿವೆ. ಲಂಕಾಧೀಶ ರಾವಣನ ಸಂಹಾರದ ಬಳಿಕ ಬ್ರಹ್ಮ ಹತ್ಯೆ ದೋಷ ಪರಿಹಾರಕ್ಕಾಗಿ ಲೋಕ  ಸಂಚಾರದಲ್ಲಿದ್ದ ರಾಮ‌ ಲಕ್ಷ್ಮಣ ಸೀತೆಯರು ಪುಣ್ಯ ನದಿ ಹೇಮಾವತಿ ದಂಡೆಯಲ್ಲಿ ತಂಗಲು ತೀರ್ಮಾನಮಾನಿಸಿದರು.

ಇದನ್ನೂ ಓದಿ: ಅಯೋಧ್ಯೆಯ ಬಾಲರಾಮ ಮೂರ್ತಿ ಬಗ್ಗೆ ಇಂಟ್ರೆಸ್ಟಿಂಗ್ ಮಾಹಿತಿ ಬಿಚ್ಚಿಟ್ಟ ಮೈಸೂರಿನ ಹಿರಿಯ ಶಿಲ್ಪಿ

ಹೀಗಾಗಿ ಬಂಡೆಯ ಮೇಲೆ ಈಶ್ವರ ಪ್ರತಿಷ್ಠಾಪನೆ ಮಾಡಿ ಶ್ರೀರಾಮಚಂದ್ರ ಪೂಜೆ ಮಾಡುವ ವೇಳೆ ಈ ಸ್ಥಳದಲ್ಲಿ ವ್ಯಕ್ತಿಯೊಬ್ಬ ಹೆಂಡತಿಯನ್ನು ಹೆಗಲ ಮೇಲೆ ಹೊತ್ತು ತಾಯಿಯನ್ನು ಕೈಯಲ್ಲಿ ಹಿಡಿದು ನದಿ ದಾಟುವ ದೃಶ್ಯ ಕಂಡರು.  ಆಗ ಶ್ರೀರಾಮ ಇಲ್ಲಿ ನೆಲೆಸುವುದು ಬೇಡ ಅಂತ ಮುಂದೆ ಹೋದರಂತೆ. ಆಗ ರಾಮ ನಿಂತ, ನಡೆದಾಡಿದ ಸ್ಥಳಗಳಲ್ಲಿ ಪಾದಗಳು ಮೂಡಿವೆ ಎಂಬುವುದು ಜನರ ನಂಬಿಕೆ

ಈ ಸ್ಥಳದಿಂದ 500 ಮೀಟರ್ ದೂರದಲ್ಲಿ ಹನುಮನ ದೇವಾಲಯ ಇದ್ದು ಈ ಸ್ಥಳಕ್ಕೆ ವಿಶೇಷ ಮಹತ್ವ ಬಂದಿದೆ. ದಶಕಗಳ ಬಳಿಕ ಮತ್ತೆ ಕಾಣಿಸಿಕೊಂಡಿರುವ ಈ ಪುಣ್ಯ ಸ್ಥಳವನ್ನು ದೇವಾಲಯ ಮಾಡಿ ನಿತ್ಯ ಪೂಜೆಗೆ ಅವಕಾಶ ಮಾಡಿಕೊಡಬೇಕೆಂದು ಭಕ್ತರ ಆಗ್ರಹಿಸಿದ್ದಾರೆ. ಈ ಸ್ಥಳವನ್ನು ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿರುವ ಜನರು ಶೀಘ್ರವೇ ಈ ಬಗ್ಗೆ ಸರ್ಕಾರ ಕ್ರಮವಹಿಸಲಿ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:16 am, Fri, 29 December 23

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ