AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮೋತ್ಸವ ಮುಗಿಯುವವರೆಗೂ ಪಾದಯಾತ್ರೆ ಮಾಡಬಾರದು; ಡಿಕೆಶಿ ಬೆಂಬಲಿಗರಿಗೆ ಸಿದ್ದರಾಮಯ್ಯ ಬೆಂಬಲಿಗರಿಂದ ತಾಕೀತು

ಸಿದ್ದರಾಮೋತ್ಸವಕ್ಕೆ ಅಡ್ಡಿಪಡಿಸಲುಪಾದಯಾತ್ರೆ ಮಾಡುತ್ತಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ ಬೆಂಬಲಿಗರು, ಶ್ರೀಧರ್​ಗೌಡ ಸೇರಿದಂತೆ ಕೆಲವರಿಗೆ ಆವಾಜ್ ಹಾಕಿದ್ದಾರೆ.

ಸಿದ್ದರಾಮೋತ್ಸವ ಮುಗಿಯುವವರೆಗೂ ಪಾದಯಾತ್ರೆ ಮಾಡಬಾರದು; ಡಿಕೆಶಿ ಬೆಂಬಲಿಗರಿಗೆ ಸಿದ್ದರಾಮಯ್ಯ ಬೆಂಬಲಿಗರಿಂದ ತಾಕೀತು
ಸಿದ್ದರಾಮಯ್ಯ ಬೆಂಬಲಿಗರು ಪಾದಯಾತ್ರೆಯನ್ನು ತಡೆದರು
Follow us
TV9 Web
| Updated By: sandhya thejappa

Updated on: Jul 30, 2022 | 9:43 AM

ಹಾಸನ: ಮಾಜಿ ಸಿಎಂ ಸಿದ್ದರಾಮಯ್ಯನವರ (Siddaramaiah) ಹುಟ್ಟು ಹಬ್ಬದ ಹಿನ್ನೆಲೆ ಬೆಂಬಲಿಗರು ಅಮೃತ ಮಹೋತ್ಸವ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಸಿದ್ದರಾಮೋತ್ಸವ ಮುಗಿಯುವವರೆಗೆ ಪಾದಯಾತ್ರೆ ಮಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಬೆಂಬಲಿಗರಿಗೆ ಸಿದ್ದರಾಮಯ್ಯನವರ ಅಭಿಮಾನಿಗಳು ತಾಕೀತು ಮಾಡಿದ್ದಾರೆ. ನಿನ್ನೆ (ಜುಲೈ 29) ಡಿಕೆಶಿ ಬೆಂಬಲಿಗರು 75ನೇ ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಪಾದಯಾತ್ರೆ ನಡೆಸಿದ್ದರು. ಟಿಕೆಟ್ ಆಕಾಂಕ್ಷಿ ಆಗಿರುವ ಶ್ರೀಧರ್​ಗೌಡ ನೇತೃತ್ವದಲ್ಲಿ ಅರಕಲಗೂಡು ಕ್ಷೇತ್ರದ ಶ್ರವಣೂರಿನಿಂದ ಪಾದಯಾತ್ರೆ ಆರಂಭವಾಗಿತ್ತು. ದೊಡ್ಡಳ್ಳಿಗೆ ಪಾದಯಾತ್ರೆ ಬಂದಾಗ ಸಿದ್ದು ಅಭಿಮಾನಿಗಳು ಪಾದಯಾತ್ರೆಯನ್ನು ತಡೆದಿದ್ದಾರೆ.

ಸಿದ್ದರಾಮೋತ್ಸವಕ್ಕೆ ಅಡ್ಡಿಪಡಿಸಲುಪಾದಯಾತ್ರೆ ಮಾಡುತ್ತಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ ಬೆಂಬಲಿಗರು, ಶ್ರೀಧರ್​ಗೌಡ ಸೇರಿದಂತೆ ಕೆಲವರಿಗೆ ಆವಾಜ್ ಹಾಕಿದ್ದಾರೆ. ಕೂಡಲೆ ಪಾದಯಾತ್ರೆ ನಿಲ್ಲಿಸಿ ವಾಪಸ್ ತೆರಳಿ ಎಂದು ಸೂಚಿಸಿದರು. ಬಳಿಕ ಪಾದಯಾತ್ರೆ ನಿಲ್ಲಿಸಿ ಕಾಂಗ್ರೆಸ್ ಮುಖಂಡರು ವಾಪಸ್ ತೆರಳಿದರು.

ಇದನ್ನೂ ಓದಿ; ಮೈಸೂರು: ನಾಲೆಗೆ ಕಾರು ಉರುಳಿ ಬಿದ್ದು ವಕೀಲರು ನಾಪತ್ತೆ ಪ್ರಕರಣ; ವಕೀಲರಿಗಾಗಿ ಮುಂದುವರಿದ ಹುಡುಕಾಟ

ಇದನ್ನೂ ಓದಿ
Image
ಪ್ರವೀಣ್ ಹತ್ಯೆ ಪ್ರಕರಣ: ಸರ್ಕಾರದ ಒತ್ತಡಕ್ಕೆ ಮಣಿದು ಇಬ್ಬರನ್ನು ಬಂಧಿಸಿದ ಪೊಲೀಸರು? ಪೊಲೀಸರ ನಡೆ ಮೇಲೆ‌ ಬೆಟ್ಟದಷ್ಟು ಅನುಮಾನ
Image
Dinesh Karthik: ಇದು ಯಾವ ಶಾಟ್?: ಕಾರ್ತಿಕ್ ಬ್ಯಾಟಿಂಗ್ ಕಂಡು ತಲೆ ಕೆಡಿಸಿಕೊಂಡ ನೆಟ್ಟಿಗರು: ವಿಡಿಯೋ
Image
ಮೈಸೂರು: ನಾಲೆಗೆ ಕಾರು ಉರುಳಿ ಬಿದ್ದು ವಕೀಲರು ನಾಪತ್ತೆ ಪ್ರಕರಣ; ವಕೀಲರಿಗಾಗಿ ಮುಂದುವರಿದ ಹುಡುಕಾಟ
Image
Ola-Uber: ಪ್ರಮುಖ ಕ್ಯಾಬ್ ಸೇವೆಯಾದ ಓಲಾ ಜೊತೆ ವಿಲೀನವಾಗುತ್ತಾ ಉಬರ್?; ಇಲ್ಲಿದೆ ಉತ್ತರ

ಇಡಿ ಕೋರ್ಟ್​ಗೆ ಹಾಜರಾಗಲಿರುವ ಡಿಕೆ‌ ಶಿವಕುಮಾರ್: ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಕೆ ಆಗಿರುವ ಹಿನ್ನೆಲೆ ಇಂದು ಡಿಕೆ‌ ಶಿವಕುಮಾರ್ ದೆಹಲಿಯ ಇಡಿ ಕೋರ್ಟ್​ಗೆ ಹಾಜರಾಗುತ್ತಾರೆ. ಚಾರ್ಜ್​ಶೀಟ್ ಸಲ್ಲಿಕೆ ನಂತರ ರೆಗ್ಯೂಲರ್ ಬೇಲ್ ಪಡೆಯಬೇಕು. ಕಳೆದ ವಿಚಾರಣೆ ವೇಳೆ ರೆಗ್ಯೂಲರ್ ಬೇಲ್​​ಗೆ ಇಡಿ ಆಕ್ಷೇಪಿಸಿತ್ತು. ಡಿಕೆಶಿ ಸೇರಿ ಐವರು ಆರೋಪಿಗಳು ಇಂದು ಕೋರ್ಟ್​​ಗೆ ಹಾಜರಾಗುತ್ತಾರೆ. ಕೋರ್ಟ್​ಗೆ ಹಾಜರಾಗಲು ಡಿಕೆಶಿ ನಿನ್ನೆಯೇ ದೆಹಲಿಗೆ ತೆರಳಿದ್ದಾರೆ.

ಇದನ್ನೂ ಓದಿ: ವರುಧಿನಿಯ ಕಳ್ಳಾಟ ಬಯಲು; ಕೈ-ಕಾಲು ಮುರಿಯುವ ಎಚ್ಚರಿಕೆ ನೀಡಿದ ಹರ್ಷ

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?