AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ಲಕ್ಷ ಹಣ ಹಾಕ್ತೀನಿ ಅಂತಾ ಹೇಳೋಕ್ಕೆ ಮೋದಿ ಯಾರ ಹತ್ತಿರ ಅನುಮತಿ ತಗೊಂಡು ಘೋಷಣೆ ಮಾಡಿದರು?

ಹಾಸನದಲ್ಲಿ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ ಮಾಡಿ ಡಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹಾಸನ ಜಿಲ್ಲೆ ಉಸ್ತುವಾರಿ ಸಚಿವ ಕೆಎನ್ ರಾಜಣ್ಣ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

15 ಲಕ್ಷ ಹಣ ಹಾಕ್ತೀನಿ ಅಂತಾ ಹೇಳೋಕ್ಕೆ ಮೋದಿ ಯಾರ ಹತ್ತಿರ ಅನುಮತಿ ತಗೊಂಡು ಘೋಷಣೆ ಮಾಡಿದರು?
ನರೇಂದ್ರ ಮೋದಿ, ಕೆಎನ್ ರಾಜಣ್ಣ
TV9 Web
| Edited By: |

Updated on:Jun 17, 2023 | 3:02 PM

Share

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ನ ಭಾಗ್ಯ ಯೋಜನೆಯಡಿ(Anna Bhagya) ಒಟ್ಟು 10ಕೆಜಿ ಅಕ್ಕಿ ಘೋಷಣೆ ಮಾಡಿದ್ದು ಕೇಂದ್ರ ಸರಕಾರ ರಾಜ್ಯಕ್ಕೆ ಅಕ್ಕಿ ಪೂರೈಸಲು ನಿರಾಕರಿಸಿದೆ. ಈ ಸಂಬಂಧ ಕಾಂಗ್ರೆಸ್(Congress) ಕಿಡಿಕಾರಿದ್ದು ಅನ್ಯ ರಾಜ್ಯಗಳಿಗೆ ಅಕ್ಕಿ ಪೂರೈಕೆಗೆ ಸಹರಿಸುವಂತೆ ಅಂಗಲಾಚಿದೆ. ಇದು ಬಂದು ಕಡೆಯಾತ್ರೆ ಮತ್ತೊಂದೆಡೆ ರಾಜ್ಯ ಸರ್ಕಾರ ಉಚಿತ ಅಕ್ಕಿ ಘೋಷಣೆ ವೇಳೆ ಕೇಂದ್ರ ಆಹಾರ ನಿಗಮ(FCI) ಜೊತೆ ಚರ್ಚೆ ಮಾಡಿಲ್ಲ ಎಂಬ ಆರೋಪಗಳು ಸಹ ಕೇಳಿಬಂದಿವೆ. ಈ ಸಂಬಂಧ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆಎನ್ ರಾಜಣ್ಣ(KN Rajanna) ಆಕ್ರೋಶ ಹೊರ ಹಾಕಿದ್ದು 15 ಲಕ್ಷ ಹಣ ಹಾಕ್ತೀನಿ ಅಂತಾ ಹೇಳೋಕ್ಕೆ ಮೋದಿ ಯಾರ ಹತ್ತಿರ ಅನುಮತಿ ತಗೊಂಡು ಘೋಷಣೆ ಮಾಡಿದರು? ಎಂದು ಪ್ರಶ್ನಿಸಿದ್ದಾರೆ.

ಹಾಸನದಲ್ಲಿ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ ಮಾಡಿ ಡಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹಾಸನ ಜಿಲ್ಲೆ ಉಸ್ತುವಾರಿ ಸಚಿವ ಕೆಎನ್ ರಾಜಣ್ಣ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಫ್​ಸಿಐ ಜೊತೆ ಚರ್ಚೆ ಮಾಡಿ ನಾವು ಘೋಷಣೆ ಮಾಡಬೇಕಿಲ್ಲ. ಅವರೇನು ಪುಕ್ಕಟ್ಟೆ ಕೊಡ್ತಾರಾ ನಾವು ಖರೀದಿ ಮಾಡೋದು ಎಂದು ಎಫ್.ಸಿ.ಐ ಅಧಿಕಾರಿಗಳ ವಿರುದ್ಧ ಸಚಿವ ರಾಜಣ್ಣ ಆಕ್ರೋಶ ಹೊರ ಹಾಕಿದ್ದಾರೆ. ಇದೇ ವೇಳೆ ಮಾತು ಮುಂದುವರೆಸಿದ ಸಚಿವ ರಾಜಣ್ಣ, ಮೋದಿಯವರು ಎಲ್ಲರ ಖಾತೆಗೆ ಹದಿನೈದು ಲಕ್ಷ ಹಣ ಹಾಕ್ತೀನಿ ಅಂತಾ ಹೇಳಿದ್ರಲ್ವಾ? ಅವರು ಅನುಮತಿ ತಗೊಂಡು ಘೋಷಣೆ ಮಾಡಿದ್ರಾ ಎಂದು ಕಿಡಿಕಾರಿದ್ರು.

ಇದನ್ನೂ ಓದಿ: ಪಕ್ಷಕ್ಕೆ ದ್ರೋಹ ಬಗೆದವರನ್ನು ವೇದಿಕೆಯಿಂದ ಕೆಳಗಿಳಿಸಿ: ಸಚಿವ ರಾಜಣ್ಣ ಎದುರು ಹಾಸನ ಕೈ ಕಾರ್ಯಕರ್ತರ ಗಲಾಟೆ

ನಾನು ತುಮಕೂರಿನವ, ಆದ್ರೆ ನನಗೆ ಹಾಸನ ಜಿಲ್ಲೆ ಉಸ್ತುವಾರಿ ಯಾಕೆ ಕೊಟ್ಟರೋ ಗೊತ್ತಿಲ್ಲ

ನನಗೆ ಹಾಸನ ಜಿಲ್ಲೆ ಉಸ್ತುವಾರಿ ಯಾಕೆ ಕೊಟ್ಟಿದಾರೊ ಗೊತ್ತಿಲ್ಲ. ನಾನು ನಿರೀಕ್ಷೆ ಕೂಡ ಮಾಡಿರಲಿಲ್ಲ, ಬಹುಶಃ ಬೇರೆ ಕಡೆ ಕೊಡಬಹುದು ಎಂದು ಕೊಂಡಿದ್ದೆ. ಶಿವಲಿಂಗೇಗೌಡ ಸಚಿವರಾಗಿದ್ರೆ ಅವರೇ ಉಸ್ತುವಾರಿ ಆಗೋರು. ಮುಂದೆ ಅವರೂ ಸಚಿವರು ಆಗಬಹುದು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಲ್ಲರಿಗು ಅನುಕೂಲ ಆಗಬೇಕು. ಜಿಲ್ಲೆ ಅಭಿವೃದ್ಧಿ ಆಗಿದೆ ಅದರ ಬಗ್ಗೆ ತಕರಾರು ಇಲ್ಲ. ಆದರೆ ಕಲವು ಕಡೆ ಸಾಕಷ್ಟು ಕೆಲಸ ಆಗಬೇಕು. ನನಗೆ ಹಾಸನ ಜಿಲ್ಲೆ ಉಸ್ತುವಾರಿ ಯಾಕೆ ಕೊಟ್ಟಿದಾರೊ ಗೊತ್ತಿಲ್ಲ. ನಾನು ನಿರೀಕ್ಷೆ ಕೂಡ ಮಾಡಿರಲಿಲ್ಲ, ಬಹುಶಃ ಬೇರೆ ಕಡೆ ಕೊಡಬಹುದು ಎಂದು ಕೊಂಡಿದ್ದೆ. ಶಿವಲಿಂಗೇಗೌಡ ಸಚಿವರಾಗಿದ್ರೆ ಅವರೇ ಉಸ್ತುವಾರಿ ಆಗೋರು. ಮುಂದೆ ಅವರೂ ಸಚಿವರು ಆಗಬಹುದು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಲ್ಲರಿಗು ಅನುಕೂಲ ಆಗಬೇಕು. ಜಿಲ್ಲೆ ಅಭಿವೃದ್ಧಿ ಆಗಿದೆ ಅದರ ಬಗ್ಗೆ ತಕರಾರು ಇಲ್ಲ. ಆದರೆ ಕಲವು ಕಡೆ ಸಾಕಷ್ಟು ಕೆಲಸ ಆಗಬೇಕು ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:56 pm, Sat, 17 June 23

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು