AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಭೂತಗಳಲ್ಲಿ ಲೀನರಾದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ

ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಜೈನ ಮಠದ ಭಟ್ಟಾರಕರು ಸೂರ್ಯಾಸ್ತಕ್ಕೂ ಮೊದಲು ಚಾರುಕೀರ್ತಿಶ್ರೀಗಳ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Mar 23, 2023 | 8:06 PM

Share

ಹಾಸನ: ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (Charukirthi Bhattarak Swamiji)  ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಜೈನ ಮಠದ ಭಟ್ಟಾರಕರು ಸೂರ್ಯಾಸ್ತಕ್ಕೂ ಮೊದಲು ಚಾರುಕೀರ್ತಿಶ್ರೀಗಳ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಜಿಲ್ಲೆಯ ಶ್ರವಣಬೆಳಗೊಳದಲ್ಲಿರುವ ಜೈನಮಠದ ಚಂದ್ರಗಿರಿ ತಪ್ಪಲಿನಲ್ಲಿ ಜೈನ ಸಂಪ್ರದಾಯದಂತೆ ಚಾರುಕೀರ್ತಿ ಭಟ್ಟಾರಕಶ್ರೀ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಸ್ವಾಮೀಜಿಗಳು 53 ವರ್ಷಗಳ ಕಾಲ ಜೈನ ಮಠದ ಪೀಠಾಧಿಪತಿಯಾಗಿದ್ದರು. ಅಗ್ನಿ ಸ್ಪರ್ಶಕ್ಕೂ ಮುನ್ನ ಬಾಹುಬಲಿ ಸ್ವಾಮಿಗೆ ಎದುರಾಗಿ ಶ್ರೀಗಳನ್ನ ಕೂರಿಸಿ ಪೂಜೆ ಸಲ್ಲಿಸಲಾಯಿತು. ಸಾಂಕೇತಿಕ ವಾಗಿ ಶ್ರೀಗಳ ಪಾರ್ಥೀವ ಶರೀರಕ್ಕೆ ಜೈನ ಶ್ರೀಗಳು ಅಭಿಷೇಕ ಮಾಡಲಾಯಿತು. ಪೂಜಾ ಕೈಂಕರ್ಯದ ಬಳಿಕ ಅಗ್ನಿಸ್ಪರ್ಶ ಮಾಡಲಾಯಿತು. ತುಮಕೂರಿನ ಸಿದ್ದಲಿಂಗ ಶ್ರೀ, ಸುತ್ತೂರು ಶ್ರೀಗಳು, ರೋಹಿಣಿ ಸಿಂದೂರಿ, ಹಾಸನ ಡಿಸಿ ಅರ್ಚನ, ಎಸ್ಪಿ ಹರಿರಾಮ್ ಶಂಕರ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.

ಕಾಲುಜಾರಿ ಬಿದ್ದು ತಲೆಗೆ ಗಂಭೀರ ಗಾಯ: 

ಐತಿಹಾಸಿಕ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು (ಮಾ.23) ಮುಂಜಾನೆ ಮಂಡ್ಯ ಜಿಲ್ಲೆಯ ಬೆಳ್ಳರೂ ಕ್ರಾಸ್​ನ ಆದಿಚುಂಚನಗಿರಿ ಆಸ್ಪತ್ರೆಯಲ್ಕಿ ಕೊನೆಯುಸಿರೆಳೆದಿದ್ದರು. ಬೆಳಿಗ್ಗೆ ನಿತ್ಯಕರ್ಮಕ್ಕೆ ಎದ್ದಾಗ ಕಾಲುಜಾರಿ ಬಿದ್ದು ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದರಿಂದ ಶ್ರೀಗಳು ಸಾವನ್ನಪ್ಪಿದ್ದಾರೆ ಎಂದು ಹಾಸನ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಹೇಳಿದ್ದರು.

ಇದನ್ನೂ ಓದಿ: ಹಾಸನ: ಐತಿಹಾಸಿಕ ಜೈನ ಮಠದ ಪೀಠಾದ್ಯಕ್ಷ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಸ್ತಂಗತ

ಸ್ವಾಮೀಜಿಯವರು ಹಲವು ದಿನಗಳಿಂದ ಕಾಲುನೋವಿನಿಂದ ಬಳಲುತ್ತಿದ್ದರು. ಈ ಕಾರಣದಿಂದ ಶ್ರೀಗಳು ನಿಯಂತ್ರಣ ತಪ್ಪಿ ಮುಂಜಾನೆ ಬಿದ್ದಿದ್ದಾರೆ. ತೀವ್ರ ಗಾಯದಿಂದ ಬಳಲಿದ್ದ ಶ್ರೀಗಳನ್ನ ಸಿಬ್ಬಂದಿಯವರು ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ತಲೆಗೆ ಗಂಭೀರ ಗಾಯವಾದ್ದರಿಂದ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು.

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು 1949ರ ಮೇ 3 ರಂದು ಜನಿಸಿದ್ದರು. ಮೂಲತಃ  ಕಾರ್ಕಳದ ವರಂಗ ಗ್ರಾಮದವರು. 1970 ರಲ್ಲಿ ಜೈನ ಮಠದ ಪೀಠವೇರಿದ್ದ ಶ್ರೀಗಳು, ಇತಿಹಾಸ ತಜ್ಞ, ತತ್ವಜ್ಞಾನಿ, ಇತಿಹಾಸ, ಕನ್ನಡ, ಸಂಸ್ಕೃತ ದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಪ್ರಾಕೃತ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1981ರ ಮಹಾಮಸ್ತಕಾಭಿಷೇಕ ಯಶಸ್ವಿಯಾಗಿ ನೆರವೇರಿಸಿದ್ದಕ್ಕೆ ಅಂದಿನ ಪ್ರಧಾನಿ ಇಂದಿರಾಗಾಂಧಿಯವರು ಇವರಿಗೆ ಕರ್ಮಯೋಗಿ ಎಂದು ಬಿರುದು ನೀಡಿದ್ದರು.

ಇದನ್ನೂ ಓದಿ: ಹಾಸನ: ಬೆಳಗ್ಗೆ ನಿತ್ಯಕರ್ಮಕ್ಕೆ ಎದ್ದಾಗ ಕಾಲುಜಾರಿ ಬಿದ್ದು ಶ್ರೀಗಳ ಸಾವು; ಸ್ಪಷ್ಟಪಡಿಸಿದ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ

ಚಾರುಕೀರ್ತಿ ಬಿರುದು ನೀಡಿದ ಹೊಯ್ಸಳ ದೊರೆ

ಸ್ವಸ್ಥಿ ಶ್ರಿ ಚಾರುಕೀರ್ತಿ ಅನ್ನುವ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಗಳು ಕರ್ನಾಟಕದಲ್ಲಿ ಇದ್ದಾರೆ. ಮೂಲತ ಶ್ರವಣ ಬೆಳಗೊಳದ ಜೈನ ಮಠದ ಸ್ವಾಮೀಜಿಗಳಿಗೆ 13ನೆ ಶತಮಾನದಲ್ಲಿ (1118-19)ಹೊಯ್ಸಳ ದೊರೆ ಬಲ್ಲಾಳರಾಯನು ನೀಡಿದ ಬಿರುದು ಚಾರುಕೀರ್ತಿ ಆಗಿನಿಂದ ಆ ಪೀಠದ ಸ್ವಾಮೀಜಿಗಳಿಗೆ ಸ್ವಸ್ಥಿ ಶ್ರಿ ಚಾರುಕೀರ್ತಿ ಎಂದೆ ಕರೆಯಲಾಗುತ್ತಿದೆ.

ಅದೇ ಸ್ವಾಮೀಜಿಗಳು ದಕ್ಷಿಣ ಕನ್ನಡದ (ಕಾರ್ಕಳ ಸಮೀಪ) ನಲ್ಲೂರು ಗ್ರಾಮದಲ್ಲಿ ಜೈನಮಠವನ್ನು ಸ್ಥಾಪನೆ ಮಾಡುತ್ತಾರೆ. ಅಲ್ಲಿಂದ ಮುಂದೆ ಹೋಗಿ ಮುಡುಬಿದ್ರೆಯಲ್ಲಿ ಮತ್ತೆ ಒಂದು ಮಠವನ್ನು ಸ್ಥಾಪನೆ ಮಾಡುತ್ತಾರೆ. ಅವರೆ ಆಧ್ಯಶ್ರಿ ಚಾರುಕೀತಿ೯ ಭಟ್ಟಾರಕ ಪ೦ಡಿತಾಚಯ೯ವಯ೯ ಮಹಾಸ್ವಾಮೀಜಿಗಳು. ಬಳಿಕ ಕೆಲ ಕಾಲದ ನ೦ತರ ಅವರ ನಲ್ಲೂರಿನಲ್ಲಿ ಸಮಾಧಿ ಸಲ್ಲೇಖನವಾಗುತ್ತದೆ ಇದಕ್ಕೆ ಜೈನ ಪರಿ ಭಾಷೆ ಯಲ್ಲಿ ವ್ರತ ಮರಣ ಎ೦ದು ಹೇಳುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:06 pm, Thu, 23 March 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ