AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ಹರಿಯುತ್ತಿದ್ದ ಕಾಲುವೆ ಏಕಾಏಕಿ ಬಂದ್; ಹೇಮಾವತಿ ಜಲಾಶಯದ ನೀರು ನಂಬಿ ಭತ್ತ ಬಿತ್ತನೆ ಮಾಡಿದ ರೈತರಲ್ಲಿ ಆತಂಕ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ದೊಡ್ದ ಸಂಘರ್ಷವೇ ಶುರುವಾಗಿದ್ದು, ಕಾವೇರಿ ನದಿ ನೀರು ನಿರ್ವಹಣಾ ಪ್ರಾದಿಕಾರದ ತೀರ್ಪನ್ನು ಸುಪ್ರಿಂಕೋರ್ಟ್ ಎತ್ತಿಹಿಡಿದಿರೋದು ಕಾವೇರಿಕೊಳ್ಳದ ರೈತರ ಹೋರಾಟಕ್ಕೆ ಕಿಚ್ಚು ಹಚ್ಚಿದೆ. ಇನ್ನೊಂದೆಡೆ ಈ ಭಾಗದ ಜಲಾಶಯಗಳ ನೀರನ್ನೇ ನಂಬಿ ಬೆಳೇ ಮಾಡಿದ್ದ ರೈತರು ಸಂಕಷ್ಟಕ್ಕೀಡಾಗಿದ್ದಾರೆ.

ನೀರು ಹರಿಯುತ್ತಿದ್ದ ಕಾಲುವೆ ಏಕಾಏಕಿ ಬಂದ್; ಹೇಮಾವತಿ ಜಲಾಶಯದ ನೀರು ನಂಬಿ ಭತ್ತ ಬಿತ್ತನೆ ಮಾಡಿದ ರೈತರಲ್ಲಿ ಆತಂಕ
ಹಾಸನ
ಮಂಜುನಾಥ ಕೆಬಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 21, 2023 | 4:11 PM

Share

ಹಾಸನ, ಸೆ.21: ಒಂದುವರೆ ತಿಂಗಳಿಂದ ನೀರು ಹರಿಯುತ್ತಿದ್ದ ಕಾಲುವೆ ಏಕಾಏಕಿ ಬಂದ್​ ಮಾಡಲಾಗಿದ್ದು, ಹೇಮಾವತಿ ಜಲಾಶಯ (Hemavathi Dam)ದ ನೀರು ನಂಬಿ ಭತ್ತ ಬಿತ್ತನೆ ಮಾಡಿದ ರೈತರಲ್ಲಿ ಇದೀಗ ಆತಂಕ ಎದುರಾಗಿದೆ. ತಮಿಳುನಾಡಿಗೆ ನೀರು ಬಿಡಲೆಂದು ರೈತರಿಗೆ ಅನ್ಯಾಯ ಮಾಡುತ್ತಿದೆಯಾ ಸರ್ಕಾರ ಎಂಬ ಪ್ರಶ್ನೆ ರೈತರಲ್ಲಿ ಮೂಡಿದೆ. ತಮಿಳುನಾಡಿಗೆ ನೀರು ಬಿಟ್ಟರೆ, ರೈತರ ಬೆಳೆಗೆ ನೀರಿಲ್ಲ. ಬೆಳೆಗೆ ನೀರು ಕೊಡದಿದ್ದರೆ ಬೆಳೆ ಉಳಿಯೋದು ಕಷ್ಟ.

ಹೌದು, ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಹಾಗೂ ಕರ್ನಾಟಕದ ಮದ್ಯೆ ನಡೆಯುತ್ತಿರುವ ಸಂಘರ್ಷ, ಇಂದು ಬೇರೆಯದೇ ಹಂತ ತಲುಪಿದೆ. ಸುಪ್ರಿಂಕೋರ್ಟ್ ಕೂಡ ತಮಿಳುನಾಡಿಗೆ ನೀರು ಹರಿಸಲು ಸೂಚನೆ ನೀಡಿದ್ದು, ಕಾವೇರಿಕೊಳ್ಳದ ರೈತರಿಗೆ ಬರಸಿಡಿಲು ಬಡಿದಂತಾಗಿದೆ. ಈ ಭಾಗದ ಪ್ರಮುಖವಾದ ಹೇಮಾವತಿ ಜಲಾಶಯದಲ್ಲಿ ಸದ್ಯ ಕೇವಲ 17 ಟಿಎಂಸಿ ನೀರಿದೆ. ಇದರಲ್ಲಿ ಬಳಕೆಗೆ ಯೋಗ್ಯ ನೀರು ಕೇವಲ 13 ಟಿಎಂಸಿ, ಗರಿಷ್ಟ 2922 ಅಡಿ ಸಾಮರ್ಥ್ಯದ ಜಲಾಶಯದಲ್ಲಿ 37 ಟಿಎಂಸಿ ನೀರು ಸಂಗ್ರಹಕ್ಕೆ ಅವಕಾಶ ಇದೆ. ಆದರೆ, ಈ ವರ್ಷ ಮುಂಗಾರು ಮಳೆ ಕೈಕೊಟ್ಟ ಪರಿಣಾಮವಾಗಿ ಈಗ ಕೇವಲ 17 ಟಿಎಂಸಿ ಅಂದ್ರೆ 2896 ಅಡಿ ಮಾತ್ರ ನೀರಿದೆ.

ಇದನ್ನೂ ಓದಿ:ಕಾವೇರಿ ವಿವಾದ: ತಮಿಳುನಾಡಿಗೆ ನೀರು ಬಿಡುವ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋದ ಬೆಂಗಳೂರು ನಾಗರೀಕರು

ಸದ್ಯ ಜಲಾಶಯಕ್ಕೆ 2378 ಕ್ಯುಸೆಕ್ ಒಳಹರಿವು ಇದ್ದು, 1300ಕ್ಯುಸೆಕ್ ನೀರನ್ನ ಹೊರ ಬಿಡಲಾಗುತ್ತಿದೆ. ಜುಲೈನಲ್ಲಿ ಸುರಿದ ಮಳೆಯಿಂದ ಜಲಾಶಯಕ್ಕೆ 15 ಟಿಎಂಸಿಯಷ್ಟು ನೀರು ಬಂದಿತ್ತು. ಹಾಗಾಗಿಯೇ ಹೇಮಾವತಿ ಜಲಾನಯನ ಪ್ರದೇಶದ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ನೀರನ್ನು ಹರಿಸಲಾಗಿತ್ತು. ಇದನ್ನೇ ನಂಬಿದ ರೈತರು ಭತ್ತದ ಬೆಳೆಯನ್ನ ಬಿತ್ತನೆ ಮಾಡಿದರು. ಆದ್ರೆ, ಈಗ ಜಲಾಶಯದಲ್ಲಿ ನೀರಿನ ಸಂಗ್ರಹ ಕುಸಿದಿದೆ.

ತಮಿಳುನಾಡಿಗೂ ನೀರು ಬಿಡಬೇಕಾದ ಪರಿಸ್ಥಿತಿ ಹಿನ್ನಲೆಯಲ್ಲಿ ಕಾಲುವೆಗಳಿಗೆ ಹರಿಸಲಾಗುತ್ತಿದ್ದ ನೀರನ್ನ ನಿಲ್ಲಿಸಲಾಗಿದೆ. ಕಾಲುವೆ ನೀರನ್ನೆ ನಂಬಿ ತಿಂಗಳ ಹಿಂದೆ ಭತ್ತದ ಪೈರು ಬಿತ್ತಿದ್ದ ರೈತರು ಈಗ ದಿಢೀರ್ ನೀರು ನಿಲ್ಲಿಸಿರುವ ಕ್ರಮಕ್ಕೆ ಆಕ್ರೊಶ ಹೊರ ಹಾಕಿದ್ದಾರೆ. ದಿನದ 24 ಗಂಟೆಯೂ ನೀರಿರಬೇಕಾದ ಬೆಳೆ ಭತ್ತ. ಆದ್ರೆ, ಇಷ್ಟು ದಿನ ನೀರು ಬಿಟ್ಟು ಈಗ ಏಕಾಏಕಿ ನೀರು ನಿಲ್ಲಿಸಿರುವ ಕ್ರಮ ಸರಿಯಲ್ಲ. ಇನ್ನು ಮೂರು ತಿಂಗಳು ರೈತರ ಬೆಳೆಗಳಿಗೆ ನೀರು ಕೊಡಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ತಮಿಳುನಾಡಿಗೆ ನೀರು 

ಇನ್ನು ಹಾಸನ ಜಿಲ್ಲೆಯ ಗೊರೂರು ಸಮೀಪ ಇರೋ ಹೇಮಾವತಿ ಜಲಾಶಯ ಕಾವೇರಿಕೊಳ್ಳದ ಪ್ರಮುಖ ಜಲಾಶಯ. ಈ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ 44,980 ಹೆಕ್ಟೇರ್ ಪ್ರದೇಶವನ್ನು ನೀರಾವರಿ ಬೆಳೆಗಾಗಿ ಗುರುತಿಸಲಾಗಿದೆ. ಇದರಲ್ಲಿ 20,980 ಎಕರೆ ಭತ್ತ ಬೆಳೆಯುವ ಪ್ರದೇಶ ಇದೆ. ಉಳಿದಂತೆ ಕಬ್ಬು, ರಾಗಿ, ದ್ವಿದಳ ದಾನ್ಯಬೆಳೆ ಬೆಳೆಯಲು ಅವಕಾಶ ಇದೆ. ಆದರೆ, ಈ ವರ್ಷ ಮಳೆ ಕೊರತೆಯಿಂದ 4,105 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಭತ್ತದ ಬಿತ್ತನೆಯಾಗಿದೆ. ಉಳಿದ ಬೆಳೆಗಳು ನಾಶವಾಗಿ ಹೋಗಿದೆ.

ಒಟ್ಟು 15,301 ಹೆಕ್ಟೇರ್ ಪ್ರದೇಶದಲ್ಲಿ ವಿವಿದ ಬೆಳಗಳ ಬಿತ್ತನೆ ಮಾಡಿದ್ದು ಈಗ ರೈತರು ಬೆಳೆ ಕೆಳೆದುಕೊಳ್ಳೋ ಆತಂಕ ಎದುರಿಸುತ್ತಿದ್ದಾರೆ. ಇಷ್ಟು ದಿನ ನೀರುಬಿಟ್ಟಿದ್ದ ಅದಿಕಾರಿಗಳು ಈಗ ಕಾಲುವೆ ನೀರು ಆಶ್ರಿತ ಬೆಳೆ ಮಾಡೋ ಹಾಗಿಲ್ಲ ಎಂದು ಹೇಳುತ್ತಿದ್ದಾರೆ. ತುತ್ತಿನ ಬೆಳೆ ಭತ್ತವನ್ನ ಬಿತ್ತಿದ್ದ ರೈತರು ಇಕ್ಕಟ್ಟಿಗೆ ಸಿಲುಕಿದ್ದಾರೆ. ನೀರು ಬಿಡುತ್ತಾರೆಂದು ನಂಬಿ ಬೆಳೆ ಮಾಡಿದ ರೈತರು ಈಗ ಏಕಾಏಕಿ ನೀರು ನಿಲ್ಲಿಸಿರೋದ್ರಿಂದ ಆತಂಕಕ್ಕೆ ಒಳಗಾಗಿದ್ದಾರೆ.

ಒಟ್ಟಿನಲ್ಲಿ ತಮಿಳುನಾಡಿಗೆ ನೀರು ಬಿಡಲೇಬೇಕಾದ ಅನಿವಾರ್ಯ ಪರಿಸ್ಥಿತಿಯಲ್ಲಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಆದ್ರೆ, ತಮಿಳುನಾಡಿಗೆ ನೀರು ಹರಿಸಿದ್ರೆ, ನಮ್ಮ ರೈತರ ಬೆಳೆಗಳಿಗೆ ನೀರಿಲ್ಲದೆ ಇಲ್ಲಿನ ತುತ್ತಿನ ಬೆಳೆಯೇ ನೆಲ ಕಚ್ಚೋ ಆತಂಕದ ಜೊತೆಗೆ ಕುಡಿಯೋ ನೀರಿಗೂ ತತ್ವಾರ ಶುರುವಾಗುವ ಭೀತಿ ಸೃಷ್ಟಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Manjunath KB
Manjunath KB
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ