Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದ ಜೀವನದಿಯ ಒಡಲಿನಲ್ಲಿ ಜಲ ಕ್ಷಾಮದ ಭೀತಿ; ಮಳೆಯಿಲ್ಲದೆ ಬರಿದಾಗುತ್ತಿದೆ ಹೇಮಾವತಿ ಜಲಾಶಯ

ರಾಜ್ಯದಲ್ಲಿ ಅನೇಕ ಜಲಾಶಯಗಳು ಮಳೆಯಿಲ್ಲದೆ ಬರಿದಾಗುತ್ತಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಅದರಂತೆ ಇದೀಗ ಹಾಸನದ ಜೀವನದಿಯ ಒಡಲಿನಲ್ಲಿ ಜಲ ಕ್ಷಾಮದ ಭೀತಿ ಎದುರಾಗಿದೆ.

ಹಾಸನದ ಜೀವನದಿಯ ಒಡಲಿನಲ್ಲಿ ಜಲ ಕ್ಷಾಮದ ಭೀತಿ; ಮಳೆಯಿಲ್ಲದೆ ಬರಿದಾಗುತ್ತಿದೆ ಹೇಮಾವತಿ ಜಲಾಶಯ
ಹೇಮಾವತಿ ಜಲಾಶಯ
Follow us
ಮಂಜುನಾಥ ಕೆಬಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 30, 2023 | 2:34 PM

ಹಾಸನ: ರಾಜ್ಯದಲ್ಲಿ ಅನೇಕ ಜಲಾಶಯ(Dam)ಗಳು ಮಳೆಯಿಲ್ಲದೆ ಬರಿದಾಗುತ್ತಿದೆ. ಉತ್ತರ ಕರ್ನಾಟಕ(Uttara Karnataka)ದ ಬಹುತೇಕ ಜಿಲ್ಲೆಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕೆಆರ್​ಎಸ್​ ಜಲಾಶಯ ಕೂಡ ತೀವ್ರ ಕುಸಿತ ಕಂಡಿದ್ದು, ಇನ್ನು ಕೆಲವು ದಿನಗಳಲ್ಲಿ ಮಳೆಯಾಗದಿದ್ದರೆ ಜಲಾಶಯವನ್ನೇ ನಂಬಿಕೊಂಡ ಜಿಲ್ಲೆಗಳು ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಲಿದೆ. ಅದರಂತೆ ಇದೀಗ ಜಿಲ್ಲೆಯಲ್ಲೂ ಮಳೆ‌ ಕೊರತೆ ಉಂಟಾಗಿ, ಪ್ರಮುಖ ಜಲಾಶಯ ಹೇಮಾವತಿ ಒಡಲು ಬರಿದಾಗುತ್ತಿದೆ.

ಬಹುತೇಕ ಬತ್ತಿ ಹೋಗಿರುವ ಕಾವೇರಿ ಕೊಳ್ಳದ ಪ್ರಮುಖ ಜಲಾಶಯ

ಹೌದು 2922 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಕೇವಲ 2890 ಅಡಿ ನೀರು ಮಾತ್ರಯಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯ 2907 ಅಡಿ ನೀರು ಹೊಂದಿತ್ತು. ಈ ವರ್ಷ ಮಳೆಯ ತೀವ್ರ ಕೊರತೆಯಿಂದ ದಿನೇ ದಿನೇ ಹೇಮಾವತಿ ಜಲಾಶಯ ಬರಿದಾಗುತ್ತಿದೆ. ಒಟ್ಟು 37 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಈ ವರ್ಷ ಜೂನ್ ಅಂತ್ಯದಲ್ಲಿ ಕೇವಲ 14 ಟಿಎಂಸಿ ನೀರಿನ ಸಂಗ್ರಹ ಮಾತ್ರವಿದ್ದು, ಇದರಲ್ಲಿ ಕೇವಲ 9 ಟಿಎಂಸಿ ಮಾತ್ರ ಬಳಕೆಗೆ ಲಭ್ಯವಿದೆ.

ಇದನ್ನೂ ಓದಿ:Bengaluru News: ವೈಟ್​ಫಿಲ್ಡ್ ನಿವಾಸಿಗಳಿಗೆ ಜಲ ಕಂಟಕ: ಟ್ಯಾಂಕರ್​ ನೀರಿಗಾಗಿ ಪ್ರತಿ ತಿಂಗಳು 10 ಸಾವಿರ ರೂ. ಖರ್ಚು

ಕಳೆದ ವರ್ಷ ಇದೇ ಅವಧಿಯಲ್ಲಿ 24 ಟಿಎಂಸಿ ನೀರಿನ ಸಂಗ್ರಹ ಹೊಂದಿದ್ದ ಜಲಾಶಯ

ಇದೇ ಜಲಾಶಯದಲ್ಲಿ ಕಳೆದ ವರ್ಷ ಇದೇ ಅವಧಿಯಲ್ಲಿ 24 ಟಿಎಂಸಿ ನೀರಿನ ಸಂಗ್ರಹ ಹೊಂದಿತ್ತು. ಇದೀಗ ಹೇಮಾವತಿ ನದಿ ಕೇವಲ 59 ಕ್ಯೂಸೆಕ್ ಒಳಹರಿವಿನೊಂದಿಗೆ ಬಹುತೇಕ ಹರಿವು ನಿಲ್ಲಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 3477 ಕ್ಯೂಸೆಕ್ ನೀರಿನ ಹರಿವು ಜಲಾಶಯ ಹೊಂದಿದ್ದು, ಈ ಬಾರಿ ಮಳೆಯಿಲ್ಲದೆ ಸಂಪೂರ್ಣ ಬರಿದಾಗುತ್ತಿದೆ. ಇನ್ನು ಕೆಲವು ದಿನ ಮಳೆಯಾಗದೇ ಇದ್ದರೆ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗುವ ಆತಂಕ ಎದುರಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!