AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದ ಜೀವನದಿಯ ಒಡಲಿನಲ್ಲಿ ಜಲ ಕ್ಷಾಮದ ಭೀತಿ; ಮಳೆಯಿಲ್ಲದೆ ಬರಿದಾಗುತ್ತಿದೆ ಹೇಮಾವತಿ ಜಲಾಶಯ

ರಾಜ್ಯದಲ್ಲಿ ಅನೇಕ ಜಲಾಶಯಗಳು ಮಳೆಯಿಲ್ಲದೆ ಬರಿದಾಗುತ್ತಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಅದರಂತೆ ಇದೀಗ ಹಾಸನದ ಜೀವನದಿಯ ಒಡಲಿನಲ್ಲಿ ಜಲ ಕ್ಷಾಮದ ಭೀತಿ ಎದುರಾಗಿದೆ.

ಹಾಸನದ ಜೀವನದಿಯ ಒಡಲಿನಲ್ಲಿ ಜಲ ಕ್ಷಾಮದ ಭೀತಿ; ಮಳೆಯಿಲ್ಲದೆ ಬರಿದಾಗುತ್ತಿದೆ ಹೇಮಾವತಿ ಜಲಾಶಯ
ಹೇಮಾವತಿ ಜಲಾಶಯ
ಮಂಜುನಾಥ ಕೆಬಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jun 30, 2023 | 2:34 PM

Share

ಹಾಸನ: ರಾಜ್ಯದಲ್ಲಿ ಅನೇಕ ಜಲಾಶಯ(Dam)ಗಳು ಮಳೆಯಿಲ್ಲದೆ ಬರಿದಾಗುತ್ತಿದೆ. ಉತ್ತರ ಕರ್ನಾಟಕ(Uttara Karnataka)ದ ಬಹುತೇಕ ಜಿಲ್ಲೆಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕೆಆರ್​ಎಸ್​ ಜಲಾಶಯ ಕೂಡ ತೀವ್ರ ಕುಸಿತ ಕಂಡಿದ್ದು, ಇನ್ನು ಕೆಲವು ದಿನಗಳಲ್ಲಿ ಮಳೆಯಾಗದಿದ್ದರೆ ಜಲಾಶಯವನ್ನೇ ನಂಬಿಕೊಂಡ ಜಿಲ್ಲೆಗಳು ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಲಿದೆ. ಅದರಂತೆ ಇದೀಗ ಜಿಲ್ಲೆಯಲ್ಲೂ ಮಳೆ‌ ಕೊರತೆ ಉಂಟಾಗಿ, ಪ್ರಮುಖ ಜಲಾಶಯ ಹೇಮಾವತಿ ಒಡಲು ಬರಿದಾಗುತ್ತಿದೆ.

ಬಹುತೇಕ ಬತ್ತಿ ಹೋಗಿರುವ ಕಾವೇರಿ ಕೊಳ್ಳದ ಪ್ರಮುಖ ಜಲಾಶಯ

ಹೌದು 2922 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಕೇವಲ 2890 ಅಡಿ ನೀರು ಮಾತ್ರಯಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯ 2907 ಅಡಿ ನೀರು ಹೊಂದಿತ್ತು. ಈ ವರ್ಷ ಮಳೆಯ ತೀವ್ರ ಕೊರತೆಯಿಂದ ದಿನೇ ದಿನೇ ಹೇಮಾವತಿ ಜಲಾಶಯ ಬರಿದಾಗುತ್ತಿದೆ. ಒಟ್ಟು 37 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಈ ವರ್ಷ ಜೂನ್ ಅಂತ್ಯದಲ್ಲಿ ಕೇವಲ 14 ಟಿಎಂಸಿ ನೀರಿನ ಸಂಗ್ರಹ ಮಾತ್ರವಿದ್ದು, ಇದರಲ್ಲಿ ಕೇವಲ 9 ಟಿಎಂಸಿ ಮಾತ್ರ ಬಳಕೆಗೆ ಲಭ್ಯವಿದೆ.

ಇದನ್ನೂ ಓದಿ:Bengaluru News: ವೈಟ್​ಫಿಲ್ಡ್ ನಿವಾಸಿಗಳಿಗೆ ಜಲ ಕಂಟಕ: ಟ್ಯಾಂಕರ್​ ನೀರಿಗಾಗಿ ಪ್ರತಿ ತಿಂಗಳು 10 ಸಾವಿರ ರೂ. ಖರ್ಚು

ಕಳೆದ ವರ್ಷ ಇದೇ ಅವಧಿಯಲ್ಲಿ 24 ಟಿಎಂಸಿ ನೀರಿನ ಸಂಗ್ರಹ ಹೊಂದಿದ್ದ ಜಲಾಶಯ

ಇದೇ ಜಲಾಶಯದಲ್ಲಿ ಕಳೆದ ವರ್ಷ ಇದೇ ಅವಧಿಯಲ್ಲಿ 24 ಟಿಎಂಸಿ ನೀರಿನ ಸಂಗ್ರಹ ಹೊಂದಿತ್ತು. ಇದೀಗ ಹೇಮಾವತಿ ನದಿ ಕೇವಲ 59 ಕ್ಯೂಸೆಕ್ ಒಳಹರಿವಿನೊಂದಿಗೆ ಬಹುತೇಕ ಹರಿವು ನಿಲ್ಲಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 3477 ಕ್ಯೂಸೆಕ್ ನೀರಿನ ಹರಿವು ಜಲಾಶಯ ಹೊಂದಿದ್ದು, ಈ ಬಾರಿ ಮಳೆಯಿಲ್ಲದೆ ಸಂಪೂರ್ಣ ಬರಿದಾಗುತ್ತಿದೆ. ಇನ್ನು ಕೆಲವು ದಿನ ಮಳೆಯಾಗದೇ ಇದ್ದರೆ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗುವ ಆತಂಕ ಎದುರಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ