AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಇಲಾಖೆಗೆ ಸೆಡ್ಡು ಹೊಡೆದು ತಡೆ ತೆರವುಗೊಳಿಸಿದ ಹಾಸನ ಜಿಲ್ಲಾಡಳಿತ; ವಾಹನ ಸಂಚಾರಕ್ಕೆ ಫ್ಲೈಓವರ್​ ಮುಕ್ತ

ಹಾಸನದ ಎನ್​ಆರ್ ವೃತ್ತದಿಂದ ಹೊಸ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಮೇಲ್ಸೇತುವೆಯ ಎರಡು ಪಥದ ರಸ್ತೆಯ ಸಂಪೂರ್ಣ ಕಾಮಗಾರಿ ಮುಗಿದಿದ್ದರೂ ಏಕಕಾಲದಲ್ಲಿ ಮೇಲ್ಸೇತುವೆ ಹಾಗೂ ಲೆವೆಲ್ ಕ್ರಾಸಿಂಗ್ ಚಾಲನೆಯಲ್ಲಿ ಇರಕೂಡದು ಎಂಬ ನಿಯಮ ಮುಂದಿಟ್ಟು ರೈಲ್ವೆ ಇಲಾಖೆ ಸಂಚಾರ ಸ್ಥಗಿತಗೊಳಿಸಿತ್ತು. ಇಲಾಖೆಗೆ ಸೆಡ್ಡು ಹೊಡೆದ ಜಿಲ್ಲಾಡಳಿತ, ರಾತ್ರೋರಾತ್ರಿ ತಡೆ ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಿದೆ.

ರೈಲ್ವೆ ಇಲಾಖೆಗೆ ಸೆಡ್ಡು ಹೊಡೆದು ತಡೆ ತೆರವುಗೊಳಿಸಿದ ಹಾಸನ ಜಿಲ್ಲಾಡಳಿತ; ವಾಹನ ಸಂಚಾರಕ್ಕೆ ಫ್ಲೈಓವರ್​ ಮುಕ್ತ
ರೈಲ್ವೆ ಇಲಾಖೆಗೆ ಸೆಡ್ಡು ಹೊಡೆದ ಹಾಸನ ಜಿಲ್ಲಾಡಳಿತ; ಕೊನೆಗೂ ವಾಹನ ಸಂಚಾರಕ್ಕೆ ಪ್ಲೈಓವರ್​ ಮುಕ್ತ
Follow us
ಮಂಜುನಾಥ ಕೆಬಿ
| Updated By: Rakesh Nayak Manchi

Updated on:Feb 05, 2024 | 10:03 PM

ಹಾಸನ, ಫೆ.5: ರೈಲ್ವೆ ಮೇಲ್ಸೇತುವೆ ವಿಚಾರವಾಗಿ ಹಾಸನ (Hassan) ಜಿಲ್ಲಾಡಳಿತ ಮತ್ತು ರೈಲ್ವೆ ಇಲಾಖೆ ನಡುವಿನ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ರೈಲ್ವೆ ಇಲಾಖೆಗೆ ಸೆಡ್ಡು ಹೊಡೆದ ಜಿಲ್ಲಾಡಳಿತ, ಮೇಲ್ಸೇತುವೆಗೆ ಹಾಕಿದ್ದ ತಡೆಯನ್ನು ರಾತ್ರೋರಾತ್ರಿ ತೆರವುಗೊಳಿಸಿ ವಾಹನ ಸಂಚಾರಕ್ಕೆ ಮುಕ್ತಮಾಡಿಕೊಟ್ಟಿದೆ.

ಹಾಸನದ ಎನ್ ಆರ್ ವೃತ್ತದಿಂದ ಹೊಸ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಮೇಲ್ಸೇತುವೆಯ ಎರಡು ಪಥದ ರಸ್ತೆಯ ಸಂಪೂರ್ಣ ಕಾಮಗಾರಿ ಪೂರ್ಣಗೊಂಡಿದೆ. ಆದರೂ ರೈಲ್ವೆ ಇಲಾಖೆ ಕುಂಟುನೆಪಹೇಳಿ ಸಂಚಾರ ಬಂದ್ ಮಾಡಿತ್ತು. ಏಕಕಾಲದಲ್ಲಿ ಮೇಲ್ಸೇತುವೆ ಹಾಗೂ ಲೆವೆಲ್ ಕ್ರಾಸಿಂಗ್ ಚಾಲನೆಯಲ್ಲಿ ಇರಬಾರದು ಎಂಬ ನಿಯಮ ಮುಂದಿಟ್ಟು ಸಂಚಾರ ಸ್ಥಗಿತಗೊಳಿಸಿತ್ತು.

ಇದನ್ನೂ ಓದಿ: ಹಾಸನ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡರ ವ್ಹೀಲಿಂಗ್, ವಾಹನ ಸವಾರರಿಗೆ ಫಜೀತಿ

ಸುಮಾರು 20 ದಿನಗಳ ಜಿಲ್ಲಾಡಳಿತ ಹಾಗೂ ರೈಲ್ವೆ ಇಲಾಖೆ ನಡುವಿನ ಮುಸುಕಿನ ಗುದ್ದಾಟಕ್ಕೆ ಇದೀಗ ತೆರೆಬಿದ್ದಿದೆ. ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಅವರು ತಮ್ಮ ಅಧಿಕಾರ ದಂಡ ಬಳಸಿ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ ಗೊಳಿಸಿದ್ದು, ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ಸಂಚಾರಕ್ಕೆ ಮುಕ್ತ ಗೊಳಿಸಿದ್ದ ರಸ್ತೆಯನ್ನ ಬಂದ್ ಮಾಡಿದ್ದ ಹಿನ್ನೆಲೆ ಜನರ ಆಕ್ರೋಶ ವ್ಯಕ್ತವಾಗಿತ್ತು. ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದೆ ಎನ್ನೋ ಆದಾರದ ಮೇಲೆ‌ ರೈಲ್ವೆ ಇಲಾಖೆಗೆ ಸೆಡ್ಡು ಹೊಡೆದ ಜಿಲ್ಲಾಡಳಿತವು ರೈಲ್ವೆ ಮೇಲ್ಸೇತುವೆಯನ್ನು ಸಂಚಾರಕ್ಕೆ ಮುಕ್ತ ಮಾಡಿಕೊಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:02 pm, Mon, 5 February 24

5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ