AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಇಲಾಖೆಗೆ ಸೆಡ್ಡು ಹೊಡೆದು ತಡೆ ತೆರವುಗೊಳಿಸಿದ ಹಾಸನ ಜಿಲ್ಲಾಡಳಿತ; ವಾಹನ ಸಂಚಾರಕ್ಕೆ ಫ್ಲೈಓವರ್​ ಮುಕ್ತ

ಹಾಸನದ ಎನ್​ಆರ್ ವೃತ್ತದಿಂದ ಹೊಸ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಮೇಲ್ಸೇತುವೆಯ ಎರಡು ಪಥದ ರಸ್ತೆಯ ಸಂಪೂರ್ಣ ಕಾಮಗಾರಿ ಮುಗಿದಿದ್ದರೂ ಏಕಕಾಲದಲ್ಲಿ ಮೇಲ್ಸೇತುವೆ ಹಾಗೂ ಲೆವೆಲ್ ಕ್ರಾಸಿಂಗ್ ಚಾಲನೆಯಲ್ಲಿ ಇರಕೂಡದು ಎಂಬ ನಿಯಮ ಮುಂದಿಟ್ಟು ರೈಲ್ವೆ ಇಲಾಖೆ ಸಂಚಾರ ಸ್ಥಗಿತಗೊಳಿಸಿತ್ತು. ಇಲಾಖೆಗೆ ಸೆಡ್ಡು ಹೊಡೆದ ಜಿಲ್ಲಾಡಳಿತ, ರಾತ್ರೋರಾತ್ರಿ ತಡೆ ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಿದೆ.

ರೈಲ್ವೆ ಇಲಾಖೆಗೆ ಸೆಡ್ಡು ಹೊಡೆದು ತಡೆ ತೆರವುಗೊಳಿಸಿದ ಹಾಸನ ಜಿಲ್ಲಾಡಳಿತ; ವಾಹನ ಸಂಚಾರಕ್ಕೆ ಫ್ಲೈಓವರ್​ ಮುಕ್ತ
ರೈಲ್ವೆ ಇಲಾಖೆಗೆ ಸೆಡ್ಡು ಹೊಡೆದ ಹಾಸನ ಜಿಲ್ಲಾಡಳಿತ; ಕೊನೆಗೂ ವಾಹನ ಸಂಚಾರಕ್ಕೆ ಪ್ಲೈಓವರ್​ ಮುಕ್ತ
ಮಂಜುನಾಥ ಕೆಬಿ
| Edited By: |

Updated on:Feb 05, 2024 | 10:03 PM

Share

ಹಾಸನ, ಫೆ.5: ರೈಲ್ವೆ ಮೇಲ್ಸೇತುವೆ ವಿಚಾರವಾಗಿ ಹಾಸನ (Hassan) ಜಿಲ್ಲಾಡಳಿತ ಮತ್ತು ರೈಲ್ವೆ ಇಲಾಖೆ ನಡುವಿನ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ರೈಲ್ವೆ ಇಲಾಖೆಗೆ ಸೆಡ್ಡು ಹೊಡೆದ ಜಿಲ್ಲಾಡಳಿತ, ಮೇಲ್ಸೇತುವೆಗೆ ಹಾಕಿದ್ದ ತಡೆಯನ್ನು ರಾತ್ರೋರಾತ್ರಿ ತೆರವುಗೊಳಿಸಿ ವಾಹನ ಸಂಚಾರಕ್ಕೆ ಮುಕ್ತಮಾಡಿಕೊಟ್ಟಿದೆ.

ಹಾಸನದ ಎನ್ ಆರ್ ವೃತ್ತದಿಂದ ಹೊಸ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಮೇಲ್ಸೇತುವೆಯ ಎರಡು ಪಥದ ರಸ್ತೆಯ ಸಂಪೂರ್ಣ ಕಾಮಗಾರಿ ಪೂರ್ಣಗೊಂಡಿದೆ. ಆದರೂ ರೈಲ್ವೆ ಇಲಾಖೆ ಕುಂಟುನೆಪಹೇಳಿ ಸಂಚಾರ ಬಂದ್ ಮಾಡಿತ್ತು. ಏಕಕಾಲದಲ್ಲಿ ಮೇಲ್ಸೇತುವೆ ಹಾಗೂ ಲೆವೆಲ್ ಕ್ರಾಸಿಂಗ್ ಚಾಲನೆಯಲ್ಲಿ ಇರಬಾರದು ಎಂಬ ನಿಯಮ ಮುಂದಿಟ್ಟು ಸಂಚಾರ ಸ್ಥಗಿತಗೊಳಿಸಿತ್ತು.

ಇದನ್ನೂ ಓದಿ: ಹಾಸನ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡರ ವ್ಹೀಲಿಂಗ್, ವಾಹನ ಸವಾರರಿಗೆ ಫಜೀತಿ

ಸುಮಾರು 20 ದಿನಗಳ ಜಿಲ್ಲಾಡಳಿತ ಹಾಗೂ ರೈಲ್ವೆ ಇಲಾಖೆ ನಡುವಿನ ಮುಸುಕಿನ ಗುದ್ದಾಟಕ್ಕೆ ಇದೀಗ ತೆರೆಬಿದ್ದಿದೆ. ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಅವರು ತಮ್ಮ ಅಧಿಕಾರ ದಂಡ ಬಳಸಿ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ ಗೊಳಿಸಿದ್ದು, ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ಸಂಚಾರಕ್ಕೆ ಮುಕ್ತ ಗೊಳಿಸಿದ್ದ ರಸ್ತೆಯನ್ನ ಬಂದ್ ಮಾಡಿದ್ದ ಹಿನ್ನೆಲೆ ಜನರ ಆಕ್ರೋಶ ವ್ಯಕ್ತವಾಗಿತ್ತು. ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದೆ ಎನ್ನೋ ಆದಾರದ ಮೇಲೆ‌ ರೈಲ್ವೆ ಇಲಾಖೆಗೆ ಸೆಡ್ಡು ಹೊಡೆದ ಜಿಲ್ಲಾಡಳಿತವು ರೈಲ್ವೆ ಮೇಲ್ಸೇತುವೆಯನ್ನು ಸಂಚಾರಕ್ಕೆ ಮುಕ್ತ ಮಾಡಿಕೊಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:02 pm, Mon, 5 February 24

Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!