AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಇಲಾಖೆಗೆ ಸೆಡ್ಡು ಹೊಡೆದು ತಡೆ ತೆರವುಗೊಳಿಸಿದ ಹಾಸನ ಜಿಲ್ಲಾಡಳಿತ; ವಾಹನ ಸಂಚಾರಕ್ಕೆ ಫ್ಲೈಓವರ್​ ಮುಕ್ತ

ಹಾಸನದ ಎನ್​ಆರ್ ವೃತ್ತದಿಂದ ಹೊಸ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಮೇಲ್ಸೇತುವೆಯ ಎರಡು ಪಥದ ರಸ್ತೆಯ ಸಂಪೂರ್ಣ ಕಾಮಗಾರಿ ಮುಗಿದಿದ್ದರೂ ಏಕಕಾಲದಲ್ಲಿ ಮೇಲ್ಸೇತುವೆ ಹಾಗೂ ಲೆವೆಲ್ ಕ್ರಾಸಿಂಗ್ ಚಾಲನೆಯಲ್ಲಿ ಇರಕೂಡದು ಎಂಬ ನಿಯಮ ಮುಂದಿಟ್ಟು ರೈಲ್ವೆ ಇಲಾಖೆ ಸಂಚಾರ ಸ್ಥಗಿತಗೊಳಿಸಿತ್ತು. ಇಲಾಖೆಗೆ ಸೆಡ್ಡು ಹೊಡೆದ ಜಿಲ್ಲಾಡಳಿತ, ರಾತ್ರೋರಾತ್ರಿ ತಡೆ ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಿದೆ.

ರೈಲ್ವೆ ಇಲಾಖೆಗೆ ಸೆಡ್ಡು ಹೊಡೆದು ತಡೆ ತೆರವುಗೊಳಿಸಿದ ಹಾಸನ ಜಿಲ್ಲಾಡಳಿತ; ವಾಹನ ಸಂಚಾರಕ್ಕೆ ಫ್ಲೈಓವರ್​ ಮುಕ್ತ
ರೈಲ್ವೆ ಇಲಾಖೆಗೆ ಸೆಡ್ಡು ಹೊಡೆದ ಹಾಸನ ಜಿಲ್ಲಾಡಳಿತ; ಕೊನೆಗೂ ವಾಹನ ಸಂಚಾರಕ್ಕೆ ಪ್ಲೈಓವರ್​ ಮುಕ್ತ
ಮಂಜುನಾಥ ಕೆಬಿ
| Edited By: Rakesh Nayak Manchi|

Updated on:Feb 05, 2024 | 10:03 PM

Share

ಹಾಸನ, ಫೆ.5: ರೈಲ್ವೆ ಮೇಲ್ಸೇತುವೆ ವಿಚಾರವಾಗಿ ಹಾಸನ (Hassan) ಜಿಲ್ಲಾಡಳಿತ ಮತ್ತು ರೈಲ್ವೆ ಇಲಾಖೆ ನಡುವಿನ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ರೈಲ್ವೆ ಇಲಾಖೆಗೆ ಸೆಡ್ಡು ಹೊಡೆದ ಜಿಲ್ಲಾಡಳಿತ, ಮೇಲ್ಸೇತುವೆಗೆ ಹಾಕಿದ್ದ ತಡೆಯನ್ನು ರಾತ್ರೋರಾತ್ರಿ ತೆರವುಗೊಳಿಸಿ ವಾಹನ ಸಂಚಾರಕ್ಕೆ ಮುಕ್ತಮಾಡಿಕೊಟ್ಟಿದೆ.

ಹಾಸನದ ಎನ್ ಆರ್ ವೃತ್ತದಿಂದ ಹೊಸ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಮೇಲ್ಸೇತುವೆಯ ಎರಡು ಪಥದ ರಸ್ತೆಯ ಸಂಪೂರ್ಣ ಕಾಮಗಾರಿ ಪೂರ್ಣಗೊಂಡಿದೆ. ಆದರೂ ರೈಲ್ವೆ ಇಲಾಖೆ ಕುಂಟುನೆಪಹೇಳಿ ಸಂಚಾರ ಬಂದ್ ಮಾಡಿತ್ತು. ಏಕಕಾಲದಲ್ಲಿ ಮೇಲ್ಸೇತುವೆ ಹಾಗೂ ಲೆವೆಲ್ ಕ್ರಾಸಿಂಗ್ ಚಾಲನೆಯಲ್ಲಿ ಇರಬಾರದು ಎಂಬ ನಿಯಮ ಮುಂದಿಟ್ಟು ಸಂಚಾರ ಸ್ಥಗಿತಗೊಳಿಸಿತ್ತು.

ಇದನ್ನೂ ಓದಿ: ಹಾಸನ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡರ ವ್ಹೀಲಿಂಗ್, ವಾಹನ ಸವಾರರಿಗೆ ಫಜೀತಿ

ಸುಮಾರು 20 ದಿನಗಳ ಜಿಲ್ಲಾಡಳಿತ ಹಾಗೂ ರೈಲ್ವೆ ಇಲಾಖೆ ನಡುವಿನ ಮುಸುಕಿನ ಗುದ್ದಾಟಕ್ಕೆ ಇದೀಗ ತೆರೆಬಿದ್ದಿದೆ. ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಅವರು ತಮ್ಮ ಅಧಿಕಾರ ದಂಡ ಬಳಸಿ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ ಗೊಳಿಸಿದ್ದು, ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ಸಂಚಾರಕ್ಕೆ ಮುಕ್ತ ಗೊಳಿಸಿದ್ದ ರಸ್ತೆಯನ್ನ ಬಂದ್ ಮಾಡಿದ್ದ ಹಿನ್ನೆಲೆ ಜನರ ಆಕ್ರೋಶ ವ್ಯಕ್ತವಾಗಿತ್ತು. ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದೆ ಎನ್ನೋ ಆದಾರದ ಮೇಲೆ‌ ರೈಲ್ವೆ ಇಲಾಖೆಗೆ ಸೆಡ್ಡು ಹೊಡೆದ ಜಿಲ್ಲಾಡಳಿತವು ರೈಲ್ವೆ ಮೇಲ್ಸೇತುವೆಯನ್ನು ಸಂಚಾರಕ್ಕೆ ಮುಕ್ತ ಮಾಡಿಕೊಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:02 pm, Mon, 5 February 24

Follow Us
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ