AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan News: ಕರ್ತವ್ಯ ಲೋಪವೆಸಗಿದ ಆರೋಪ, ಒಂದೇ ತಾಲೂಕಿನ ಮೂವರು ಪಿಡಿಒಗಳು ಸಸ್ಪೆಂಡ್

ಸಗಿದ ಆರೋಪದ ಮೇಲೆ ಮೂವರು ಪಿಡಿಒಗಳನ್ನು ಅಮಾನತು ಮಾಡಿ ಹಾಸನ ಜಿಲ್ಲಾ ಪಂಚಾಯತಿ ಸಿಇಒ ಪೂರ್ಣಿಮಾ ಅವರು ಆದೇಶ ಹೊರಡಿಸಿದ್ದಾರೆ.

Hassan News: ಕರ್ತವ್ಯ ಲೋಪವೆಸಗಿದ ಆರೋಪ, ಒಂದೇ ತಾಲೂಕಿನ ಮೂವರು ಪಿಡಿಒಗಳು ಸಸ್ಪೆಂಡ್
ಪ್ರಾತಿನಿಧಿಕ ಚಿತ್ರ
ಮಂಜುನಾಥ ಕೆಬಿ
| Edited By: |

Updated on: Jul 13, 2023 | 10:36 AM

Share

ಹಾಸನ: ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಮೂವರು ಪಿಡಿಒ(PDO)ಗಳನ್ನು ಅಮಾನತು(Suspension) ಮಾಡಿ ಹಾಸನ ಜಿಲ್ಲಾ ಪಂಚಾಯತಿ ಸಿಇಒ ಪೂರ್ಣಿಮಾ ಅವರು ಆದೇಶ ಹೊರಡಿಸಿದ್ದಾರೆ. ಸರ್ಕಾರಿ ನಿವೇಶನವನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿದ ಆರೋಪ‌ ಕೇಳಿಬಂದಿತ್ತು. ಈ ಹಿನ್ನಲೆ ಡಿ.ಕಾಳೇನಹಳ್ಳಿ ಪಿಡಿಒ C.N.ನವೀನ್, ಕೆಂಬಾಳು ಪಿಡಿಒ ಕೃಷ್ಣೇಗೌಡ, ಡಿ.ಬಳದರೆ ಹಾಗೂ ದಿಂಡಗೂರು ಪಿಡಿಒ ರಾಮಸ್ವಾಮಿ ಅಮಾನತುಗೊಂಡವರು. ಈ ಮೂವರು ಚನ್ನರಾಯಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಪಿಡಿಒ ಆಗಿ ಕೆಲಸ ಮಾಡುತ್ತಿದ್ದರು. ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟ 18ಎ ನಿವೇಶನವನ್ನು ಖಾಸಗಿ ವ್ಯಕ್ತಿಗೆ ಮಾಡಿಕೊಟ್ಟಿದ್ದಾರೆಂಬ ಆರೋಪ‌ದ ಮೇಲೆ, ಅಮಾನತು ಮಾಡಲಾಗಿದೆ.

ಬಾಲಕಿ ಕಿಡ್ನ್ಯಾಪ್​ಗೆ ಯತ್ನಿಸಿದ್ದ ಆರೋಪಿ ಬಂಧನ

ಬೆಳಗಾವಿ: ನಿನ್ನೆ(ಜು.12) ಸಾಯಂಕಾಲ ಟ್ಯೂಷನ್​ಗೆ ಹೋಗುತ್ತಿದ್ದ 10 ವರ್ಷದ ಬಾಲಕಿಯನ್ನ ಅಪರಿಚಿತ ವ್ಯಕ್ತಿಯೊರ್ವ ಅಪಹರಿಸಲು ಯತ್ನಿಸಿದ ಘಟನೆ ನಡೆದಿತ್ತು. ಈ ಕುರಿತು ಪೊಲೀಸ್​ ಠಾಣೆಗೆ ದೂರು ಬಂದ ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಸಿಸಿಟಿವಿ ಆಧರಿಸಿ ಖಡೇಬಜಾರ್​ನಲ್ಲಿ ಆರೋಪಿ ಗಜಾನನ ಪಾಟೀಲ್(35) ಎಂಬಾತನನ್ನ ಅರೆಸ್ಟ್ ಬಂಧಿಸಿದ್ದಾರೆ. ಬೆಳಗಾವಿಯ ಮಾರುತಿ ನಗರದ ನಿವಾಸಿಯಾದ ಆರೋಪಿಯನ್ನ ಎಸಿಪಿ ಅರುಣ್‌ ಕುಮಾರ್​​ ಕೋಳೂರ್​​ ಅವರು ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ:Kalaburagi News: ಬಾಡಿಗೆ ಶಿಕ್ಷಕಿ ಮೂಲಕ ಮಕ್ಕಳಿಗೆ ಪಾಠ ಮಾಡಿಸಿದ ಶಿಕ್ಷಕ ಅಮಾನತು

ಜಮೀನಿಗೆ ತೆರಳಿದ್ದ ರೈತನ ಮೇಲೆ ಕರಡಿ ದಾಳಿ

ತುಮಕೂರು: ಜಮೀನಿಗೆ ತೆರಳಿದ್ದ ರೈತನ ಮೇಲೆ ಕರಡಿ ದಾಳಿ ಮಾಡಿದ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಎತ್ತಿನಹಳ್ಳಿಯಲ್ಲಿ ನಡೆದಿದೆ. ಪ್ರತಾಪ್​ ರೆಡ್ಡಿ(45)ಕರಡಿ ದಾಳಿಗೊಳಗಾದ ರೈತ. ಗಾಯಗೊಂಡ ರೈತ ಪ್ರತಾಪ್​ ರೆಡ್ಡಿಗೆ ಪಾವಗಡ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ವಿಷಯ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ತೆರಳಿ ಗಾಯಾಳು ಆರೋಗ್ಯ ವಿಚಾರಿಸಿದ್ದಾರೆ. ಈ ಕುರಿತು ಪಾವಗಡ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ 

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ